ರಕ್ಷಣಾತ್ಮಕವಾಗಿರುವುದು ಬೇಡ, ಸಂಸತ್ ನಲ್ಲಿ ಸಿಎಎಯನ್ನು ಬಲವಾಗಿ ಸಮರ್ಥಿಸಿಕೊಳ್ಳಿ: ಎನ್ ಡಿಎ ನಾಯಕರಿಗೆ ಪ್ರಧಾನಿ 
ದೇಶ

ರಕ್ಷಣಾತ್ಮಕವಾಗಿರುವುದು ಬೇಡ, ಸಂಸತ್ ನಲ್ಲಿ ಸಿಎಎಯನ್ನು ಬಲವಾಗಿ ಸಮರ್ಥಿಸಿಕೊಳ್ಳಿ: ಎನ್ ಡಿಎ ನಾಯಕರಿಗೆ ಪ್ರಧಾನಿ

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಸಿಎಎ ಬಗ್ಗೆ ರಕ್ಷಣಾತ್ಮಕವಾಗಿರುವುದು ಬೇಡ, ಬಲವಾಗಿ ಸಮರ್ಥಿಸಿಕೊಳ್ಳಿ ಎಂದು ಪ್ರಧಾನಿ ನರೇಂದ್ರ ಮೋದಿ ಎನ್ ಡಿಎ ನಾಯಕರಿಗೆ ಸೂಚನೆ ನೀಡಿದ್ದಾರೆ. 

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಸಿಎಎ ಬಗ್ಗೆ ರಕ್ಷಣಾತ್ಮಕವಾಗಿರುವುದು ಬೇಡ, ಬಲವಾಗಿ ಸಮರ್ಥಿಸಿಕೊಳ್ಳಿ ಎಂದು ಪ್ರಧಾನಿ ನರೇಂದ್ರ ಮೋದಿ ಎನ್ ಡಿಎ ನಾಯಕರಿಗೆ ಸೂಚನೆ ನೀಡಿದ್ದಾರೆ. 

ಸಂಸತ್ ಅಧಿವೇಶನದಲ್ಲಿ ಸಿಎಎ ವಿರುದ್ಧ ಪ್ರತಿಪಕ್ಷಗಳ ಟೀಕೆಗಳಿಗೆ ಆಕ್ರಮಣಕಾರಿಯಾಗಿ ಉತ್ತರ ನೀಡುವಂತೆ ಎನ್ ಡಿಎ ನಾಯಕರಿಗೆ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ ಹಾಗೂ ನಮಗೆ ಅಲ್ಪಸಂಖ್ಯಾತರು ದೇಶದ ಇತರ ನಾಗರಿಕರಂತೆಯೇ ಎಂದು ಹೇಳಿದ್ದಾರೆ.

ಬಜೆಟ್ ಅಧಿವೇಶನದಲ್ಲಿ ಪ್ರತಿಪಕ್ಷಗಳ ಟೀಕೆಗಳಿಗೆ ಉತ್ತರಿಸಲು ಪ್ರತಿತಂತ್ರ ಹೆಣೆಯುವುದಕ್ಕಾಗಿ ಎನ್ ಡಿಎ ನಾಯಕರ ಸಭೆ ನಡೆಯಿತು. ಈ ಸಭೆಯಲ್ಲಿ ಮೋದಿ ಎನ್ ಡಿಎ ನಾಯಕರಿಗೆ ಸಲಹೆ ನೀಡಿದ್ದಾರೆ. 

ಸಿಎಎಗೆ ಸಂಬಂಧಪಟ್ಟಂತೆ ಸರ್ಕಾರ ಯಾವುದೇ ತಪ್ಪನ್ನೂ ಮಾಡಿಲ್ಲ. ಅದರ ಬಗ್ಗೆ ರಕ್ಷಣಾತ್ಮಕವಾಗಿ ನಡೆದುಕೊಳ್ಳುವ ಅಗತ್ಯವಿಲ್ಲ ಎಂಬುದು ಮೋದಿ ಅಭಿಪ್ರಾಯವಾಗಿದೆ. ಬೋಡೋ ಅಕಾರ್ಡ್​​ಗೆ ಸಹಿ ಹಾಗೂ ತ್ರಿಪುರಾದ ಬ್ರು ಬುಡಕಟ್ಟು ಸಮಸ್ಯೆಗಳನ್ನು ಪರಿಹರಿಸಿದ್ದಕ್ಕಾಗಿ ಎನ್ ಡಿಎ ನಾಯಕರು ಪ್ರಧಾನಿ ಮೋದಿ ಅವರಿಗೆ ಮೆಚ್ಚುಗೆ ಸೂಚಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT