ಸಾಂದರ್ಭಿಕ ಚಿತ್ರ 
ದೇಶ

ಕೋವಿಡ್-19 ಸೋಂಕಿನಿಂದ 1984 ಸಿಖ್ ವಿರೋಧಿ ಹಿಂಸಾಚಾರದ ಆರೋಪಿ ಸಾವು

1984ರ ಸಿಖ್ ವಿರೋಧಿ ಹಿಂಸಾಚಾರ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿದ್ದ ಮಾಜಿ ಶಾಸಕರೊಬ್ಬರು ಕೋವಿಡ್-19 ಸೋಂಕಿನಿಂದ ರಾಷ್ಟ್ರ ರಾಜಧಾನಿಯ ಆಸ್ಪತ್ರೆಯೊಂದರಲ್ಲಿ ಇಂದು ಸಾವನ್ನಪ್ಪಿದ್ದಾರೆ.

ನವದೆಹಲಿ:1984ರ ಸಿಖ್ ವಿರೋಧಿ ಹಿಂಸಾಚಾರ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿದ್ದ ಮಾಜಿ ಶಾಸಕರೊಬ್ಬರು ಕೋವಿಡ್-19 ಸೋಂಕಿನಿಂದ ರಾಷ್ಟ್ರ ರಾಜಧಾನಿಯ ಆಸ್ಪತ್ರೆಯೊಂದರಲ್ಲಿ ಇಂದು ಸಾವನ್ನಪ್ಪಿದ್ದಾರೆ.

ಮಾಂಡೋಲಿ ಜೈಲಿನಲ್ಲಿದ್ದ ಎರಡನೇ ಖೈದಿ ಸೋಂಕಿನಿಂದ ಸಾವನ್ನಪ್ಪಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ. ಪಾಲಂ ಕ್ಷೇತ್ರದ ಮಾಜಿ ಶಾಸಕ ಮಹೇಂದರ್ ಯಾದವ್ (70) ಮೃತಪಟ್ಟವರಾಗಿದ್ದಾರೆ.

10 ವರ್ಷಗಳ ಜೈಲುಶಿಕ್ಷೆಗೊಳಗಾಗಿದ್ದ ಅವರನ್ನು ಮಾಂಡೋಲಿ ಕಾರಾಗೃಹದ ಕೊಠಡಿ ಸಂಖ್ಯೆ 14ರಲ್ಲಿ  ಇಡಲಾಗಿತ್ತು. ಜೂನ್ 26ರಂದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ಅವರು ತಿಳಿಸಿದ್ದಾರೆ. ಇದೇ ಸಂಖ್ಯೆಯ ಕೊಠಡಿಯಲ್ಲಿದ್ದ ಮತ್ತೋರ್ವ ಆರೋಪಿ ಕಾನ್ವರ್ ಸಿಂಗ್  ಕಳೆದ ತಿಂಗಳು ಕೊರೋನಾದಿಂದ ಮೃತಪಟ್ಟಿದ್ದರು.

ಉಸಿರಾಟ ಹಾಗೂ ಹೃದಯ ಸಂಬಂಧಿತ ತೊಂದರೆಯಾಗುತ್ತಿರುವುದಾಗಿ ಯಾದವ್ ಹೇಳಿದ್ದರಿಂದ ಜೂನ್ 26 ರಂದು ಡಿಡಿಯು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ನಂತರ ಎಲ್ ಎನ್ ಜೆಪಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು ಎಂದು ಕಾರಾಗೃಹದ ಮಹಾನಿರ್ದೇಶಕ ಸಂದೀಪ್ ಗೋಯೆಲ್ ಹೇಳಿದ್ದಾರೆ.

ನಂತರ ಕುಟುಂಬಸ್ಥರ ಮನವಿ ಮೇರೆಗೆ ಪೊಲೀಸ್ ಭದ್ರತೆಯಲ್ಲಿ ದ್ವಾರಕದ ಖಾಸಗಿ ಆಸ್ಪತ್ರೆಯೊಂದಕ್ಕೆ ಜೂನ್ 30ರಂದು ರವಾನಿಸಲಾಯಿತು. ಜುಲೈ 4ರಂದು ಮಹೇಂದರ್ ಯಾದವ್ ಮೃತಪಟ್ಟಿರುವುದಾಗಿ ಆಕಾಶ್ ಆಸ್ಪತ್ರೆಯಿಂದ ಮಾಹಿತಿ ದೊರೆಯಿತು ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT