ಅಮರನಾಥ ಗುಹೆ 
ದೇಶ

ಇತಿಹಾಸದಲ್ಲೇ ಮೊದಲ ಬಾರಿಗೆ ಅಮರನಾಥ ಗುಹಾಲಿಂಗ ಆರತಿಯ ನೇರ ಪ್ರಸಾರಕ್ಕೆ ವ್ಯವಸ್ಥೆ!

ಅಮರನಾಥ ಗುಹೆಯಲ್ಲಿನ ಮಂಜಿನ ಶಿವಲಿಂಗಕ್ಕೆ ನಡೆಯುವ ಆರತಿಯನ್ನು ಇತಿಹಾಸದಲ್ಲೇ ಮೊದಲ ಬಾರಿಗೆ ನೇರ ಪ್ರಸಾರಕ್ಕೆ ವ್ಯವಸ್ಥೆ ಮಾಡಲಾಗಿದೆ. 

ಕಾಶ್ಮೀರ: ಅಮರನಾಥ ಗುಹೆಯಲ್ಲಿನ ಮಂಜಿನ ಶಿವಲಿಂಗಕ್ಕೆ ನಡೆಯುವ ಆರತಿಯನ್ನು ಇತಿಹಾಸದಲ್ಲೇ ಮೊದಲ ಬಾರಿಗೆ ನೇರ ಪ್ರಸಾರಕ್ಕೆ ವ್ಯವಸ್ಥೆ ಮಾಡಲಾಗಿದೆ. 

ಕೋವಿಡ್-19 ಹಿನ್ನೆಲೆಯಲ್ಲಿ ಈ ಬಾರಿ ಯಾತ್ರಾರ್ಥಿಗಳಿಗೆ ನಿರ್ಬಂಧ ವಿಧಿಸಿರುವುದರಿಂದ ಅಮರನಾಥ ದೇವಾಲಯ ಮಂಡಳಿ, ಅಮರನಾಥ ಗುಹೆಯ ಶಿವಲಿಂಗಕ್ಕೆ ನಡೆಯುವ ಆರತಿಯನ್ನು ಡಿಡಿ ವಾಹಿನಿಯಲ್ಲಿ ಪ್ರಸಾರ ಮಾಡಲು ನಿರ್ಧರಿಸಿದ್ದು, ಇದಕ್ಕೆ ಬೇಕಾದ ವ್ಯವಸ್ಥೆಗಳನ್ನು ನಡೆಸಿದೆ.

ಈ ಹಿಂದಿನ ಯೋಜನೆಯ ಪ್ರಕಾರ ಜಮ್ಮು-ಕಾಶ್ಮೀರ ಆಡಳಿತ ಅಮರನಾಥ ಯಾತ್ರೆಯ ವೇಳೆ 500 ಯಾತ್ರಾರ್ಥಿಗಳಿಗೆ ಮಾತ್ರ ಪ್ರವೇಶ ಕಲ್ಪಿಸುವುದಕ್ಕೆ ನಿರ್ಧರಿಸಿತ್ತು. ಟ್ವಿನ್ ಟ್ರ್ಯಾಕ್ ನ ಅನಂತ್ ನಾಗ್ ನ ಪಹಲ್ಗಾಮ್ ಹಾಗೂ ಗಂದೇರ್‌ಬಾಲ್‌ ಜಿಲ್ಲೆಯ ಬಲ್ಟಾಲ್ ನ ಮೂಲಕ ಜೂ.23 ರಿಂದ ಯಾತ್ರಾರ್ಥಿಗಳಿಗೆ ಪ್ರವೇಶ ಕಲ್ಪಿಸಲು ತೀರ್ಮಾನಿಸಲಾಗಿತ್ತು. ಆಷಾಢ ಪೂರ್ಣಿಮೆಯ ದಿನದಂದು ಜಮ್ಮು-ಕಾಶ್ಮೀರದ ಲೆಫ್ಟಿನೆಂಟ್ ಗೌರ್ನರ್ ಜಿಸಿ ಮುರ್ಮು ಅಮರನಾಥ ಗುಹೆಯಲ್ಲಿ ಪ್ರಥಮ ಆರತಿಯನ್ನು ನೆರವೇರಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT