ಜ್ಯೋತಿರಾದಿತ್ಯ ಸಿಂಧಿಯಾ 
ದೇಶ

ಟೈಗರ್ ಅಭಿ ಝಿಂದಾ ಹೇ: ದಿಗ್ವಿಜಯ್, ಕಮಲ್ ನಾಥ್ ಗೆ ಸಿಂಧಿಯಾ ಟಾಂಗ್

ಕಾಂಗ್ರೆಸ್ ನಾಯಕರಾದ ದಿಗ್ವಿಜಯ್ ಸಿಂಗ್ ಮತ್ತು ಕಮಲನಾಥ್ ಅವರ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ಮುಖಂಡ ಜ್ಯೋತಿರಾದಿತ್ಯ ಸಿಂಧಿಯಾ, ಮಧ್ಯ ಪ್ರದೇಶ ಜನತೆಗೆ ನೀಡಿರುವ ಭರವಸೆ ಈಡೇರಿಸುವಂತೆ ಟಾಂಗ್ ನೀಡಿದ್ದಾರೆ.

ಭೂಪಾಲ್: ಕಾಂಗ್ರೆಸ್ ನಾಯಕರಾದ ದಿಗ್ವಿಜಯ್ ಸಿಂಗ್ ಮತ್ತು ಕಮಲನಾಥ್ ಅವರ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ಮುಖಂಡ ಜ್ಯೋತಿರಾದಿತ್ಯ ಸಿಂಧಿಯಾ, ಮಧ್ಯ ಪ್ರದೇಶ ಜನತೆಗೆ ನೀಡಿರುವ ಭರವಸೆ ಈಡೇರಿಸುವಂತೆ ಟಾಂಗ್ ನೀಡಿದ್ದಾರೆ.

ಇಂದು ಬೆಳಗ್ಗೆ  ಮಧ್ಯಪ್ರದೇಶ ಸಂಪುಟ ವಿಸ್ತರಣೆಯಾಗಿದ್ದು, ಶಿವರಾಜ್ ಸಿಂಗ್ ಚೌಹಾಣ್ 28 ಮಂದಿ ಸಚಿವರನ್ನು ತಮ್ಮ ಸಂಪುಟಕ್ಕೆ ಸೇರಿಸಿಕೊಂಡಿದ್ದಾರೆ. ದಿಗ್ವಿಜಯ್ ಸಿಂಗ್ ಅಥವಾ ಕಮಲನಾಥ್ ಅವರಿಂದ ನನಗೆ ಯಾವುದೇ ಪ್ರಮಾಣ ಪತ್ರ ಬೇಕಾಗಿಲ್ಲ, ಕಳೆದ 15 ತಿಂಗಳಲ್ಲಿ ಅವರು ರಾಜ್ಯವನ್ನು ಯಾವು ರೀತಿ ಕೊಳ್ಳೆ ಹೊಡೆದಿದ್ದಾರೆ ಎಂಬ ಬಗ್ಗೆ ಜನರಿಗೆ ತಿಳಿದಿದೆ. ಅವರಿಗೋಸ್ಕರ ಅವರಿಬ್ಬರು ಎಲ್ಲವನ್ನು ಮಾಡಿದ್ದಾರೆ, ಅವರು ನೀಡಿದ್ದ ಭರವಸೆಗಳನ್ನು ಜನ ಪರಿಶೀಲನೆ ಮಾಡಲಿದ್ದಾರೆ,  ನಾನು ಬೇರೆ ಏನು
ಮಾತನಾಡುವುದಿಲ್ಲ ಟೈಗರ್ ಅಭಿ ಜಿಂದಾ ಹೈ ಎಂದು ಮಾತ್ರ ಹೇಳುತ್ತೇನೆ ಎಂದಿದ್ದಾರೆ.

ಕ್ಯಾಬಿನೆಟ್ ನಾಯಕರ ತಂಡವಲ್ಲ ಆದರೆ ಅದು ಜನರ ತಂಡವಾಗಿದೆ ಮತ್ತು ಅವರಿಗೆ ಸೇವೆ ಸಲ್ಲಿಸುತ್ತದೆ ಎಂದು ಸಿಂಧಿಯಾ ಹೇಳಿದ್ದರು.

ಅವರು ಸರ್ಕಾರದ ಸಚಿವರಲ್ಲ, ಜನರ ಸೇವಕರು, ಸಮಾಜದ ಕೊನೆಯ ವ್ಯಕ್ತಿಗೂ ಎಲ್ಲಾ ಸೌಲಭ್ಯ ದೊರೆಯುವಂತೆ ಮಾಡುವುದು ನಮ್ಮ ಕರ್ತವ್ಯವಾಗಿದೆ. ಮುಂದಿನ 100 ದಿನಗಳಲ್ಲಿ ಶಿವರಾಜ್ ಸಿಂಗ್ ಚೌಹಾಣ್ ಸರ್ಕಾರ ಕೊರೋನಾ ವಿರುದ್ಧ ಹೋರಾಡಲಿದೆ, ರೈತರಿಗೆ ಸಹಾಯ ಮಾಡಲಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT