ನರೇಂದ್ರ ಮೋದಿ 
ದೇಶ

ಲೇಹ್ ಗೆ ಪ್ರಧಾನಿ ಭೇಟಿ: ವೈದ್ಯಕೀಯ ಸೌಲಭ್ಯ ಕುರಿತ ಟೀಕೆಗೆ ಭಾರತೀಯ ಸೇನೆ ತಿರುಗೇಟು

ಪ್ರಧಾನಿ ನರೇಂದ್ರಮೋದಿ ಒಂದು ದಿನದ ಹಿಂದೆ ಭೇಟಿ ನೀಡಿದ್ದ ಲೇಹ್‍ ಆಸ್ಪತ್ರೆಯಲ್ಲಿ ವೈದ್ಯಕೀಯ ಸೌಲಭ್ಯಗಳ ಕುರಿತ ಟೀಕೆಗಳು ದುರದೃಷ್ಟಕರ ಎಂದು ಭಾರತೀಯ ಸೇನೆ ಪ್ರತಿಕ್ರಿಯಿಸಿದೆ.

ನವದೆಹಲಿ: ಪ್ರಧಾನಿ ನರೇಂದ್ರಮೋದಿ ಒಂದು ದಿನದ ಹಿಂದೆ ಭೇಟಿ ನೀಡಿದ್ದ ಲೇಹ್‍ ಆಸ್ಪತ್ರೆಯಲ್ಲಿ ವೈದ್ಯಕೀಯ ಸೌಲಭ್ಯಗಳ ಕುರಿತ ಟೀಕೆಗಳು ದುರದೃಷ್ಟಕರ ಎಂದು ಭಾರತೀಯ ಸೇನೆ ಪ್ರತಿಕ್ರಿಯಿಸಿದೆ. 

ಸಶಸ್ತ್ರ ಪಡೆಗಳಿಗೆ ಉತ್ತಮ ಚಿಕಿತ್ಸೆ ನೀಡಲಾಗುತ್ತಿದೆ. ಛಾಯಾಚಿತ್ರಗಳಲ್ಲಿ ತೋರಿಸಿರುವ ಸಭಾಂಗಣವನ್ನು ಕೋವಿಡ್ ವಾರ್ಡ್ ಆಗಿ ಪರಿವರ್ತಿಸಲಾಗಿದೆ ಎಂದು ಭಾರತೀಯ ಸೇನೆ ಹೇಳಿದೆ. 

ಪ್ರಧಾನಿ ನರೇಂದ್ರ ಮೋದಿಯವರು ಶುಕ್ರವಾರ ಲೇಹ್ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಅಲ್ಲಿನ ಸೌಲಭ್ಯಗಳ ಬಗ್ಗೆ ಕೆಲ ವಲಯಗಳಲ್ಲಿ ದುರುದ್ದೇಶಪೂರಿತ ಮತ್ತು ಆಧಾರರಹಿತ ಆರೋಪಗಳನ್ನು ಮಾಡಲಾಗಿದೆ ಎಂದು ಭಾರತೀಯ ಸೇನೆಯು ಹೇಳಿಕೆಯಲ್ಲಿ ತಿಳಿಸಿದೆ.

ಪ್ರಧಾನಿ ಮೋದಿ ಶುಕ್ರವಾರ ಲಡಾಖ್‌ಗೆ ಭೇಟಿ ನೀಡಿ ಗಡಿ ಪ್ರದೇಶದಲ್ಲಿ ನಿಯೋಜನೆಗೊಂಡ ಭಾರತೀಯ ಸೇನೆ, ವಾಯುಪಡೆ ಮತ್ತು ಐಟಿಬಿಪಿ ಪಡೆಗಳೊಂದಿಗೆ ಸಿಬ್ಬಂದಿಯೊಂದಿಗೆ ಮಾತನಾಡಿದ್ದಾರೆ. ಗಾಲ್ವಾನ್ ಕಣಿವೆಯಲ್ಲಿ ಚೀನಾದ ಸೇನೆಯೊಂದಿಗೆ ಹೋರಾಡಿ ಗಾಯಗೊಂಡ ಸೈನಿಕರ ಆರೋಗ್ಯವನ್ನು ವಿಚಾರಿಸಿದ್ದಾರೆ. 

ಲೇಹ್‌ನ ಸೇನಾ ಆಸ್ಪತ್ರೆಯಲ್ಲಿ ಸೈನಿಕರೊಂದಿಗೆ ಸಂವಾದ ನಡೆಸಿದ ಪ್ರಧಾನಿ ಮೋದಿ, ಭಾರತದ ಧೈರ್ಯಶಾಲಿ ಸೈನಿಕರು ‘ಅಂತಹ ಶಕ್ತಿ’ಗಳ ಮುಂದೆ ಶೌರ್ಯವನ್ನು ತೋರಿಸಿದ್ದಾರೆ ಎಂದು ಜಗತ್ತು ಚರ್ಚಿಸುತ್ತಿದೆ ಎಂದು ಹೇಳಿದ್ದರು. 

ಪ್ರಧಾನಿ ಮೋದಿ ಲೇಹ್ ವೈದ್ಯಕೀಯ ಸೌಲಭ್ಯಕ್ಕೆ ಭೇಟಿ ನೀಡಿದ ಛಾಯಾಚಿತ್ರಗಳು ಹೊರಬರುತ್ತಿದ್ದಂತೆ, ಅನೇಕರು ಟ್ವಿಟರ್‍ ನಲ್ಲಿ ಪೋಸ್ಟ್ ಮಾಡಿ, ಫೋಟೋಗಳಲ್ಲಿ ಕಾಣಿಸುತ್ತಿರುವ ಲೇಹ್ ಸೌಲಭ್ಯವು ಆಸ್ಪತ್ರೆಯಾಗಿದೆಯೇ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.

ಫೋಟೋಗಳಲ್ಲಿ ತೋರಿಸಿರುವ ವೈದ್ಯಕೀಯ ಸೌಲಭ್ಯವು ಸಭಾಂಗಣವೇ ಹೊರತು ಆಸ್ಪತ್ರೆಯಲ್ಲ ಎಂದು ಕೆಲವರು ಅನುಮಾನ ವ್ಯಕ್ತಪಡಿಸುತ್ತಿದ್ದಂತೆ, ಲೇಹ್ ಆಸ್ಪತ್ರೆಯು ಗೊತ್ತುಪಡಿಸಿದ ಕೋವಿಡ್ ಆಸ್ಪತ್ರೆಯಾಗಿ ಮಾರ್ಪಡಿಸಿದ ನಂತರ ತರಬೇತಿ ಹಾಲ್‍ ಅನ್ನು ವಾರ್ಡ್‍ ಆಗಿ ಬದಲಾಯಿಸಲಾಗಿದೆ ಎಂದು ಭಾರತೀಯ ಸೇನೆ ಸ್ಪಷ್ಟಪಡಿಸಿದೆ. 

ಟೀಕಾಕಾರಿಗೆ ಭಾರತೀಯ ಸೇನೆ ಉತ್ತರಿಸಿ, ‘ನಮ್ಮ ಕೆಚ್ಚೆದೆಯ ಸಶಸ್ತ್ರ ಪಡೆಗಳನ್ನು ಹೇಗೆ ನೋಡಿಕೊಳ್ಳಲಾಗುತ್ತಿದೆ ಎಂದು ಅನುಮಾನಗಳನ್ನು ಹುಟ್ಟುಹಾಕುತ್ತಿರುವುದು ದುರದೃಷ್ಟಕರ. ಸಶಸ್ತ್ರ ಪಡೆಗಳು ತಮ್ಮ ಸಿಬ್ಬಂದಿಗೆ ಸಾಧ್ಯವಾದಷ್ಟು ಉತ್ತಮ ಚಿಕಿತ್ಸೆಯನ್ನು ನೀಡುತ್ತವೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT