ಶಾರ್ಜಿಲ್ ಇಮಾಮ್ 
ದೇಶ

ಬಿಹಾರ: ದೇಶದ್ರೋಹ ಪ್ರಕರಣ, ಸಿಎಎ ವಿರೋಧಿ ಹೋರಾಟಗಾರ ಶಾರ್ಜೀಲ್ ಇಮಾಮ್ ಬಂಧನ 

ಶಾಹೀನ್ ಬಾಗ್ ನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧದ ಪ್ರತಿಭಟನೆಯಿಂದಾಗಿ ಬೆಳಕಿಗೆ ಬಂದಿರುವ ವಿವಾದಾತ್ಮಾಕ ಜೆಎನ್ ಯು  ವಿದ್ಯಾರ್ಥಿ ಹಾಗೂ ಹೋರಾಟಗಾರ ಶಾರ್ಜೀಲ್ ಇಮಾಮ್ ಅವರನ್ನು ದೇಹದ್ರೋಹ ಪ್ರಕರಣದಲ್ಲಿ ಜಿಹಾನ್ ಬಾದ್ ನಲ್ಲಿಂದು ಬಂಧಿಸಲಾಗಿದೆ

ಪಾಟ್ನಾ: ಶಾಹೀನ್ ಬಾಗ್ ನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧದ ಪ್ರತಿಭಟನೆಯಿಂದಾಗಿ ಬೆಳಕಿಗೆ ಬಂದಿರುವ ವಿವಾದಾತ್ಮಾಕ ಜೆಎನ್ ಯು  ವಿದ್ಯಾರ್ಥಿ ಹಾಗೂ ಹೋರಾಟಗಾರ ಶಾರ್ಜೀಲ್ ಇಮಾಮ್ ಅವರನ್ನು ದೇಹದ್ರೋಹ ಪ್ರಕರಣದಲ್ಲಿ ಜಿಹಾನ್ ಬಾದ್ ನಲ್ಲಿಂದು ಬಂಧಿಸಲಾಗಿದೆ

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನೆ ಸಂದರ್ಭದಲ್ಲಿ ಪ್ರಚೋದನಾಕರಿ ಭಾಷಣದ ಆರೋಪದ ಮೇರೆಗೆ ದೇಹದ್ರೋಹ ಪ್ರಕರಣ ದಾಖಲಿಸಿದ್ದ ದೆಹಲಿ ಪೊಲೀಸರು ತಲೆಮರೆಸಿಕೊಂಡಿದ್ದ ಇಮಾಮ್ ಬಂಧನಕ್ಕಾಗಿ ತೀವ್ರ ಹುಡುಕಾಟ ನಡೆಸುತ್ತಿದ್ದರು. 

ಶಾರ್ಜೀಲ್ ಇಮಾಮ್ ನೇಪಾಳಕ್ಕೆ ಪಲಾಯನ ಮಾಡಿರಬೇಕೆಂದು ಪೊಲೀಸರು ಭಯಗೊಂಡಿದ್ದರು. ಒಂದು ವೇಳೆ ಅವರು ನೇಪಾಳಕ್ಕೆ ಪಲಾಯನ ಮಾಡಿದರೆ ಭಾರತಕ್ಕೆ ವಾಪಾಸ್ ತರುವುದು ಕಷ್ಟಕರವಾಗಲಿದೆ ಎಂದು ಉನ್ನತ ಪೊಲೀಸ್ ಅಧಿಕಾರಿಯೊಬ್ಬರು ಸೋಮವಾರ ಹೇಳಿದ್ದರು. 
 
ಮುಂಬೈ, ದೆಹಲಿ, ಪಾಟ್ನಾ ಮತ್ತಿತರ ಕಡೆಗಳಲ್ಲಿ ದೆಹಲಿ ಪೊಲೀಸರ ತಂಡ  ಬಹುಹಂತದ ದಾಳಿ ನಡೆಸಿ ಇಮಾಮ್ ಅವರನ್ನು ಹುಡುಕುತ್ತಿದ್ದರು. ಆದರೆ, ಆತ ಸಿಕ್ಕಿರಲಿಲ್ಲ.  ಜನವರಿ 27ರಂದು ರಾತ್ರಿ 7ರಿಂದ 8 ಗಂಟೆ ಸಂದರ್ಭದ ಬಿಹಾರದ ಪುಲ್ವಾರಿಷರೀಫ್ ನಲ್ಲಿ ನಲ್ಲಿ ಶಾರ್ಜೀಲ್ ಕೊನೆಯ ಬಾರಿಗೆ ಕಾಣಿಸಿಕೊಂಡಿದ್ದರು ಎಂದು ಅವರು ಅಧಿಕಾರಿ ತಿಳಿಸಿದ್ದರು. 

ಶಾರ್ಜೀಲ್ ಬಂಧನಕ್ಕಾಗಿ ಐದು ತಂಡ ರಚಿಸಲಾಗಿದ್ದು,  ಮಹಾರಾಷ್ಟ್ರ, ದೆಹಲಿ, ಬಿಹಾರದಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗಿದೆ. ಆತನ ಅಡಗಿರುವ ಸ್ಥಳದ ಬಗ್ಗೆ ಮಾಹಿತಿ ನೀಡುವಂತೆ ಅವರ ಕುಟುಂಬ ಸದಸ್ಯರನ್ನು ಕೇಳಲಾಗಿದೆ ಎಂದು ದೆಹಲಿ ಪೊಲೀಸ್ ವಕ್ತಾರರು ಬೆಳಗ್ಗೆಯಷ್ಟೇ ಹೇಳಿಕೆ ನೀಡಿದ್ದರು. 

ಎನ್ ಆರ್ ಸಿ ಅನುಷ್ಠಾನ ಸ್ಥಗಿತ ಹಾಗೂ ಈಶಾನ್ಯ ರಾಜ್ಯವನ್ನು ಭಾರತದಿಂದ ವಿಭಜನೆ ಕುರಿತಂತೆ ಜನವರಿ 25 ರಂದು ಶಾರ್ಜೀಲ್ ಮಾತನಾಡಿರುವ ವಿಡಿಯೋವೊಂದು ವೈರಲ್ ಆಗಿತ್ತು. ಗಣರಾಜ್ಯೋತ್ಸವ ಸಂದರ್ಭದಲ್ಲಿ ಪ್ರಚೋದನಾಕಾರಿ ಹೇಳಿಕೆ ಹಿನ್ನೆಲೆಯಲ್ಲಿ ದೆಹಲಿ ಅಪರಾಧ ವಿಭಾಗದ ಪೊಲೀಸರು  ಇಮಾಮ್ ವಿರುದ್ಧ ಪ್ರಕರಣ ದಾಖಲಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

SCROLL FOR NEXT