ಇತಿಹಾಸದಲ್ಲೇ ಮೊದಲ ಬಾರಿಗೆ ಮುಂಬೈ ನ ಗಣೇಶೋತ್ಸವ ರದ್ದು! 
ದೇಶ

ಇತಿಹಾಸದಲ್ಲೇ ಮೊದಲ ಬಾರಿಗೆ ಮುಂಬೈ ನ ಗಣೇಶೋತ್ಸವ ರದ್ದು! 

ಗಣೇಶ ಚತುರ್ಥಿಗೆ ಇನ್ನೊಂದು ತಿಂಗಳು ಬಾಕಿ ಇದೆ. ಕೋವಿಡ್-19 ಪರಿಸ್ಥಿತಿಯಿಂದಾಗಿ ಈ ಬಾರಿ ಅನೇಕ ಗಣೇಶೋತ್ಸವಗಳು ನಡೆಯುವುದು ಅನುಮಾನ. 

ಮುಂಬೈ: ಗಣೇಶ ಚತುರ್ಥಿಗೆ ಇನ್ನೊಂದು ತಿಂಗಳು ಬಾಕಿ ಇದೆ. ಕೋವಿಡ್-19 ಪರಿಸ್ಥಿತಿಯಿಂದಾಗಿ ಈ ಬಾರಿ ಅನೇಕ ಗಣೇಶೋತ್ಸವಗಳು ನಡೆಯುವುದು ಅನುಮಾನ. 

ಗಣೇಶೋತ್ಸವ ಎಂದರೆ ನೆನಪಾಗುವ ಮುಂಬೈ ನ ಗಣೇಶೋತ್ಸವದ ಮೇಲೆಯೂ ಕೋವಿಡ್-19 ರ ಕರಿನೆರಳು ಆವರಿಸಿದ್ದು ಇತಿಹಾಸದಲ್ಲೇ ಮೊದಲ ಬಾರಿಗೆ ಮುಂಬೈ ನ ಲಾಲ್‌ಬೌಚಾ ರಾಜ ಗಣೇಶೋತ್ಸವ ಮಂಡಲ ಈ ಬಾರಿ ಗಣೇಶೋತ್ಸವ ನಡೆಸದೇ ಇರಲು ನಿರ್ಧರಿಸಿದ್ದು, ಇದರ ಬದಲಾಗಿ ರಕ್ತದಾನ ಶಿಬಿರ ನಡೆಸಲು ತೀರ್ಮಾನಿಸಿದೆ. 

ಈ ನಿರ್ಧಾರವನ್ನು ಮಂಡಲ ಅಧಿಕಾರಿಗಳಿಗೆ ತಿಳಿಸಲಾಗಿದ್ದು, ಹಬ್ಬವನ್ನು ಆಚರಿಸುತ್ತಿದ್ದ 11 ದಿನಗಳ ಕಾಲವೂ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವುದಾಗಿ ಹೇಳಿದೆ. "ರಕ್ತದಾನ ಶಿಬಿರ, ಪ್ಲಾಸ್ಮಾದಾನ ಶಿಬಿರಗಳನ್ನು ಗಣೇಶ ಚತುರ್ಥಿಯ ಸಂದರ್ಭಗಳಲ್ಲಿ ಹಮ್ಮಿಕೊಳ್ಳಲಾಗುವುದು ಅಷ್ಟೇ ಅಲ್ಲದೇ ಎಲ್ಒಸಿ, ಎಲ್ಎಸಿಗಳಲ್ಲಿ ಹುತಾತ್ಮ ಯೋಧರ ಕುಟುಂಬಗಳಿಗೆ ಸನ್ಮಾನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರತಿ ವರ್ಷ ಮುಂಬೈ ನ ಲಾಲ್‌ಬೌಚಾ ರಾಜ ಗಣೇಶೋತ್ಸವದಲ್ಲಿ ಲಕ್ಷಾಂತರ ಮಂದಿ ಭಾಗವಹಿಸಿ ಅದ್ಧೂರಿಯಾಗಿ ಗಣೇಶ ಚತುರ್ಥಿ ಆಚರಣೆ ಮಾಡುತ್ತಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಕರ್ನಾಟಕದ ಅಂಧ ಕ್ರಿಕೆಟ್ ಆಟಗಾರ್ತಿಯರಿಗೆ ತಲಾ 10 ಲಕ್ಷ ರೂ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ನಾಯಕತ್ವ ಬದಲಾವಣೆ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲು ಸಾಧ್ಯವಿಲ್ಲ: ಮಲ್ಲಿಕಾರ್ಜುನ ಖರ್ಗೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ ನೆರವೇರಿಸಿದ್ದು ಹೇಗೆ?: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ; ಈ ಅದ್ಭುತ Video ನೋಡಿ..

SCROLL FOR NEXT