ಇತಿಹಾಸದಲ್ಲೇ ಮೊದಲ ಬಾರಿಗೆ ಮುಂಬೈ ನ ಗಣೇಶೋತ್ಸವ ರದ್ದು! 
ದೇಶ

ಇತಿಹಾಸದಲ್ಲೇ ಮೊದಲ ಬಾರಿಗೆ ಮುಂಬೈ ನ ಗಣೇಶೋತ್ಸವ ರದ್ದು! 

ಗಣೇಶ ಚತುರ್ಥಿಗೆ ಇನ್ನೊಂದು ತಿಂಗಳು ಬಾಕಿ ಇದೆ. ಕೋವಿಡ್-19 ಪರಿಸ್ಥಿತಿಯಿಂದಾಗಿ ಈ ಬಾರಿ ಅನೇಕ ಗಣೇಶೋತ್ಸವಗಳು ನಡೆಯುವುದು ಅನುಮಾನ. 

ಮುಂಬೈ: ಗಣೇಶ ಚತುರ್ಥಿಗೆ ಇನ್ನೊಂದು ತಿಂಗಳು ಬಾಕಿ ಇದೆ. ಕೋವಿಡ್-19 ಪರಿಸ್ಥಿತಿಯಿಂದಾಗಿ ಈ ಬಾರಿ ಅನೇಕ ಗಣೇಶೋತ್ಸವಗಳು ನಡೆಯುವುದು ಅನುಮಾನ. 

ಗಣೇಶೋತ್ಸವ ಎಂದರೆ ನೆನಪಾಗುವ ಮುಂಬೈ ನ ಗಣೇಶೋತ್ಸವದ ಮೇಲೆಯೂ ಕೋವಿಡ್-19 ರ ಕರಿನೆರಳು ಆವರಿಸಿದ್ದು ಇತಿಹಾಸದಲ್ಲೇ ಮೊದಲ ಬಾರಿಗೆ ಮುಂಬೈ ನ ಲಾಲ್‌ಬೌಚಾ ರಾಜ ಗಣೇಶೋತ್ಸವ ಮಂಡಲ ಈ ಬಾರಿ ಗಣೇಶೋತ್ಸವ ನಡೆಸದೇ ಇರಲು ನಿರ್ಧರಿಸಿದ್ದು, ಇದರ ಬದಲಾಗಿ ರಕ್ತದಾನ ಶಿಬಿರ ನಡೆಸಲು ತೀರ್ಮಾನಿಸಿದೆ. 

ಈ ನಿರ್ಧಾರವನ್ನು ಮಂಡಲ ಅಧಿಕಾರಿಗಳಿಗೆ ತಿಳಿಸಲಾಗಿದ್ದು, ಹಬ್ಬವನ್ನು ಆಚರಿಸುತ್ತಿದ್ದ 11 ದಿನಗಳ ಕಾಲವೂ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವುದಾಗಿ ಹೇಳಿದೆ. "ರಕ್ತದಾನ ಶಿಬಿರ, ಪ್ಲಾಸ್ಮಾದಾನ ಶಿಬಿರಗಳನ್ನು ಗಣೇಶ ಚತುರ್ಥಿಯ ಸಂದರ್ಭಗಳಲ್ಲಿ ಹಮ್ಮಿಕೊಳ್ಳಲಾಗುವುದು ಅಷ್ಟೇ ಅಲ್ಲದೇ ಎಲ್ಒಸಿ, ಎಲ್ಎಸಿಗಳಲ್ಲಿ ಹುತಾತ್ಮ ಯೋಧರ ಕುಟುಂಬಗಳಿಗೆ ಸನ್ಮಾನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರತಿ ವರ್ಷ ಮುಂಬೈ ನ ಲಾಲ್‌ಬೌಚಾ ರಾಜ ಗಣೇಶೋತ್ಸವದಲ್ಲಿ ಲಕ್ಷಾಂತರ ಮಂದಿ ಭಾಗವಹಿಸಿ ಅದ್ಧೂರಿಯಾಗಿ ಗಣೇಶ ಚತುರ್ಥಿ ಆಚರಣೆ ಮಾಡುತ್ತಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

SCROLL FOR NEXT