ವೆಂಕಯ್ಯ ನಾಯ್ಡು 
ದೇಶ

ಸ್ವಾವಲಂಭಿ ಭಾರತ: 'ಲೋಕಲ್' ಭಾರತವನ್ನು 'ಗ್ಲೋಕಲ್' ಆಗಿ ಪರಿವರ್ತಿಸಲು ವೆಂಕಯ್ಯ ನಾಯ್ಡು ಕರೆ

ದೇಶದ ಪ್ರತಿ ನಾಗರಿಕ ಕೂಡ "ಸ್ಥಳೀಯ ಭಾರತ"ವನ್ನು "ಗ್ಲೋಕಲ್ ಇಂಡಿಯಾ" (ಗ್ಲೋಬಲ್ ಮತ್ತು ಲೋಕಲ್) ಆಗಿ ಪರಿವರ್ತಿಸುವ 'ಸ್ವಾವಲಂಬಿ ಭಾರತ' ಅಭಿಯಾನ ಕೈಗೊಳ್ಳಬೇಕು ಎಂದು ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಕರೆ ನೀಡಿದ್ದಾರೆ.

ನವದೆಹಲಿ: ದೇಶದ ಪ್ರತಿ ನಾಗರಿಕ ಕೂಡ "ಸ್ಥಳೀಯ ಭಾರತ"ವನ್ನು "ಗ್ಲೋಕಲ್ ಇಂಡಿಯಾ" (ಗ್ಲೋಬಲ್ ಮತ್ತು ಲೋಕಲ್) ಆಗಿ ಪರಿವರ್ತಿಸುವ 'ಸ್ವಾವಲಂಬಿ ಭಾರತ' ಅಭಿಯಾನ ಕೈಗೊಳ್ಳಬೇಕು ಎಂದು ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಕರೆ ನೀಡಿದ್ದಾರೆ. 

ಉಪರಾಷ್ಟ್ರಪತಿ ನಿವಾಸದಲ್ಲಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಎಲಿಮೆಂಟ್ ಮೊಬೈಲ್ ಅಪ್ಲಿಕೇಶನ್‌ನ ವರ್ಚುವಲ್ ಬಿಡುಗಡೆ ಸಂದರ್ಭದಲ್ಲಿ ಮಾತನಾಡಿದ ಅವರು, ದೇಶದಲ್ಲಿ ನಾವೀನ್ಯತೆ ಮತ್ತು ಉದ್ಯಮಶೀಲತೆ ವೃದ್ಧಿಗೆ ಸೂಕ್ತ ಪರಿಸರ ವ್ಯವಸ್ಥೆ ರಚಿಸಬೇಕೆಂದು ಕರೆ ನೀಡಿದರು. 

ಆಧುನಿಕ ತಂತ್ರಜ್ಞಾನ, ಮಾನವ ಸಂಪನ್ಮೂಲದ ಸದ್ಭಳಕೆ, ಪೂರೈಕೆ ಸರಣಿಯನ್ನು ರಚಿಸುವ ಮೂಲಕ ಮೂಲಸೌಕರ್ಯಗಳನ್ನು ಬಲಪಡಿಸುವ ಮೂಲಕ ದೇಶದ ಆರ್ಥಿಕ ಸಾಮರ್ಥ್ಯಕ್ಕೆ ಒತ್ತು ನೀಡುವುದು ಸ್ವಾವಲಂಬಿ ಭಾರತ ಅಭಿಯಾನದ ಉದ್ದೇಶ ಎಂದರು. 

ಸ್ವಾವಲಂಬಿ ಭಾರತ' ಅಭಿಯಾನ ಯಾವುದೇ ರಕ್ಷಣಾತ್ಮಕತೆ ಅಥವಾ ಪ್ರತ್ಯೇಕತೆಯ ಕರೆಯಲ್ಲ, ಆದರೆ ಉದ್ಯಮಶೀಲತೆಯನ್ನು ಬೆಳೆಸುವ, ನಾವೀನ್ಯತೆಯನ್ನು ಪೋಷಿಸುವ ಮತ್ತು ಗ್ರಾಮೀಣ ಮತ್ತು ನಗರದ ಸಹಜೀವನದ ಅಭಿವೃದ್ಧಿಗೆ ಪರಿಸರ ವ್ಯವಸ್ಥೆಯನ್ನು ಸೃಷ್ಟಿಸುವ ಯೋಜನೆಯಾಗಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT