ಸಂಗ್ರಹ ಚಿತ್ರ 
ದೇಶ

ಗಲ್ಲಿಗೇರಿಸುತ್ತಾರೆಂದರೆ ಅದಕ್ಕಿಂತಲೂ ತುರ್ತು ವಿಚಾರ ಮತ್ತೊಂದಿಲ್ಲ:  ಅಪರಾಧಿ ಮುಕೇಶ್ ಅರ್ಜಿ ತುರ್ತು ವಿಚಾರಣೆಗೆ ಸುಪ್ರೀಂ ಸಮ್ಮತಿ

ನಿರ್ಭಯಾ ಹತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರಪತಿಗಳು ಕ್ಷಮಾದಾನ ಅರ್ಜಿ ತಿರಸ್ಕರಿಸಿದ್ದನ್ನು ಪ್ರಶ್ನಿಸಿ ಅಪರಾಧಿ ಮುಕೇಶ್ ಕುಮಾರ್ ಸಿಂಗ್ ಸಲ್ಲಿಸಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂಕೋರ್ಟ್ ಸೋಮವಾರ ಸಮ್ಮತಿ ಸೂಚಿಸಿದೆ. 

ನವದೆಹಲಿ: ನಿರ್ಭಯಾ ಹತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರಪತಿಗಳು ಕ್ಷಮಾದಾನ ಅರ್ಜಿ ತಿರಸ್ಕರಿಸಿದ್ದನ್ನು ಪ್ರಶ್ನಿಸಿ ಅಪರಾಧಿ ಮುಕೇಶ್ ಕುಮಾರ್ ಸಿಂಗ್ ಸಲ್ಲಿಸಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂಕೋರ್ಟ್ ಸೋಮವಾರ ಸಮ್ಮತಿ ಸೂಚಿಸಿದೆ. 

ಯಾರನ್ನಾದರೂ ಗಲ್ಲಿಗೇರಿಸುತ್ತಿದ್ದಾರೆಂದೆ ಅದಕ್ಕಿಂದಲೂ ತುರ್ತು ವಿಚಾರ ಮತ್ತೊಂದಿಲ್ಲ ಎಂದು ಹೇಳಿರುವ ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೊಬಡೆ ನೇತೃತ್ವದ ಪೀಠ, ಮರಣದಂಡನೆ ಪ್ರಕರಣದ ವಿಚಾರಣೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ ಎಂದು ತಿಳಿಸಿದೆ. ಅಲ್ಲದೆ, ಗಲ್ಲಿಗೇರಿಸಲು ನಿರ್ಧರಿಸಲಾಗಿರುವ ಕಾರಣವನ್ನು ಉಲ್ಲೇಖಿಸುವ ಅಧಿಕಾರಿಗಳನ್ನು ಸಂಪರ್ಕಿಸುವಂತೆ ಸಿಂಗ್ ಪರ ವಕೀಲರಿಗೆ ಸೂಚಿಸಿದ್ದಾರೆ. 

ನಿರ್ಭಯಾ ಪ್ರಕರಣದ ನಾಲ್ವರು ಅಪರಾಧಿಗಳಿಗೆ ಫೆಬ್ರವರಿ 1 ರ ಬೆಳಿಗ್ಗೆ 6 ಗಂಟೆಗೆ ಗಲ್ಲಿಗೇರಿಸಲು ದಿನಾಂಕ ಹಾಗೂ ಸಮಯ ನಿಗದಿಯಾಗಿದೆ. ಅಪರಾಧಿಗಳನ್ನು ಗಲ್ಲಿಗೇರಿಸುವಂತೆ ದೆಹಲಿಯ ಪಾಟಿಯಾಲ ಹೌಸ್ ನ್ಯಾಯಾಲಯ ವಾರೆಂಟ್ ಜಾರಿ ಮಾಡಿತ್ತು. 

ಈ ನಡುವೆ ಪ್ರಕರಣದ ಅಪರಾಧಿಯಾಗಿರುವ ಮುಕೇಶ್ ಕ್ಷಮಾದಾನ ಅರ್ಜಿಯನ್ನು ಸಲ್ಲಿಸಿದ್ದ. ಈ ಅರ್ಜಿಯನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಜನವರಿ 17 ರಂದು ತಿರಸ್ಕರಿಸಿದ್ದರು. ಇದನ್ನು ಪ್ರಶ್ನಿಸಿ ಜನವರಿ 25 ರಂದು ಮುಕೇಶ್ ಪರ ವಕೀಲರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಈ ಅರ್ಜಿಯ ತುರ್ತು ವಿಚಾರಣೆ ನಡೆಸಲು ಸುಪ್ರೀಂಕೋರ್ ಸಮ್ಮತಿ ನೀಡಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಕುರ್ಚಿ ಕಸರತ್ತು: ಸಮಸ್ಯೆಗೆ ಪರಿಹಾರ ಇದ್ದೇ ಇರುತ್ತದೆ, ರಾಹುಲ್-ಸೋನಿಯಾ ಜೊತೆ ಚರ್ಚಿಸಿ ಗೊಂದಲ ಬಗೆಹರಿಸುವೆ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ: ಸಿದ್ದುಗೆ ಪರೋಕ್ಷ ಟಾಂಗ್ ಕೊಟ್ಟರೇ ಡಿಕೆಶಿ..?

ಅಮೆರಿಕ ಶಕ್ತಿ ಕೇಂದ್ರ ಶ್ವೇತಭವನ ಬಳಿ ಇಬ್ಬರು ಯುಎಸ್ ರಾಷ್ಟ್ರೀಯ ಗಾರ್ಡ್ ಗಳ ಮೇಲೆ ಗುಂಡಿನ ದಾಳಿ: ಶಂಕಿತನ ಗುರುತು ಪತ್ತೆ

ಕಾಂಗ್ರೆಸ್ ಸರ್ಕಾರ ಪತನಗೊಂಡರೆ, ಡಿಕೆಶಿಗೆ ಬೆಂಬಲ ಕೊಡಲು BJP ಸಿದ್ಧ: ಡಿ.ವಿ.ಸದಾನಂದ ಗೌಡ

SIR ಒತ್ತಡ: ಮದುವೆಗೆ ಒಂದು ದಿನ ಮೊದಲು ಆತ್ಮಹತ್ಯೆಗೆ ಶರಣಾದ ಯುಪಿ ಸಿಬ್ಬಂದಿ!

SCROLL FOR NEXT