ಐಜಿ ಮೊಹಿತ್ ಅಗರ್ವಾಲ್ 
ದೇಶ

ಕಾನ್ಪುರ ಎನ್ ಕೌಂಟರ್ ನಲ್ಲಿ ಇಬ್ಬರು ಕ್ರಿಮಿನಲ್ ಗಳ ಹತ್ಯೆ: ಐಜಿ ಮೋಹಿತ್ ಅಗರ್ವಾಲ್

ರೌಡಿ ಶೀಟರ್ ವಿಕಾಸ್ ದುಬೆಯನ್ನು ಬಂಧಿಸಲು ಹೋಗಿ ನಡೆದ ಎನ್ ಕೌಂಟರ್ ನಲ್ಲಿ ಇಬ್ಬರು ಅಪರಿಚಿತ ಕ್ರಿಮಿನಲ್ ಗಳನ್ನು ಹತ್ಯೆಗೈಯಲಾಗಿದೆ ಎಂದು ಕಾನ್ಪುರ ಪೊಲೀಸ್ ಮಹಾ ನಿರ್ದೇಶಕ ಮೊಹಿತ್ ಅಗರ್ವಾಲ್ ತಿಳಿಸಿದ್ದಾರೆ.

ಕಾನ್ಪುರ(ಉತ್ತರ ಪ್ರದೇಶ):ರೌಡಿ ಶೀಟರ್ ವಿಕಾಸ್ ದುಬೆಯನ್ನು ಬಂಧಿಸಲು ಹೋಗಿ ನಡೆದ ಎನ್ ಕೌಂಟರ್ ನಲ್ಲಿ ಇಬ್ಬರು ಅಪರಿಚಿತ ಕ್ರಿಮಿನಲ್ ಗಳನ್ನು ಹತ್ಯೆಗೈಯಲಾಗಿದೆ ಎಂದು ಕಾನ್ಪುರ ಪೊಲೀಸ್ ಮಹಾ ನಿರ್ದೇಶಕ ಮೊಹಿತ್ ಅಗರ್ವಾಲ್ ತಿಳಿಸಿದ್ದಾರೆ.

ಇಂದು ಮಧ್ಯರಾತ್ರಿ ನಡೆದ ಎನ್ ಕೌಂಟರ್ ನಲ್ಲಿ 8 ಮಂದಿ ಪೊಲೀಸರು ಹುತಾತ್ಮರಾದ ಘಟನೆ ಬಗ್ಗೆ ಮಾಹಿತಿ ನೀಡಿದ ಅವರು, ಇಬ್ಬರು ಕ್ರಿಮಿನಲ್ ಗಳನ್ನು ಹತ್ಯೆ ಮಾಡಲಾಗಿದೆ. ಆ ವೇಳೆ ಇಬ್ಬರು ಪೊಲೀಸರಿಗೆ ಗಾಯಗಳಾಗಿವೆ. ಎನ್ ಕೌಂಟರ್ ನಡೆದ ಸ್ಥಳದಿಂದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಉಳಿದ ಆರೋಪಿಗಳ ಪತ್ತೆಗಾಗಿ ಶೋಧ ಕಾರ್ಯ ಮುಂದುವರಿದಿದೆ ಎಂದು ಅಗರ್ವಾಲ್ ತಿಳಿಸಿದ್ದಾರೆ.

ಘಟನೆ ಬಗ್ಗೆ ಖೇದ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹುತಾತ್ಮ ಪೊಲೀಸರ ಬಲಿದಾನವನ್ನು ಉತ್ತರ ಪ್ರದೇಶ ಎಂದಿಗೂ ಮರೆಯುವುದಿಲ್ಲ. ಬಹಳ ಧೈರ್ಯದಿಂದ ಪೊಲೀಸರು ತಮ್ಮ ಕರ್ತವ್ಯ ನಡೆಸಿದ್ದರು. ಅವರ ಬಲಿದಾನ ನಿಷ್ಟ್ರಯೋಜಕವಾಗಲು ಬಿಡುವುದಿಲ್ಲ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT