ನಿರ್ಭಯಾ ಅಪರಾಧಿಗಳು 
ದೇಶ

ನಿರ್ಭಯಾ ಪ್ರಕರಣ: ನಾಲ್ವರು ಅಪರಾಧಿಗಳ ಗಲ್ಲು ಶಿಕ್ಷೆ ಜಾರಿಗೆ ತಡೆಯಾಜ್ಞೆ

ಮುಂದಿನ ಆದೇಶದವರೆಗೆ ನಿರ್ಭಯಾ ಸಾಮೂಹಿಕ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣದ ನಾಲ್ವರು ಅಪರಾಧಿಗಳಿಗೆ ಗಲ್ಲು ಶಿಕ್ಷೆ ಜಾರಿಗೊಳಿಸದಂತೆ ದೆಹಲಿ ಕೋರ್ಟ್ ಶುಕ್ರವಾರ ತಡೆಯಾಜ್ಞೆ ನೀಡಿದೆ.

ನವದೆಹಲಿ: ಮುಂದಿನ ಆದೇಶದವರೆಗೆ ನಿರ್ಭಯಾ ಸಾಮೂಹಿಕ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣದ ನಾಲ್ವರು ಅಪರಾಧಿಗಳಿಗೆ ಗಲ್ಲು ಶಿಕ್ಷೆ ಜಾರಿಗೊಳಿಸದಂತೆ ದೆಹಲಿ ಕೋರ್ಟ್ ಶುಕ್ರವಾರ ತಡೆಯಾಜ್ಞೆ ನೀಡಿದೆ.

ತನಗೆ ವಿಧಿಸಿರುವ ಗಲ್ಲುಶಿಕ್ಷೆಯನ್ನು ರದ್ದುಗೊಳಿಸುವಂತೆ ಕೋರಿ ಅಪರಾಧಿ ವಿನಯ್ ಕುಮಾರ್ ಶರ್ಮಾ ಸಲ್ಲಿಸಿರುವ ಅರ್ಜಿಯ ತೀರ್ಪನ್ನು ಕಾಯ್ದಿರಿಸಿದ ದೆಹಲಿಯ ಪಟಿಯಾಲ ಹೌಸ್ ಕೋರ್ಟ್, ಶರ್ಮಾ ಹಾಗೂ ಇತರೆ ಮೂವರು ಅಪರಾಧಿಗಳಿಗೂ ನಾಳೆ ಗಲ್ಲು ಶಿಕ್ಷೆ ಜಾರಿಗೊಳಿಸದಂತೆ ಆದೇಶಿಸಿದೆ.

ನಿರ್ಭಯಾ ಅಪರಾಧಿಗಳಿಗೆ ಮೇಲ್ಮನವಿಗಳನ್ನು ಸಲ್ಲಿಸಲು ಇನ್ನೂ ಕಾನೂನಿನಲ್ಲಿ ಅವಕಾಶವಿರುವ ಹಿನ್ನೆಲೆಯಲ್ಲಿ ಅವರನ್ನು ನೇಣಿಗೇರಿಸಲು ಸಮಯ ನಿಗದಿಪಡಿಸಿದ ಆದೇಶಕ್ಕೆ ತಡೆಯಾಜ್ಞೆ ನೀಡಬೇಕು ಎಂದು ಅರ್ಜಿದಾರರ ಪರ ವಕೀಲರು ಮನವಿ ಮಾಡಿದ್ದರು.

ದೆಹಲಿ ಬಂಧಿಖಾನೆ ನಿಯಮದ ಪ್ರಕಾರ, ಒಂದೇ ಅಪರಾಧದ ನಾಲ್ವರು ಆರೋಪಿಗಳಲ್ಲಿ ಯಾರೊಬ್ಬರ ಕಾನೂನು ಅವಕಾಶಗಳು ಬಾಕಿಯಿದ್ದರೂ, ಉಳಿದವರನ್ನು ಗಲ್ಲಿಗೇರಿಸುವಂತಿಲ್ಲ ಎಂದು ವಾದಿಸಿದರು.

ಆದರೆ ತಿಹಾರ್ ಜೈಲಾಧಿಕಾರಿಗಳು, ನ್ಯಾಯಾಲಯದ ಆದೇಶದಂತೆ ಉಳಿದ ಮೂವರನ್ನು ಗಲ್ಲಿಗೇರಿಸಬಹುದು ಎಂದು ವಾದ ಮಂಡಿಸಿದ್ದರು. ಜೈಲು ಅಧಿಕಾರಿಗಳ ವಾದ ಒಪ್ಪದ ಕೋರ್ಟ್, ನಾಲ್ವರು ಅಪರಾಧಿಗಳ ಗಲ್ಲು ಶಿಕ್ಷೆಗೆ ತಡೆಯಾಜ್ಞೆ ನೀಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಬಿಕಿನಿ ಧರಿಸಿರುವ ಮಹಿಳೆಯರ ಜೊತೆಗೆ ಸ್ಟೀಫನ್ ಹಾಕಿಂಗ್! Epstein ಫೈಲ್ಸ್ ನಲ್ಲಿ ಪೋಟೋ ಬಿಡುಗಡೆ

ಅಜಿತ್ ಪವಾರ್ ವಿಮಾನ ಪತನ ವಿಧ್ವಂಸಕ ಕೃತ್ಯವೋ ಅಥವಾ ನಿರ್ಲಕ್ಷ್ಯವೋ? ಸಿಐಡಿ ಹೇಳಿದ್ದೇನು?

'The Kerala Story 2: Goes Beyond' ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

SCROLL FOR NEXT