ದೇಶ

ಸಿಎಎ ವಿರೋಧಿ ಪ್ರತಿಭಟನಾಕಾರರು-ತೃಣಮೂಲ ಬೆಂಬಲಿಗರ ಘರ್ಷಣೆ, ಗುಂಡೇಟಿಗೆ ಇಬ್ಬರು ಬಲಿ

ಸಿಟಿಜನ್ ಫೋರಮ್ ನ ಸಿಎಎ ವಿರೋಧಿ ಪ್ರತಿಭಟನಾಕಾರರು ಮತ್ತು ತೃಣಮೂಲ ಕಾಂಗ್ರೆಸ್ ಬೆಂಬಲಿಗರ ನಡುವೆ ನಡೆದ ಘರ್ಷಣೆಯಲ್ಲಿ ಇಬ್ಬರು ಗುಂಡೇಟಿನಿಂದ ಸತ್ತು ಇತರ ಮೂವರು ಗುಂಡೇಟಿನಿಂದ ಗಾಯಗೊಂಡಿರುವ ಘಟನೆ ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆ ಜಲಂಗಿಯಲ್ಲಿ  ನಡೆದಿದೆ.

ಕೋಲ್ಕತ್ತಾ: ಸಿಟಿಜನ್ ಫೋರಮ್ ನ ಸಿಎಎ ವಿರೋಧಿ ಪ್ರತಿಭಟನಾಕಾರರು ಮತ್ತು ತೃಣಮೂಲ ಕಾಂಗ್ರೆಸ್ ಬೆಂಬಲಿಗರ ನಡುವೆ ನಡೆದ ಘರ್ಷಣೆಯಲ್ಲಿ ಇಬ್ಬರು ಗುಂಡೇಟಿನಿಂದ ಸತ್ತು ಇತರ ಮೂವರು ಗುಂಡೇಟಿನಿಂದ ಗಾಯಗೊಂಡಿರುವ ಘಟನೆ ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆ ಜಲಂಗಿಯಲ್ಲಿ  ನಡೆದಿದೆ.

ರಸ್ತೆ ತಡೆ ನಡೆಸಿದ್ದ ಪ್ರತಿಭಟನಾಕಾರರ ಮೇಲೆ  ಸ್ಥಳೀಯ ತೃಣಮೂಲ ಕಾಂಗ್ರೆಸ್ ನಾಯಕರು ಗುಂಡು ಹಾರಿಸಿ ಬಾಂಬ್‌ಗಳನ್ನು ಎಸೆದಿದ್ದಾರೆ ಎಂದು ಆರೋಪಿಸಲಾಗಿದೆ.

ರಾಜ್ಯಸಭೆಯಲ್ಲಿ ತಿದ್ದುಪಡಿ ಮಾಡಿದ ಪೌರತ್ವ ಕಾಯ್ದೆ ಜಾರಿಗೆ ಬಂದ ಕೆಲವೇ ದಿನಗಳಲ್ಲಿ ಸಿಟಿಜನ್ ಫೋರಮ್ ರಚನೆಯಾಗಿತ್ತು ಎಂದು ಪ್ರತಿಭಟನಾಕಾರರಲ್ಲಿ ಒಬ್ಬರಾದ ಇಮದುಲ್ ಹಕ್ ಹೇಳಿದ್ದಾರೆ. "ಇದು ರಾಜಕೀಯ-ವಿರೋಧಿ ವೇದಿಕೆಯಾಗಿದೆ. ತಿದ್ದುಪಡಿ ಮಾಡಿದ ಕಾಯ್ದೆಯನ್ನು ವಿರೋಧಿಸಿ ಬಂದ್ ಅನ್ನು ಕರೆಯಲಾಯಿತು ಮತ್ತು ನಾವು ಸ್ಥಳೀಯ ರಸ್ತೆಯನ್ನು ನಿರ್ಬಂದಿಸಿ ಧರಣಿ ನಡೆಸುತ್ತಿದ್ದೆವು. ಆಗ ಇದ್ದಕ್ಕಿದ್ದಂತೆ ಎರಡು ವಾಹನಗಳು ತೀವ್ರಗತಿಯಲ್ಲಿ ಆಗಮಿಸಿ ತೃಣಮೂಲ ಕಾಂಗ್ರೆಸ್ ಬೆಂಬಲಿಗರು ನಮ್ಮ ಮೇಲೆ ಗುಂಡು ಹಾರಿಸಿ ಬಾಂಬುಗಳನ್ನು ಎಸೆದರು." ಅವರು ಹೇಳಿದ್ದಾರೆ.

ಹೊಸದಾಗಿ ರೂಪುಗೊಂಡ ಈ ಫೋರಮ್ ಈ ಪ್ರದೇಶದಲ್ಲಿ ದೊಡ್ಡ ಪ್ರಮಾಣದ ಪ್ರತಿಭಟನೆಯನ್ನು ಆಯೋಜಿಸುತ್ತಿದೆ ಎಂದು ಆಡಳಿತ ಪಕ್ಷವು ಅರಿತಿದೆ.  "ಈ ಪ್ರದೇಶದ ತೃಣಮೂಲ ನಾಯಕರು ನಮ್ಮೊಂದಿಗೆ ಚಳವಳಿಗೆ ಸೇರಲು ಬಯಸಿದ್ದರು ಆದರೆ ನಮ್ಮ ವೇದಿಕೆ ರಾಜಕೀಯ-ವಿರೋಧಿಯಾದ ಕಾರಣ ನಾವು ಅವರನ್ನು ಸೇರಿಸಿಕೊಂಡಿಲ್ಲ. 

ತೃಣಮೂಲದ ಸ್ಥಳೀಯ ಬ್ಲಾಕ್ ಅಧ್ಯಕ್ಷರು ಈ ದಾಳಿಯನ್ನು ಮುನ್ನಡೆಸಿದರು ಮತ್ತು ರಸ್ತೆ ತಡೆ ಹಾಕಿದ ಸ್ಥಳವನ್ನು ತಲುಪಿದ ವಾಹನಗಳಲ್ಲಿ ಅವರಿದ್ದರು ಎಂದು ಆರೋಪಿಸಲಾಗಿದೆ. ಆದರೆ ತಮ್ಮ ಮೇಲಿನ ಆರೋಪವನ್ನು , ತಹಿರುದ್ದೀನ್ ಈ ಆರೋಪವನ್ನು ಅಲ್ಲಗಳದಿದ್ದಾರೆ "ಇದು ಸಿಪಿಎಂ ಮತ್ತು ಕಾಂಗ್ರೆಸ್ ಬೆಂಬಲಿಗರ ನಡುವಿನ ಘರ್ಷಣೆಯಾಗಿದೆ. ನಮ್ಮ ಬೆಂಬಲಿಗರು ಯಾರೂ ಇದರಲ್ಲಿ ಭಾಗಿಯಾಗಿಲ್ಲ." ಅವರು ಹೇಳಿದ್ದಾರೆ.

ಈ ನಡುವೆ "ಸಿಎಎ ವಿರುದ್ಧ ಜನರ ಆಂದೋಲನವನ್ನು ಹತ್ತಿಕ್ಕುವ ಬಿಜೆಪಿಯ ಯೋಜನೆಯನ್ನು ತೃಣಮೂಲ ಕಾಂಗ್ರೆಸ್ ಜಾರಿಗೊಳಿಸುತ್ತಿದೆ ಎಂದು ಈ ಘಟನೆ ಸಾಬೀತುಪಡಿಸಿತು ಎಂದು ಸಿಪಿಎಂ ಪೊಲಿಟ್‌ಬ್ಯುರೊ ಸದಸ್ಯ ಮೊಹಮ್ಮದ್ ಸೆಲೀಮ್  ಹೇಳಿದ್ದಾರೆ.

ಸಾವಿನ ಸುದ್ದಿ ಹರಡುತ್ತಿದ್ದಂತೆ, ಸಿಎಎ ವಿರೋಧಿ ಪ್ರತಿಭಟನಾಕಾರರು ಮೋಟಾರ್ ಬೈಕುಗಳಿಗೆ ಬೆಂಕಿ ಹಚ್ಚಿದ್ದಾರೆ. ಈ ಪ್ರದೇಶದಲ್ಲಿ ತೃಣಮೂಲ ಬೆಂಬಲಿಗರ ಒಡೆತನದ ಮನೆಗಳನ್ನು ದೋಚಿದ್ದಾರೆ. ಇದೀಗ ಪರಿಸ್ಥಿತಿ ಹತೋಟಿಗೆ ತರಲು ಪೋಲೀಸ್ ಪಡೆ ಹರಸಾಹಸ ನಡೆಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT