ದೆಹಲಿ ಸಿಎಂ ಕೇಜ್ರಿವಾಲ್ 
ದೇಶ

ಕೋವಿಡ್-19: ದೇಶದ ಮೊದಲ 'ಪ್ಲಾಸ್ಮಾ ಬ್ಯಾಂಕ್'ಗೆ ದೆಹಲಿ ಸಿಎಂ ಕೇಜ್ರಿವಾಲ್ ಚಾಲನೆ

ಕೊರೋನಾ ವೈರಸ್ ವಿರುದ್ಧ ಹೋರಾಡುವಲ್ಲಿ ಗಮನಾರ್ಹ ಹೆಜ್ಜೆಯೊಂದನ್ನು ಇಟ್ಟಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ದೇಶದ ಮೊದಲ ಪ್ಲಾಸ್ಮಾ ಬ್ಯಾಂಕ್'ಗೆ ಗುರುವಾರ ಚಾಲನೆ ನೀಡಿದ್ದಾರೆ. 

ನವದೆಹಲಿ: ಕೊರೋನಾ ವೈರಸ್ ವಿರುದ್ಧ ಹೋರಾಡುವಲ್ಲಿ ಗಮನಾರ್ಹ ಹೆಜ್ಜೆಯೊಂದನ್ನು ಇಟ್ಟಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ದೇಶದ ಮೊದಲ ಪ್ಲಾಸ್ಮಾ ಬ್ಯಾಂಕ್'ಗೆ ಗುರುವಾರ ಚಾಲನೆ ನೀಡಿದ್ದಾರೆ. 

ದೆಹಲಿಯ ಇನ್ಸ್'ಟಿಟ್ಯೂಟ್ ಆಫ್ ಲಿವರ್ ಆ್ಯಂಡ್ ಬಿಲಿಯರಿ ಸೈನ್ಸಸ್ (ಐಎಲ್'ಬಿಎಸ್)ನಲ್ಲಿ ಈ ಪ್ಲಾಸ್ಮಾ ಬ್ಯಾಂಕ್ ಸ್ಥಾಪನೆಗೊಂಡಿದ್ದು, ಪ್ಲಾಸ್ಮಾ ಬ್ಯಾಂಕ್'ಗೆ ಕೇಜ್ರಿವಾಲ್ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದ್ದಾರೆ. 

ಪ್ಲಾಸ್ಮಾ ಬ್ಯಾಂಕ್'ಗೆ ಚಾಲನೆ ನೀಡಿದ ಬಳಿಕ ಮಾತಾನಾಡಿರುವ ಅವರು, 18ರಿಂದ 60 ವರ್ಷಗೊಹಿನ ಬಾಹೂ 50 ಕೆಜಿ ತೂಕಕ್ಕಿಂತಲೂ ಹೆಚ್ಚು ಇರುವ ಕೊರೋನಾ ಸೋಂಕಿನಿಂದ ಗುಣಮುಖರಾಗಿರುವವರು ಪ್ಲಾಸ್ಮಾ ದಾನ ಮಾಡಬಹುದಾಗಿದೆ. ಮಗುವಿಗೆ ಜನ್ಮ ನೀಡಿದ ಮಹಿಳೆಯರು ಹಾಗೂ ದೀರ್ಘಕಾಲಿಕ ರೋಗಗಳಿಂದ ಬಳುತ್ತಿರುವವರು ಅಂದರೆ, ಮಧುಮೇಹ, ಸಕ್ಕರೆ ಕಾಯಿಲೆ, ಶ್ವಾಸಕೋಶ ಸಮಸ್ಯೆಗಲು, ಕಿಡ್ನಿ ಸಮಸ್ಯೆಗಳು, ಹೃದಯ ಸಮಸ್ಯೆಯಿಂದ ಬಳುತ್ತಿರುವ ವ್ಯಕ್ತಿಗಳು ಪ್ಲಾಸ್ಮಾ ದಾನ ಮಾಡುವಂತಿಲ್ಲ. ಅರ್ಹ ವ್ಯಕ್ತಿಗಳು ಪ್ಲಾಸ್ಮಾ ದಾನ ಮಾಡಲು ಮುಂದಕ್ಕೆ ಬರಬೇಕೆಂದು ಮನವಿ ಮಾಡಿಕೊಂಡಿದ್ದಾರೆ. 

ಪ್ಲಾಸ್ಮಾ ಪಡೆದುಕೊಳ್ಳಲು ಜನರು ಸಮಸ್ಯೆ ಎದುರಿಸುತ್ತಿದ್ದು, ಜನರು ಪ್ಲಾಸ್ಮಾ ದಾನ ಮಾಡಲು ಮುಂದಾದರೆ ಮಾತ್ರ ಈ ಪ್ಲಾಸ್ಮಾ ಬ್ಯಾಂಕ್ ಸ್ಥಾಪನೆ ಯಶಸ್ವಿಯಾಗುತ್ತದೆ. ಪ್ಲಾಸ್ಮಾ ದಾನ ಮಾಡಲು ನೀವು ಅರ್ಹರೆಂದು ತಿಳಿದರೆ, 1031ಗೆ ಕರೆ ಮಾಡಬಹುದು. ಇಲ್ಲವೇ 8800007722 ಸಂಖ್ಯೆಗೆ ವಾಟ್ಸ್ಅಪ್ ಮಾಡಬಹುದು. ನಮ್ಮ ವೈದ್ಯರು ನಿಮ್ಮನ್ನು ಸಂಪರ್ಕಿಸಲಿದ್ದು, ಪ್ಲಾಸ್ಮಾ ದಾನ ಮಾಡಲು ನೀವು ಅರ್ಹರೋ ಅಥವಾ ಇಲ್ಲವೋ ಎಂಬುದನ್ನು ಸ್ಪಷ್ಟಪಡಿಸುತ್ತಾರೆಂದು ಹೇಳಿದ್ದಾರೆ. 

ಕೊರೋನಾಗೆ ಲಸಿಕೆಗಳು ಬರುವವರೆಗೂ ಪ್ಲಾಸ್ಮಾ ಚಿಕಿತ್ಸೆ ಸೋಂಕಿತರಿಗೆ ಸಹಾಯ ಮಾಡಲಿದೆ. ಕೊರೋನಾದಿಂದ ಸಾವನ್ನಪ್ಪುವವರ ಸಂಖ್ಯೆ ಕಡಿಮೆಯಾಗಲಿದೆ ಎಂದು ತಿಳಿಸಿದ್ದಾರೆ. 

ಈ ವರೆಗೂ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 89,802 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT