ಸಾಂದರ್ಭಿಕ ಚಿತ್ರ 
ದೇಶ

ಹೆಚ್ಚುತ್ತಿರುವ ಕೊರೋನಾ ಸೋಂಕು: ಗ್ರಾಮಸ್ಥರಿಂದ ರೆಸಾರ್ಟ್, ಹೋಟೆಲ್ ಗಳಿಗೆ ತೆರಳುವ ಮಾರ್ಗ ಬಂದ್

ಗಡಿಯಲ್ಲಿ ರಸ್ತೆಗಳನ್ನು ನಿರ್ಬಂಧಿಸುವ ಮೂಲಕ ಗ್ರಾಮಸ್ಥರು ತಮ್ಮ ಪ್ರದೇಶಗಳಿಗೆ ನಿಷೇಧ ಹಾಕಿದ್ದಾರೆ ಎಂಬ ವರದಿಗಳ ನಡುವೆ ಒಂದು ಹೆಜ್ಜೆ ಮುಂದೆ ಹೋಗಿರುವ ಎಚ್‌ಡಿ ಕೋಟೆ ತಾಲ್ಲೂಕಿನ ನಿವಾಸಿಗಳು ರೆಸಾರ್ಟ್‌ಗಳು ಮತ್ತು ಹೋಟೆಲ್‌ಗಳನ್ನು ಸಂಪರ್ಕಿಸುವ ರಸ್ತೆಗಳನ್ನು ಬಂದ್ ಮಾಡಿದ್ದಾರೆ.

ಮೈಸೂರು: ಗಡಿಯಲ್ಲಿ ರಸ್ತೆಗಳನ್ನು ನಿರ್ಬಂಧಿಸುವ ಮೂಲಕ ಗ್ರಾಮಸ್ಥರು ತಮ್ಮ ಪ್ರದೇಶಗಳಿಗೆ ನಿಷೇಧ  ಹಾಕಿದ್ದಾರೆ ಎಂಬ ವರದಿಗಳ ನಡುವೆ ಒಂದು ಹೆಜ್ಜೆ ಮುಂದೆ ಹೋಗಿರುವ ಎಚ್‌ಡಿ ಕೋಟೆ ತಾಲ್ಲೂಕಿನ ನಿವಾಸಿಗಳು ರೆಸಾರ್ಟ್‌ಗಳು ಮತ್ತು ಹೋಟೆಲ್‌ಗಳನ್ನು ಸಂಪರ್ಕಿಸುವ ರಸ್ತೆಗಳನ್ನು ಬಂದ್ ಮಾಡಿದ್ದಾರೆ.

ಮೈಸೂರು ಜಿಲ್ಲೆ ಎಚ್.ಡಿ ಕೋಟೆ ತಾಲೂಕಿನ ಗ್ರಾಮಸ್ಥರು ಅಂತರ ಸಂತೆ ಗ್ರಾಮದ ಮೂಲಕ ಸಂಪರ್ಕಕ್ಕೆ ಬರುವ ಹೋಟೆಲ್ ಮತ್ತು ರೆಸಾರ್ಟ್ ಗಳಿಗೆ ಹೋಗುವ ದಾರಿಗಳನ್ನು ಮುಚ್ಚಿದ್ದಾರೆ. ವಾರಾಂತ್ಯದಲ್ಲಿ ಬೆಂಗಳೂರಿನಿಂದ ಕುಟುಂಬಸ್ಥರೊಂದಿಗೆ ಅನೇಕ ಮಂದಿ ರೆಸಾರ್ಟ್ ಗಳಿಗೆ ಬರುತ್ತಾರೆ.  ಅವರಿಂದಾಗಿ ಮತ್ತಷ್ಟು ಸೋಂಕು ಹರಡಬಾರದೆಂಬ ಹಿನ್ನೆಲೆಯಲ್ಲಿ ರಸ್ತೆ ಬಂದ್ ಮಾಡಿರುವುದಾಗಿ ಗ್ರಾಮಸ್ಥರು ತಿಳಿಸಿದ್ದಾರೆ. ಈ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿದರೂ ಯಾವುದೇ ಪ್ರಯೋಜನವಾಗಲಿಲ್ಲ ಹೀಗಾಗಿ
ಗ್ರಾಮಸ್ಥರೇ ಮುಂದೆ ಬಂದು ರಸ್ತೆ ಮುಚ್ಚಿದ್ದಾರೆ.

ಬೆಂಗಳೂರಿನಲ್ಲಿ ಕೊರೋನಾ ಸೋಂಕಿತರ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.  ವನ್ಯಜೀವಿ ಸಫಾರಿಯನ್ನು ಮತ್ತೆ ತೆರೆದಿರುವ ಕಾರಣ ಬೆಂಗಳೂರಿನಿಂದ ಹೆಚ್ಚಿನ ಜನರು ಆಗಮಿಸುತ್ತಿದ್ದಾರೆ. ಜೊತೆಗೆ ಎಚ್.ಡಿ ಕೋಟೆಯ ಕಬಿನಿ ಹಿನ್ನೀರಿನಲ್ಲಿರುವ ಜಲಾಶಯಗಳಿಗೆ ಬಂದು ರಾತ್ರಿ ತಂಗಿರುತ್ತಾರೆ.

ಎರಡು ತಿಂಗಳುಗಳ ಕಾಲ ಲಾಕ್ ಡೌನ್ ನಿಂದ ವ್ಯವಹಾರವಿಲ್ಲದೇ ನಾವು ಈಗಾಗಲೇ ಸಮಸ್ಯೆಯಲ್ಲಿದ್ದೇವೆ, ಹೀಗಾಗಿ ವಾರಾಂತ್ಯದಲ್ಲಿ ಕಸ್ಟಮರ್ ಗಳಿಗಾಗಿ ನಿರೀಕ್ಷಿಸುತ್ತಿದ್ದೇವೆ, ಆದರೆ ಸ್ಥಳೀಯರು ರಸ್ತೆಗಳನ್ನು ಬಂದ್ ಮಾಡಿದ್ದಾರೆ ಎಂದು ರೆಸಾರ್ಟ್ ಮಾಲೀಕರು  ಅಳಲು ತೋಡಿಕೊಂಡಿದ್ದಾರೆ.

ಪರಿಸ್ಥಿತಿ ಸಹಜ ಸ್ಥಿತಿಗೆ ಬರುವವರೆಗೂ ವನ್ಯಜೀವಿ ಸಫಾರಿ ಮುಚ್ಚಬೇಕೆಂದು ಕೆಲವರು ಅಭಿಪ್ರಾಯ ಪಟ್ಚಿದ್ದಾರೆ. ಕಳೆದ ಕೆಲವು ದಿನಗಳಲ್ಲಿ ಚಾಮರಾಜನರ ಜಿಲ್ಲೆಯಲ್ಲಿ 50 ಕೇಸ್ ಗಳು ದಾಖಲಾಗಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಉತ್ತರ ಪ್ರದೇಶ: "ಆಕ್ಷೇಪಾರ್ಹ" ಸ್ಥಿತಿಯಲ್ಲಿದ್ದ ಪ್ರೇಮಿಗಳನ್ನು ಹೊಡೆದು ಕೊಂದ ಕುಟುಂಬಸ್ಥರು!

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

SCROLL FOR NEXT