ದೇಶ

ವಂದೇ ಭಾರತ್ ಮೂಲಕ 4.75 ಲಕ್ಷ ಮಂದಿ ಸ್ವದೇಶಕ್ಕೆ ಆಗಮನ: ವಿದೇಶಾಂಗ ವ್ಯವಹಾರ ಸಚಿವಾಲಯ

ಕೊರೋನಾವೈರಸ್ ಸಾಂಕ್ರಾಮಿಕದ ಹಾವಳಿಯ ಕಾಲಘಟ್ಟದಲ್ಲಿ ಭಾರತ ಸರ್ಕಾರ ಮೇ 7 ರಂದು ವಂದೇ ಭಾರತ್ ಮಿಷನ್ ಅನ್ನು ಪ್ರಾರಂಭಿಸಿದ ನಂತರ 4.75 ಲಕ್ಷಕ್ಕೂ ಹೆಚ್ಚು ಭಾರತೀಯರು ವಿದೇಶದಿಂದ ಭಾರತಕ್ಕೆ ಮರಳಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.

ನವದೆಹಲಿ: ಕೊರೋನಾವೈರಸ್ ಸಾಂಕ್ರಾಮಿಕದ ಹಾವಳಿಯ ಕಾಲಘಟ್ಟದಲ್ಲಿ ಭಾರತ ಸರ್ಕಾರ ಮೇ 7 ರಂದು ವಂದೇ ಭಾರತ್ ಮಿಷನ್ ಅನ್ನು ಪ್ರಾರಂಭಿಸಿದ ನಂತರ 4.75 ಲಕ್ಷಕ್ಕೂ ಹೆಚ್ಚು ಭಾರತೀಯರು ವಿದೇಶದಿಂದ ಭಾರತಕ್ಕೆ ಮರಳಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.

ವಂದೇ ಭಾರತ್ ಮಿಷನ್ ನ ನಾಲ್ಕನೇ ಹಂತಕ್ಕೆ ಗುರುವಾರ ಚಾಲನೆ ಸಿಕ್ಕಿದೆ.

ಎಂಇಎ ವಕ್ತಾರ ಅನುರಾಗ್ ಶ್ರೀವಾಸ್ತವ, "ಜುಲೈ 1 ರ ಹೊತ್ತಿಗೆ, ಭಾರತಕ್ಕೆ ವಾಪಸಾಗಲು ವಿದೇಶದಲ್ಲಿ ನಿರೀಕ್ಷೆಯಲ್ಲಿರುವ ನಮ್ಮವರ ಸಂಖ್ಯೆ ಇನ್ನೂ ಬಹಳಷ್ಟಿದು ಮಿಷನ್ ನಲ್ಲಿ  ಇದುವರೆಗೆ ಒಟ್ಟು 5,83,109 ಜನ ನೊಂದಾಯಿಸಿದ್ದು ಅವರಲ್ಲಿ 4,75,000 ಕ್ಕೂ ಹೆಚ್ಚು ಜನರು ಈಗ ಸ್ವದೇಶಕ್ಕೆ ಮರಳಿದ್ದಾರೆ" ಎಂದಿದ್ದಾರೆ.

ಈ ವಿದೇಶವಾಸಿಗಳ ಸಂಖ್ಯೆಯಲ್ಲಿ ನೇಪಾಳ, ಭೂತಾನ್ ಮತ್ತು ಬಾಂಗ್ಲಾದೇಶದಿಂದ ಭೂಗಡಿ ದಾಟಿ ಬಂದ  90,000 ಕ್ಕೂ ಹೆಚ್ಚು ಭಾರತೀಯರು ಸೇರಿದ್ದಾರೆ ಎಂದು ಅವರು ಹೇಳಿದರು.

ಮಿಷನ್‌ನ ನಾಲ್ಕನೇ ಹಂತ ವಿಮಾನಗಳ ಪಟ್ಟಿ ಸಚಿವಾಲಯದ ವೆಬ್‌ಸೈಟ್‌ನಲ್ಲಿ ಲಭ್ಯವಿದ್ದು ನಿಯಮಿತವಾಗಿ ನವೀಕರಿಸಲಾಗುತ್ತಿದೆ ಎಂದು ಶ್ರೀವಾಸ್ತವ ತಿಳಿಸಿದ್ದಾರೆ. "ವಂದೇ ಭಾರತ್ ಮಿಷನ್‌ನ ಹಂತ- IV ರ ಅಡಿಯಲ್ಲಿ, ನಾವು 500 ಕ್ಕೂ ಹೆಚ್ಚು ವಿಮಾನಗಳನ್ನು ನಿರ್ವಹಿಸಲಿದ್ದೇವೆ. ಇದರಲ್ಲಿ ಏರ್ ಇಂಡಿಯಾ ಮತ್ತು ಖಾಸಗಿ ವಾಹಕಗಳು ಸೇರಿವೆ, " ಅವರು ವಿವರಿಸಿದ್ದಾರೆ. 
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ವಿದೇಶದಲ್ಲೂ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ಅಮೆರಿಕಾ ಸೇರಿದಂತೆ ಮೂರು ರಾಷ್ಟ್ರಗಳಿಗೆ ರಫ್ತು..!

CLP ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು, 50:50 ಒಪ್ಪಂದವಾಗಿಲ್ಲ: ಕೆ.ಜೆ. ಜಾರ್ಜ್ ಸ್ಪಷ್ಟನೆ

SCROLL FOR NEXT