ಸಂಗ್ರಹ ಚಿತ್ರ 
ದೇಶ

ಫೆ.8ರಂದು ದೆಹಲಿ ಜನ ಪ್ರೀತಿಯಿಂದ ಮತಯಂತ್ರದ ಬಟನ್ ಒತ್ತಲಿದ್ದಾರೆ: ಅಮಿತ್ ಶಾಗೆ ಪ್ರಶಾಂತ್ ಕಿಶೋರ್ ಟಾಂಗ್

ಫೆಬ್ರವರಿ 8ರಂದು ದೆಹಲಿ ಜನತೆ ಪ್ರೀತಿಯಿಂದ ಮತಯಂತ್ರದ ಬಟನ್ ಒತ್ತಲ್ಲಿದ್ದಾರೆ ಎಂದು ಜೆಡಿಯು ನಾಯಕ ಪ್ರಶಾಂತ್ ಕಿಶೋರ್ ಹೇಳಿದ್ದಾರೆ.

ನವದೆಹಲಿ: ಫೆಬ್ರವರಿ 8ರಂದು ದೆಹಲಿ ಜನತೆ ಪ್ರೀತಿಯಿಂದ ಮತಯಂತ್ರದ ಬಟನ್ ಒತ್ತಲ್ಲಿದ್ದಾರೆ ಎಂದು ಜೆಡಿಯು ನಾಯಕ ಪ್ರಶಾಂತ್ ಕಿಶೋರ್ ಹೇಳಿದ್ದಾರೆ.

ದೆಹಲಿ ವಿಧಾನಸಭೆ ಚುನಾವಣೆ ಮತದಾನಕ್ಕೆ ದಿನಗಣನೆ ಆರಂಭವಾಗಿರುವಂತೆಯೇ ಇತ್ತ ರಾಜಕೀಯ ಪಕ್ಷಗಳ ನಾಯಕರ ವಾಕ್ಸಮರ ಮುಂದುವರೆದಿದೆ. ಈ ಹಿಂದೆ ಸಿಎಎ ವಿಚಾರವಾಗಿ ಬಿಜೆಪಿ, ಕೇಂದ್ರ ಸರ್ಕಾರ ಮತ್ತು ಅಮಿತ್ ಶಾ ವಿರುದ್ಧ ಕಿಡಿಕಾರಿದ್ದ ಪ್ರಶಾಂತ್ ಕಿಶೋರ್ ಅವರು ಇದೀಗ ದೆಹಲಿ ಚುನಾವಣೆ ಕುರಿತಂತೆ ಅಮಿತ್ ಶಾ ಅವರ ಕಾಲೆಳೆಯುವ ಪ್ರಯತ್ನ ಮಾಡಿದ್ದಾರೆ.

'ಫೆಬ್ರವರಿ 8ರಂದು ದೆಹಲಿ ಜನತೆ ಪ್ರೀತಿಯಿಂದ ಮತಯಂತ್ರದ ಬಟನ್ ಒತ್ತಲ್ಲಿದ್ದಾರೆ. ಸಣ್ಣ ಪ್ರಮಾಣದಲ್ಲಿ ದೊಡ್ಡ ಆಘಾತಕ್ಕೆ ಸಿದ್ಧರಾಗಿ. ಸಹೋದರತ್ವ ಮತ್ತು ಒಗ್ಗಟ್ಟು ಅಳಿವಿನಂಚಿನಲ್ಲಿಲ್ಲ. ನ್ಯಾಯ, ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವ ಎಂದು ಪ್ರಶಾಂತ್ ಕಿಶೋರ್ ಟ್ವೀಟ್ ಮಾಡಿದ್ದಾರೆ.

ಈ ಹಿಂದೆ ಭಾನುವಾರ ದಹೆಲಿಯಲ್ಲಿ ಚುನಾವಣಾ ಭಾಷಣ ಮಾಡಿದ್ದ ಅಮಿತ್ ಶಾ ಅವರು, ಶಾಹೀನ್ ಬಾಗ್ ಪ್ರತಿಭಟನೆ ಹೊರತಾಗಿಯೂ ದೆಹಲಿ ಜನತೆ ಬಿಜೆಪಿ ಪರವಾಗಿ ಮತದಾನ ಮಾಡಲಿದ್ದಾರೆ ಎಂದು ಹೇಳಿದ್ದರು.

ಬಿಜೆಪಿ ಸರ್ಕಾರದ ಸಿಎಎ ಕಾಯ್ದೆಯನ್ನು ವಿರೋಧಿಸಿದ್ದ ಪ್ರಶಾಂತ್ ಕಿಶೋರ್ ಅದನ್ನು ರಾಜ್ಯಸಭೆಯಲ್ಲಿ ಬೆಂಬಲಿಸಿದ್ದ ತಮ್ಮದೇ ಪಕ್ಷದ ಕಾರ್ಯ ವೈಖರಿ ಕುರಿತೂ ಟೀಕೆ ಮಾಡಿ ಸುದ್ದಿಯಾಗಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT