ದೇಶ

ಪ್ರತಿಷ್ಠೆ ಬೇಡ, ಸಿಎಎ ಹಿಂಪಡೆಯಿರಿ ಮೋದಿಗೆ ಸಿಎಂ ಭೂಪೇಶ್ ಪತ್ರ

ದೇಶದ ಉದ್ದಗಲಕ್ಕೂ ಭಾರಿ ಸಂಚಲನ, ತಲ್ಲಣ ಮೂಡಿಸಿರುವ ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಹಿಂಪಡೆಯುವಂತೆ ಚತ್ತಿಸ್ ಗಡದ ಮುಖ್ಯಮಂತ್ರಿ ಭೂಪೇಶ್ ಬಾಗೆಲ್ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಆಗ್ರಹಪಡಿಸಿದ್ದಾರೆ. 

ರಾಯ್‌ಪುರ: ದೇಶದ ಉದ್ದಗಲಕ್ಕೂ ಭಾರಿ ಸಂಚಲನ, ತಲ್ಲಣ ಮೂಡಿಸಿರುವ ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಹಿಂಪಡೆಯುವಂತೆ ಚತ್ತಿಸ್ ಗಡದ ಮುಖ್ಯಮಂತ್ರಿ ಭೂಪೇಶ್ ಬಾಗೆಲ್ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಆಗ್ರಹಪಡಿಸಿದ್ದಾರೆ. 

ಈ ಸಂಬಂಧ ಅವರು ಪತ್ರ ಬರೆದಿದ್ದು,ಈ ಕಾಯ್ದೆಯ ಪ್ರಸ್ತುತ ತಿದ್ದುಪಡಿಯು ಅಕ್ರಮ ವಲಸಿಗರ ವಿರುದ್ಧ ಧರ್ಮದ ಆಧಾರದ ಮೇಲೆ ತಾರತಮ್ಯ, ಅಸಮಾನತೆ ಉಂಟು ಮಾಡಲಿದೆ ಎಂಬ ಕಳವಳ ವ್ಯಕ್ತಪಡಿಸಿದ್ದಾರೆ. ಇದು ಭಾರತೀಯ ಸಂವಿಧಾನದ ಆಶಯಕ್ಕೆ, ತತ್ವಗಳಿಗೆ ವಿರುದ್ಧವಾಗಿದೆ. 

ಈ ಕಾಯಿದೆಯು ಇತರೆ ನೆರೆಯ ದೇಶಗಳಾದ ಶ್ರೀಲಂಕಾ, ಮ್ಯಾನ್ಮಾ ರ್ ನೇಪಾಳ ಮತ್ತು ಭೂತಾನ್ ನಿಂದ ವಲಸೆ ಬಂದವರಿಗೆ ಪೌರತ್ವ ನೀಡುವ ಅವಕಾಶ ಒದಗಿಸಿಲ್ಲ ಎಂದೂ ಅವರು ಬೊಟ್ಟು ಮಾಡಿದ್ದಾರೆ. ಚತ್ತೀಸ್‌ಗಗಡ ಮೂಲತಃ ಮೂಲತಃ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳನ್ನು ಒಳಗೊಂಡಿದೆ, ಅವರಲ್ಲಿ ಹೆಚ್ಚಿನ ಸಂಖ್ಯೆಯ ಜನರು ಬಡವರು, ಅಶಿಕ್ಷಿತರು ಮತ್ತು ಆರ್ಥಿಕ ಸಂಪನ್ಮೂಲದ ಕೊರತೆಯಿಂದ ನೊಂದಿದ್ದಾರೆ ಬೆಂದಿದ್ದಾರೆ ಹೊಂದಿದ್ದಾರೆ ಮತ್ತು ಆದ್ದರಿಂದ ಈ ಕಾಯಿದೆಯ ಅಗತ್ಯವಿರುವ ಜನರಿಗೆ ಅವರ ಅಗತ್ಯ ಪೂರ್ಣಗೊಳಿಸಲು ಕಷ್ಟವಾಗಲಿದೆ ಎಂದು ಅವರು ವಿವರಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT