ಭಾರಿ ಪ್ರಮಾಣದ ಶಸ್ತ್ರಾಸ್ತ್ರ ವಶಕ್ಕೆ 
ದೇಶ

ಉಗ್ರರ ಬೃಹತ್ ಅಡಗುದಾಣ ಧ್ವಂಸ ಮಾಡಿದ ಸೇನೆ, ಭಾರಿ ಪ್ರಮಾಣದ ಶಸ್ತ್ರಾಸ್ತ್ರ ವಶಕ್ಕೆ!

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ಭಾರಿ ಕಾರ್ಯಾಚರಣೆ ನಡೆಸಿದ್ದು, ರಜೌರಿಯಲ್ಲಿದ್ದ ಉಗ್ರರ ಬೃಹತ್ ಅಡಗುದಾಣವನ್ನು ಧ್ವಂಸ ಮಾಡಿ ಅಲ್ಲಿದ್ದ ಭಾರಿ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದಿದೆ.

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ಭಾರಿ ಕಾರ್ಯಾಚರಣೆ ನಡೆಸಿದ್ದು, ರಜೌರಿಯಲ್ಲಿದ್ದ ಉಗ್ರರ ಬೃಹತ್ ಅಡಗುದಾಣವನ್ನು ಧ್ವಂಸ ಮಾಡಿ ಅಲ್ಲಿದ್ದ ಭಾರಿ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದಿದೆ.

ಮಾರಕ ಕೊರೋನಾ ವೈರಸ್ ಅಟ್ಟಹಾಸದ ನಡುವೆಯೇ ಇತ್ತ ಗಡಿಯಲ್ಲಿ ಪಾಕಿಸ್ತಾನ ಮೂಲದ ಉಗ್ರರ ಉಪಟಳ ಕೂಡ ಮುಂದುವರೆದಿದ್ದು, ಇದಕ್ಕೆ ಭಾರತೀಯ ಸೇನೆ ಖಡಕ್ ತಿರುಗೇಟು ನೀಡಿದೆ. ಕಳೆದ ಕೆಲ ವಾರಗಳಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ವಿರುದ್ಧ ಕಾರ್ಯಾಚರಣೆಯನ್ನು ಸೇನೆ ಮುಂದುವರೆಸಿದ್ದು, ಇಂದು ರಜೌರಿಯಲ್ಲಿದ್ದ ಉಗ್ರರ ರಹಸ್ಯ ಅಡಗುದಾಣದ ಮೇಲೆ ದಾಳಿ ಮಾಡಿ ಭಾರಿ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದೆ. 

ಸ್ಖಳೀಯ ಪೊಲೀಸರು ಮತ್ತು ಸೇನೆಯ ರಾಷ್ಟ್ರೀಯ ಸಶಸ್ತ್ರ ದಳದ ಸಿಬ್ಬಂದಿ ಇಂದು ರಜೌರಿಯ ಥಾಣಾ ಮಂಡಿ ಪ್ರದೇಶದಲ್ಲಿನ ದರ್ದಾಸನ್ ಗ್ರಾಮದಲ್ಲಿನ ಉಗ್ರರ ಅಡಗುದಾಣ ಮೇಲೆ ದಾಳಿ ಮಾಡಿದ್ದಾರೆ.  ಈ ವೇಳೆ ಉಗ್ರರು ಹುದುಗಿಸಿಟ್ಟದ್ದ ಭಾರಿ ಪ್ರಮಾಣದ ಶಸ್ತ್ರಾಸ್ತ್ರಗಳು ಪತ್ತೆಯಾಗಿವೆ. ಇನ್ನು ಇದೇ ಜಾಗದಲ್ಲಿ ಚೀನಾ ನಿರ್ಮಿತ  ಪಿಸ್ತೂಲ್ ಗಳು, 2 ಬುಲೆಟ್ ಮ್ಯಾಗಜಿನ್ ಗಳು, ಬ್ಯಾರೆಲ್ ಗ್ರೆನೇಡ್ ಗಳು ಮತ್ತು ಲಾಂಚರ್ ಗಳು, 11 ರೈಫಲ್ ಗ್ರೆನೇಡ್ ಗಳು, ಎಕೆ 47 ಬುಲೆಟ್ ನ 14 ಮ್ಯಾಗಜಿನ್ ಗಳು (920), ಚೀನಾ ನಿರ್ಮಿತ ಹ್ಯಾಂಡ್ ಗ್ರೆನೇಡ್ ಗಳು ಪತ್ತೆಯಾಗಿವೆ ಎಂದು ಸೇನಾ ಮೂಲಗಳು ತಿಳಿಸಿವೆ. 

ಇದಲ್ಲದೆ ಐಇಡಿ ಸ್ಫೋಟಕಗಳ ತಯಾರಿಕೆಯಲ್ಲಿ ಬಳಸುವ ವಸ್ತುಗಳು, ಸ್ಫೋಟಕಗಳು, ವೈರಸ್ ಗಳು, ಬ್ಯಾಟರಿಗಳು ಕೂಡ ಲಭ್ಯವಾಗಿವೆ. ಪ್ರಸ್ತುತ ಈ ದಾಳಿಯಲ್ಲಿ ಯಾವುದೇ ಉಗ್ರರೂ ದೊರೆಯದೇ ಇದ್ದರೂ ಉಗ್ರರ ಭಾರಿ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ಸೇನೆ ವಶಪಡಿಸಿಕೊಂಡಿವೆ. ಅಲ್ಲದೆ ಈ ಅಡಗುದಾಣವನ್ನು ಸೇನೆ ಧ್ವಂಸ ಮಾಡಿದೆ ಎಂದು ತಿಳಿದುಬಂದಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT