ಸಾಂದರ್ಭಿಕ ಚಿತ್ರ 
ದೇಶ

ಹೆಚ್ಚುತ್ತಿರುವ ಕೊರೋನಾ ಸೋಂಕು: ಗ್ರಾಮಸ್ಥರಿಂದ ರೆಸಾರ್ಟ್, ಹೋಟೆಲ್ ಗಳಿಗೆ ತೆರಳುವ ಮಾರ್ಗ ಬಂದ್

ಗಡಿಯಲ್ಲಿ ರಸ್ತೆಗಳನ್ನು ನಿರ್ಬಂಧಿಸುವ ಮೂಲಕ ಗ್ರಾಮಸ್ಥರು ತಮ್ಮ ಪ್ರದೇಶಗಳಿಗೆ ನಿಷೇಧ ಹಾಕಿದ್ದಾರೆ ಎಂಬ ವರದಿಗಳ ನಡುವೆ ಒಂದು ಹೆಜ್ಜೆ ಮುಂದೆ ಹೋಗಿರುವ ಎಚ್‌ಡಿ ಕೋಟೆ ತಾಲ್ಲೂಕಿನ ನಿವಾಸಿಗಳು ರೆಸಾರ್ಟ್‌ಗಳು ಮತ್ತು ಹೋಟೆಲ್‌ಗಳನ್ನು ಸಂಪರ್ಕಿಸುವ ರಸ್ತೆಗಳನ್ನು ಬಂದ್ ಮಾಡಿದ್ದಾರೆ.

ಮೈಸೂರು: ಗಡಿಯಲ್ಲಿ ರಸ್ತೆಗಳನ್ನು ನಿರ್ಬಂಧಿಸುವ ಮೂಲಕ ಗ್ರಾಮಸ್ಥರು ತಮ್ಮ ಪ್ರದೇಶಗಳಿಗೆ ನಿಷೇಧ  ಹಾಕಿದ್ದಾರೆ ಎಂಬ ವರದಿಗಳ ನಡುವೆ ಒಂದು ಹೆಜ್ಜೆ ಮುಂದೆ ಹೋಗಿರುವ ಎಚ್‌ಡಿ ಕೋಟೆ ತಾಲ್ಲೂಕಿನ ನಿವಾಸಿಗಳು ರೆಸಾರ್ಟ್‌ಗಳು ಮತ್ತು ಹೋಟೆಲ್‌ಗಳನ್ನು ಸಂಪರ್ಕಿಸುವ ರಸ್ತೆಗಳನ್ನು ಬಂದ್ ಮಾಡಿದ್ದಾರೆ.

ಮೈಸೂರು ಜಿಲ್ಲೆ ಎಚ್.ಡಿ ಕೋಟೆ ತಾಲೂಕಿನ ಗ್ರಾಮಸ್ಥರು ಅಂತರ ಸಂತೆ ಗ್ರಾಮದ ಮೂಲಕ ಸಂಪರ್ಕಕ್ಕೆ ಬರುವ ಹೋಟೆಲ್ ಮತ್ತು ರೆಸಾರ್ಟ್ ಗಳಿಗೆ ಹೋಗುವ ದಾರಿಗಳನ್ನು ಮುಚ್ಚಿದ್ದಾರೆ. ವಾರಾಂತ್ಯದಲ್ಲಿ ಬೆಂಗಳೂರಿನಿಂದ ಕುಟುಂಬಸ್ಥರೊಂದಿಗೆ ಅನೇಕ ಮಂದಿ ರೆಸಾರ್ಟ್ ಗಳಿಗೆ ಬರುತ್ತಾರೆ.  ಅವರಿಂದಾಗಿ ಮತ್ತಷ್ಟು ಸೋಂಕು ಹರಡಬಾರದೆಂಬ ಹಿನ್ನೆಲೆಯಲ್ಲಿ ರಸ್ತೆ ಬಂದ್ ಮಾಡಿರುವುದಾಗಿ ಗ್ರಾಮಸ್ಥರು ತಿಳಿಸಿದ್ದಾರೆ. ಈ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿದರೂ ಯಾವುದೇ ಪ್ರಯೋಜನವಾಗಲಿಲ್ಲ ಹೀಗಾಗಿ
ಗ್ರಾಮಸ್ಥರೇ ಮುಂದೆ ಬಂದು ರಸ್ತೆ ಮುಚ್ಚಿದ್ದಾರೆ.

ಬೆಂಗಳೂರಿನಲ್ಲಿ ಕೊರೋನಾ ಸೋಂಕಿತರ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.  ವನ್ಯಜೀವಿ ಸಫಾರಿಯನ್ನು ಮತ್ತೆ ತೆರೆದಿರುವ ಕಾರಣ ಬೆಂಗಳೂರಿನಿಂದ ಹೆಚ್ಚಿನ ಜನರು ಆಗಮಿಸುತ್ತಿದ್ದಾರೆ. ಜೊತೆಗೆ ಎಚ್.ಡಿ ಕೋಟೆಯ ಕಬಿನಿ ಹಿನ್ನೀರಿನಲ್ಲಿರುವ ಜಲಾಶಯಗಳಿಗೆ ಬಂದು ರಾತ್ರಿ ತಂಗಿರುತ್ತಾರೆ.

ಎರಡು ತಿಂಗಳುಗಳ ಕಾಲ ಲಾಕ್ ಡೌನ್ ನಿಂದ ವ್ಯವಹಾರವಿಲ್ಲದೇ ನಾವು ಈಗಾಗಲೇ ಸಮಸ್ಯೆಯಲ್ಲಿದ್ದೇವೆ, ಹೀಗಾಗಿ ವಾರಾಂತ್ಯದಲ್ಲಿ ಕಸ್ಟಮರ್ ಗಳಿಗಾಗಿ ನಿರೀಕ್ಷಿಸುತ್ತಿದ್ದೇವೆ, ಆದರೆ ಸ್ಥಳೀಯರು ರಸ್ತೆಗಳನ್ನು ಬಂದ್ ಮಾಡಿದ್ದಾರೆ ಎಂದು ರೆಸಾರ್ಟ್ ಮಾಲೀಕರು  ಅಳಲು ತೋಡಿಕೊಂಡಿದ್ದಾರೆ.

ಪರಿಸ್ಥಿತಿ ಸಹಜ ಸ್ಥಿತಿಗೆ ಬರುವವರೆಗೂ ವನ್ಯಜೀವಿ ಸಫಾರಿ ಮುಚ್ಚಬೇಕೆಂದು ಕೆಲವರು ಅಭಿಪ್ರಾಯ ಪಟ್ಚಿದ್ದಾರೆ. ಕಳೆದ ಕೆಲವು ದಿನಗಳಲ್ಲಿ ಚಾಮರಾಜನರ ಜಿಲ್ಲೆಯಲ್ಲಿ 50 ಕೇಸ್ ಗಳು ದಾಖಲಾಗಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT