ದೇಶ

ಹಣ ದುರ್ಬಳಕೆ ಆರೋಪ: ಆಪ್ ಶಾಸಕ ಅಮಾನತುಲ್ಲಾ ಖಾನ್ ವಿರುದ್ಧ ಕೇಸ್ ದಾಖಲಿಸಿದ ಎಸಿಬಿ

Lingaraj Badiger

ನವದೆಹಲಿ: ದೆಹಲಿ ವಿಧಾನಸಭೆಗೆ ಚುನಾವಣೆ ನಡೆಯುತ್ತಿರುವ ಮಧ್ಯೆಯೇ ಅನುದಾನ ದುರ್ಬಳಕೆ ಮಾಡಿಕೊಂಡ ಆರೋಪದ ಮೇಲೆ ಆಡಳಿತರೂಢ ಆಮ್ ಆದ್ಮಿ ಪಕ್ಷದ ಶಾಸಕ ಅಮಾನತುಲ್ಲಾ ಖಾನ್ ಅವರ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಕೇಸ್ ದಾಖಲಿಸಿದೆ.

ಖಾನ್ ವಿರುದ್ಧ ವಕ್ಫ್ ಮಂಡಳಿಯ ಅನುದಾನ ದುರ್ಬಳಕೆ ಮತ್ತು ಅಕ್ರಮ ನೇಮಕಾತಿ ಆರೋಪ ಕೇಳಿಬಂದಿದೆ.

ನಾವು ಅಮಾನತುಲ್ಲಾ ಖಾನ್ ಅವರ ವಿರುದ್ಧ ಎಫ್ಐಆರ್ ದಾಖಲಿಸಿದ್ದೇವೆ. ಪ್ರಕರಣ ತನಿಖೆ ಆರಂಭಿಸಿದ್ದು, ಅವರು ಎಷ್ಟು ಪ್ರಮಾಣದ ಹಣ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂಬುದನ್ನು ಪರಿಶೀಲಿಸಲಾಗುತ್ತಿದೆ ಎಂದು ಹೆಸರು ಹೇಳಲು ಇಚ್ಚಿಸದ ಎಸಿಬಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

SCROLL FOR NEXT