ಪ್ರಿಯಾಂಕಾ ಗಾಂಧಿ 
ದೇಶ

ಆಗಸ್ಟ್ 1 ರೊಳಗೆ ಸರ್ಕಾರಿ ಬಂಗಲೆ ತೆರವು ಮಾಡಿ: ಪ್ರಿಯಾಂಕಾ ಗಾಂಧಿಗೆ ಕೇಂದ್ರ ಸರ್ಕಾರ ಆದೇಶ

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೆ ಎಸ್‌ಪಿಜಿ ಭದ್ರತೆಯನ್ನು ಹಿಂಪಡೆಯಲಾಗಿದೆ. ಹೀಗಾಗಿ ಲೋಧಿ ಎಸ್ಟೇಟ್‌ನಲ್ಲಿ ಸರ್ಕಾರದಿಂದ ನೀಡಲಾಗಿರುವ ಮನೆಯನ್ನು ಒಂದು ತಿಂಗಳೊಳಗೆ ಖಾಲಿ ಮಾಡುವಂತೆ ಕೇಂದ್ರ ಸರ್ಕಾರ ಆದೇಶಿಸಿದೆ.

ನವದೆಹಲಿ: ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೆ ಎಸ್‌ಪಿಜಿ ಭದ್ರತೆಯನ್ನು ಹಿಂಪಡೆಯಲಾಗಿದೆ. ಹೀಗಾಗಿ ಲೋಧಿ ಎಸ್ಟೇಟ್‌ನಲ್ಲಿ ಸರ್ಕಾರದಿಂದ ನೀಡಲಾಗಿರುವ ಮನೆಯನ್ನು ಒಂದು ತಿಂಗಳೊಳಗೆ ಖಾಲಿ ಮಾಡುವಂತೆ ಕೇಂದ್ರ ಸರ್ಕಾರ ಆದೇಶಿಸಿದೆ.

ಎಸ್‌ಪಿಜಿ ಭದ್ರತೆ ಮುಂದುವರಿಯದ ಕಾರಣ, ಪ್ರಿಯಾಂಕ ಗಾಂಧಿ ವಾದ್ರಾ ಅವರಿಗೆ ಸರಕಾರದಿಂದ ನೀಡಲಾಗಿರುವ ಬಂಗಲೆಯನ್ನು ಆಗಸ್ಟ್ 1ರೊಳಗೆ ಖಾಲಿ ಮಾಡಬೇಕು. ಇಲ್ಲದಿದ್ದರೆ, ಆಗಸ್ಟ್‌ 1ರ ನಂತರ ಎಷ್ಟು ದಿನ ಆ ಬಂಗಲೆಯಲ್ಲೇ ತಂಗಿರುತ್ತಾರೋ, ಅಷ್ಟೂ ದಿನಗಳಿಗೆ ಹಾನಿ ಶುಲ್ಕ ಹಾಗೂ ದಂಡದ ರೂಪದಲ್ಲಿ ಬಾಡಿಗೆ ಪಾವತಿ ಮಾಡಬೇಕು ಎಂದು ಕೇಂದ್ರ ಸರಕಾರ ತನ್ನ ಆದೇಶದಲ್ಲಿ ತಿಳಿಸಿದೆ.

ಪ್ರಿಯಾಂಕಾ ಗಾಂಧಿ ಅವರಿಗೆ ನೀಡಲಾಗಿದ್ದ ಎಸ್​ಪಿಜಿ ಹಂತದ ಭದ್ರತೆಯನ್ನ ಕಳೆದ ವರ್ಷ ಸರ್ಕಾರ ಹಿಂಪಡೆದುಕೊಂಡು ಝಡ್+ ಸೆಕ್ಯೂರಿಟಿ ನೀಡಿತ್ತು. ಎಸ್​ಪಿಜಿ ಭದ್ರತೆ ಹೊಂದಿದವರಿಗೆ ಸರ್ಕಾರಿ ಬಂಗಲೆಯಲ್ಲಿ ವಾಸವಿರಲು ಅವಕಾಶ ಕೊಡಲಾಗುತ್ತದೆ. ಅಂದರಂತೆ 1997ರಲ್ಲಿ ಹೊಸ ದಿಲ್ಲಿಯ ಲುಟ್ಯೆನ್ಸ್ ಪ್ರದೇಶದಲ್ಲಿರುವ ಲೋಧಿ ಎಸ್ಟೇಟ್​ನ 35ನೇ ನಂಬರ್​ನ ಬಂಗಲೆಯನ್ನ ಪ್ರಿಯಾಂಕಾ ಗಾಂಧಿಗೆ ಒದಗಿಸಲಾಗಿತ್ತು. ಆದರೆ, ಎಸ್​ಪಿಜಿ ಭದ್ರತೆ ವಾಪಸ್ ಪಡೆದ ಹಿನ್ನೆಲೆಯಲ್ಲಿ ಸರ್ಕಾರಿ ಬಂಗಲೆ ಸೌಕರ್ಯವನ್ನೂ ಹಿಂಪಡೆದುಕೊಳ್ಳಲಾಗಿದೆ.

ಝಡ್ ಪ್ಲಸ್ ಸೆಕ್ಯೂರಿಟಿ ಹೊಂದಿದವರಿಗೆ ಸರ್ಕಾರಿ ಬಂಗಲೆ ಕೊಡುವ ಅವಕಾಶ ಇರುವುದಿಲ್ಲ. ಕ್ಯಾಬಿನೆಟ್ ವಸತಿ ಸಮಿತಿ(ಸಿಸಿಎ) ವಿಶೇಷ ವಿನಾಯಿತಿ ನೀಡಲು ಅಂಗೀಕರಿಸಿದರೆ ಮಾತ್ರ ಝಡ್+ ಭದ್ರತೆ ಹೊಂದಿದವರಿಗೆ ಸರ್ಕಾರಿ ಬಂಗಲೆಯ ಸೌಲಭ್ಯ ಇರುತ್ತದೆ. ಆದರೆ, ಇಲ್ಲಿ ಪ್ರಿಯಾಂಕಾ ಗಾಂಧಿ ಅವರಿಗೆ ಅಂಥ ಯಾವುದೇ ವಿನಾಯಿತಿ ಸಿಕ್ಕಿಲ್ಲ.

ತಿದ್ದುಪಡಿ ಕಾಯಿದೆಯಂತೆ ಪ್ರಧಾನಿಯವರ ಎಸ್‌ಪಿಜಿ ಭದ್ರತೆಯಲ್ಲಿಯಾವುದೇ ಬದಲಾವಣೆ ಇರುವುದಿಲ್ಲ. ಮಾಜಿ ಪ್ರಧಾನಿಗಳಿಗೂ ಭದ್ರತಾ ನಿಯಮ ಯಥಾಸ್ಥಿತಿಯಲ್ಲಿರಲಿದೆ. ಆದರೆ ಅವರ ಕುಟುಂಬ ಸದಸ್ಯರಿಗೆ ಮಾಜಿಯಾದ ನಂತರದ ಐದು ವರ್ಷಗಳ ಅವಧಿವರೆಗೆ ಮಾತ್ರ ಎಸ್‌ಪಿಜಿ ಭದ್ರತೆ ದೊರೆಯುತ್ತದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT