ಸಾಂದರ್ಭಿಕ ಚಿತ್ರ 
ದೇಶ

ನಾಗ್ಪುರ್: 19 ವರ್ಷದ ಯುವತಿ ಮೇಲೆ ಅತ್ಯಾಚಾರ, ಗುಪ್ತಾಂಗಕ್ಕೆ ರಾಡ್ ಹಾಕಿ ಪೈಶಾಚಿಕ ಕೃತ್ಯ!

19 ವರ್ಷದ ಯುವತಿ ಮೇಲೆ ಮೇಲೆ ಅತ್ಯಾಚಾರವೆಸಗಿದ ಕಾಮುಕ, ಬಳಿಕ ಆಕೆಯ ಗುಪ್ತಾಂಗಕ್ಕೆ ಕಬ್ಬಿಣದ ರಾಡ್ ತುರುಕಿ ಪೈಶಾಚಿಕ ಕೃತ್ಯವೆಸಗಿರುವ ಘಟನೆ ಮಹಾರಾಷ್ಟ್ರದ ನಾಗ್ಪುರದ ಪರ್ಡಿ ಪ್ರದೇಶದಲ್ಲಿ ನಡೆದಿದೆ.

ನಾಗ್ಪುರ್: 19 ವರ್ಷದ ಯುವತಿ ಮೇಲೆ ಮೇಲೆ ಅತ್ಯಾಚಾರವೆಸಗಿದ ಕಾಮುಕ, ಬಳಿಕ ಆಕೆಯ ಗುಪ್ತಾಂಗಕ್ಕೆ ಕಬ್ಬಿಣದ ರಾಡ್ ತುರುಕಿ ಪೈಶಾಚಿಕ ಕೃತ್ಯವೆಸಗಿರುವ ಘಟನೆ ಮಹಾರಾಷ್ಟ್ರದ ನಾಗ್ಪುರದ ಪರ್ಡಿ ಪ್ರದೇಶದಲ್ಲಿ ನಡೆದಿದೆ.

ಜನವರಿ 21 ರಂದು ಈ ಆಘಾತಕಾರಿ ಘಟನೆ ನಡೆದಿದ್ದು, 52 ವರ್ಷದ ಯೋಗಿಲಾಲ್ ರಹಂಗದಾಳೆ ಎಂಬ ವ್ಯಕ್ತಿ ಯುವತಿ ಮೇಲೆ ಅತ್ಯಾಚಾರ ಎಸಗಿ, ಆಕೆ ಪ್ರಜ್ಞಾಹೀನಳಾದ ನಂತರ ಆಕೆಯ ಗುಪ್ತಾಂಗಕ್ಕೆ ಕಬ್ಬಿಣದ ರಾಡ್ ತುರುಕಿ ವಿಕೃತಿ ಮೆರೆದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾಮುಕ ಯೋಗಿಲಾಲ್ ರಹಂಗದಾಳೆಯನ್ನು ಪೊಲೀಸರು ಬಂಧಿಸಿದ್ದು, ಆರೋಪಿ ಮತ್ತು ಸಂತ್ರಸ್ತೆ ಹತ್ತಿ ಗಿರಣಿಯಲ್ಲಿ ಕೆಲಸ ಮಾಡುತ್ತಿದ್ದು, ಆರೋಪಿ ಮೇಲ್ವಿಚಾರಕನಾಗಿ ಕೆಲಸ ಮಾಡುತ್ತಿದ್ದರೆ ಸಂತ್ರಸ್ಥೆ ಕೂಲಿ ಕೆಲಸ ಮಾಡುತ್ತಿದ್ದಳು. ಯುವತಿ, ಯುವತಿಯ ಸಹೋದರ, ಆರೋಪಿ ಮತ್ತು ಮತ್ತೊಬ್ಬಳು ಯುವತಿ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದರು.

ಯುವತಿ ಅಣ್ಣ ಜನವರಿ 21ರಂದು ತನ್ನ ಊರಿಗೆ ತೆರಳಿದ್ದ ಸಂದರ್ಭದಲ್ಲಿ ಯೋಗಿಲಾಲ್ ಯುವತಿ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಇನ್ಸ್ ಪೆಕ್ಟರ್ ಸುನೀಲ್ ಚವಾಣ್ ತಿಳಿಸಿದ್ದಾರೆ.

ಯುವತಿ ರೂಂನಲ್ಲಿ ಒಬ್ಬಂಟಿಯಾಗಿ ಇರುವುದನ್ನು ಗಮನಿಸಿದ ರಂಗದಾಳೆ ರಾತ್ರಿ ಆಕೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ. ಆಕೆ ಪ್ರತಿರೋಧ ವ್ಯಕ್ತಪಡಿಸಿದಾಗ ಬಾಯಿಯೊಳಗೆ ಬಟ್ಟೆ ತುಂಬಿ ಅತ್ಯಾಚಾರ ಎಸಗಿದ್ದ. ಯುವತಿ ಪ್ರಜ್ಞಾಹೀನಳಾದ ನಂತರ ಆರೋಪಿ ಆಕೆಯ ಖಾಸಗಿ ಭಾಗದೊಳಕ್ಕೆ ಕಬ್ಬಿಣದ ರಾಡ್ ಅನ್ನು ತುರುಕಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ.

ಘಟನೆ ನಡೆದು ಮೂರು ದಿನಗಳ ಬಳಿಕ ಯುವತಿ ಈ ವಿಚಾರವನ್ನು ಅಣ್ಣನಿಗೆ ತಿಳಿಸಿದ್ದು, ಸೋಮವಾರ ಪೊಲೀಸರಿಗೆ ದೂರು ನೀಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT