ಪೃಥ್ವಿರಾಜ್ ಚವಾಣ್ 
ದೇಶ

ಆಗಸ್ಟ್ 15ರೊಳಗೆ ಲಸಿಕೆ ನೀಡುವ ಐಸಿಎಂಆರ್ ಯೋಜನೆ ಪ್ರಶ್ನಿಸಿದ ಪೃಥ್ವಿರಾಜ್ ಚವಾಣ್

ಆಗಸ್ಟ್ 15 ರೊಳಗೆ ಕರೋನಾ ವೈರಸ್ ಗೆ ಲಸಿಕೆ ಬಿಡುಗಡೆ ಮಾಡುವ ಐಸಿಎಂಆರ್ ಯೋಜನೆಯನ್ನು ಪ್ರಶ್ನಿಸಿರುವ ಕಾಂಗ್ರೆಸ್ ಮುಖಂಡ ಪೃಥ್ವಿರಾಜ್ ಚವಾಣ್ ಅವರು, ಇದು ಪ್ರಧಾನಿ ಮೋದಿ ಅವರಿಗೆ ಕೆಂಪು ಕೋಟೆಯಿಂದ ದೊಡ್ಡ ಘೋಷಣೆ ಮಾಡಲು ಅನುವು ಮಾಡಿಕೊಡುವ ಉದ್ದೇಶ ಹೊಂದಿದೆ ಎಂದು ಶನಿವಾರ ಆರೋಪಿಸಿದ್ದಾರೆ.

ಮುಂಬೈ: ಆಗಸ್ಟ್ 15 ರೊಳಗೆ ಕರೋನಾ ವೈರಸ್ ಗೆ ಲಸಿಕೆ ಬಿಡುಗಡೆ ಮಾಡುವ ಐಸಿಎಂಆರ್ ಯೋಜನೆಯನ್ನು ಪ್ರಶ್ನಿಸಿರುವ ಕಾಂಗ್ರೆಸ್ ಮುಖಂಡ ಪೃಥ್ವಿರಾಜ್ ಚವಾಣ್ ಅವರು, ಇದು ಪ್ರಧಾನಿ ಮೋದಿ ಅವರಿಗೆ ಕೆಂಪು ಕೋಟೆಯಿಂದ ದೊಡ್ಡ ಘೋಷಣೆ ಮಾಡಲು ಅನುವು ಮಾಡಿಕೊಡುವ ಉದ್ದೇಶ ಹೊಂದಿದೆ ಎಂದು ಶನಿವಾರ ಆರೋಪಿಸಿದ್ದಾರೆ.

ಆಗಸ್ಟ್ 15 ರೊಳಗೆ ವಿಶ್ವದ ಮೊದಲ ಕೊವಿಡ್ -19 ಲಸಿಕೆಯನ್ನು ಬಿಡುಗಡೆ ಮಾಡುವ ಗುರಿ ಹೊಂದಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ(ಐಸಿಎಂಆರ್) ಶುಕ್ರವಾರ ತಿಳಿಸಿದೆ.

"ಕೊರೋನಾ ಲಸಿಕೆಗೆ ಜಾಗತಿಕ ತಜ್ಞರು 12 ರಿಂದ 18 ತಿಂಗಳ ಕಾಲಾವಧಿಯನ್ನು ನೀಡುತ್ತಿರುವಾಗ ಐಸಿಎಂಆರ್ ಭಾರತೀಯ ಕರೋನಾ(ವೈರಸ್) ಲಸಿಕೆಗಾಗಿ ಆಗಸ್ಟ್ 15ರ ಅವಾಸ್ತವಿಕ ಟೈಮ್‌ಲೈನ್‌ಗಾಗಿ ಏಕೆ ಧಾವಿಸುತ್ತಿದೆ" ಎಂದು ಚವಾನ್ ಟ್ವೀಟ್ ಮಾಡಿದ್ದಾರೆ.

ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪು ಕೋಟೆಯಿಂದ ಪ್ರಮುಖ ಘೋಷಣೆ ಮಾಡಲು ಅನುವು ಮಾಡಿಕೊಡುವ ಉದ್ದೇಶದಿಂದ ಐಸಿಎಂಆರ್ ಲಸಿಕೆ ಅಭಿವೃದ್ಧಿಪಡಿಸುವ ಆತುರದಲ್ಲಿದೆ ಎಂದು ಕಾಂಗ್ರೆಸ್ ಮುಖಂಡ ದೂರಿದ್ದಾರೆ.

ಈ ಬಗ್ಗೆ ಕೇಂದ್ರ ಆರೋಗ್ಯ ಸಚಿವರು ಸ್ಪಷ್ಟನೆ ನೀಡಬೇಕು ಎಂದು ಚವಾಣ್ ಒತ್ತಾಯಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕರ್ನಾಟಕ ನಾಯಕತ್ವ ಬದಲಾವಣೆಯ ನಡುವೆ CM ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಮತ್ತೆ ದೆಹಲಿಗೆ

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಶನಿವಾರ; ತದನಂತರ ನೂತನ ಸಿಎಂ ಪದಗ್ರಹಣ ಸಾಧ್ಯತೆ!

ಕ್ರೇಜಿಸ್ಟಾರ್ ರವಿಚಂದ್ರನ್ ವಿರುದ್ಧವೇ ಅತ್ಯಾಚಾರ ಯತ್ನ ಆರೋಪ, ಮಾನನಷ್ಟ ಮೊಕದ್ದಮೆ: ಕಣ್ಣೀರಿಟ್ಟು ಕ್ಷಮೆ ಕೇಳಿದ 'ಹಳ್ಳಿಮೇಷ್ಟ್ರು' ನಟಿ Bindiya!

Karnataka CM News LIVE Updates | ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ದೆಹಲಿಗೆ ಪ್ರಯಾಣ; ಸಿಎಲ್‌ಪಿ ಸಭೆ ಶನಿವಾರ ಸಾಧ್ಯತೆ!

ವೀರೇಂದ್ರ ಪಾಟೀಲರಿಗೆ ಅಪ್ಪ, ಸಿದ್ದರಾಮಯ್ಯರಿಗೆ ಮಗ ಅಪಮಾನ: ರಾಹುಲ್ ವಿರುದ್ಧ ಪ್ರಲ್ಹಾದ ಜೋಶಿ ಕಿಡಿ!

SCROLL FOR NEXT