ಸಿಎಂ ಪಿಣರಾಯಿ ವಿಜಯನ್ 
ದೇಶ

ಕೇರಳದ ತಿರುವನಂತಪುರದಲ್ಲಿ ಇನ್ನೊಂದು ವಾರ ಟ್ರಿಪಲ್ ಲಾಕ್ ಡೌನ್: ತುರ್ತು ಸೇವೆ ಹೊರತುಪಡಿಸಿ ಬೇರೆಲ್ಲಾ ಬಂದ್!

ಸ್ಥಳೀಯ ಸಂಪರ್ಕದಿಂದ ಕೇರಳ ರಾಜಧಾನಿ ತಿರುವನಂತಪುರದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿರುವಂತೆ ಅಲ್ಲಿನ ಸರ್ಕಾರ ಟ್ರಿಪಲ್ ಲಾಕ್ ಡೌನ್ (ಹೆಚ್ಚಿನ ನಿರ್ಬಂಧ) ಘೋಷಿಸಿ ಮುಂದಿನ ಒಂದು ವಾರ ನಗರವನ್ನು ಸಂಪೂರ್ಣ ಬಂದ್ ಮಾಡಿದೆ.

ತಿರುವನಂತಪುರಂ:ಸ್ಥಳೀಯ ಸಂಪರ್ಕದಿಂದ ಕೇರಳ ರಾಜಧಾನಿ ತಿರುವನಂತಪುರದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿರುವಂತೆ ಅಲ್ಲಿನ ಸರ್ಕಾರ ಟ್ರಿಪಲ್ ಲಾಕ್ ಡೌನ್(ಹೆಚ್ಚಿನ ನಿರ್ಬಂಧ) ಘೋಷಿಸಿ ಮುಂದಿನ ಒಂದು ವಾರ ನಗರವನ್ನು ಸಂಪೂರ್ಣ ಬಂದ್ ಮಾಡಿದೆ.

ಇಂದು ಸಂಜೆ 6 ಗಂಟೆಯಿಂದ ತ್ರಿವಳಿ ಲಾಕ್ ಡೌನ್ ತಿರುವನಂತಪುರ ನಗರದಲ್ಲಿ ಜಾರಿಗೆ ಬರಲಿದೆ. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನೇತೃತ್ವದಲ್ಲಿ ನಿನ್ನೆ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು. ವೈದ್ಯಕೀಯ ತುರ್ತು ಹೊರತುಪಡಿಸಿ ನಗರದ ಜನತೆಯನ್ನು ಇನ್ನೊಂದು ವಾರ ಹೊರಗೆ ಬಿಡಲಾಗುವುದಿಲ್ಲ.

ಸರ್ಕಾರಿ, ಖಾಸಗಿ ಮತ್ತು ಸಚಿವಾಲಯ ಕಚೇರಿಗಳು ತಿರುವನಂತಪುರದಲ್ಲಿ ಇನ್ನೊಂದು ವಾರ ಮುಚ್ಚಿರುತ್ತವೆ. ಕೇವಲ ನಗರಕ್ಕೆ ತುರ್ತು ಕೆಲಸಗಳಿಗೆ ಬರುವವರಿಗೆ ಮಾತ್ರ ಇನ್ನೊಂದು ವಾರ ಅವಕಾಶವಿದ್ದು ಪುನಃ ಹೊರಗೆ ಹೋಗಲು ಸಾಧ್ಯವಿಲ್ಲ. ಯಾವುದೇ ಸರ್ಕಾರಿ ಮತ್ತು ಖಾಸಗಿ ವಾಹನಗಳನ್ನು ಬಿಡುವುದಿಲ್ಲ.

ನಗರದಲ್ಲಿ ನ್ಯಾಯಾಲಯಗಳು ಸಹ ಇನ್ನೊಂದು ವಾರ ಮುಚ್ಚಿರುತ್ತದೆ. ತುರ್ತು ವಿಚಾರಣೆ, ಜಾಮೀನು ಅರ್ಜಿ ಇತ್ಯಾದಿಗಳನ್ನು ಆನ್ ಲೈನ್ ನಲ್ಲಿ ನಡೆಸಲಾಗುತ್ತದೆ. ಜನರ ಬೇಡಿಕೆಗಳಿಗನುಗುಣವಾಗಿ ಪೊಲೀಸರೇ ವಸ್ತುಗಳನ್ನು ಜನರ ಮನೆಬಾಗಿಲಿಗೆ ತಂದು ಕೊಡಲಿದ್ದಾರೆ. ಸೇವೆಗಳನ್ನು ಪಡೆಯಲು ಜನರಿಗೆ ಇಂದು ಸಂಖ್ಯೆಯೊಂದನ್ನು ನೀಡಲಾಗುತ್ತದೆ. ಅದನ್ನು ಪೊಲೀಸರು ಇಂದು ಸಾಯಂಕಾಲದೊಳಗೆ ತಿಳಿಸಲಿದ್ದಾರೆ. ಔಷಧಿ ಮಳಿಗೆಗಳು, ಆಸ್ಪತ್ರೆಗಳು ಮತ್ತು ಬ್ಯಾಂಕ್ ಗಳು ಎಂದಿನಂತೆ ಕಾರ್ಯನಿರ್ವಹಿಸುತ್ತವೆ.

ಸ್ಥಳೀಯ ಸಂಪರ್ಕದಿಂದ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ಕ್ರಮ ಕೈಗೊಂಡಿದೆ. ನಿನ್ನೆ ರಾಜ್ಯದಲ್ಲಿ ವರದಿಯಾದ 38 ಪ್ರಕರಣಗಳಲ್ಲಿ 22 ತಿರುವನಂತಪುರದಲ್ಲೇ ಆಗಿವೆ. ಸ್ಥಳೀಯ ಮಟ್ಟದಲ್ಲಿ ವರದಿಯಾದ 22 ಪ್ರಕರಣಗಳಲ್ಲಿ 14 ಪ್ರಕರಣಗಳಲ್ಲಿ ಸೋಂಕು ಎಲ್ಲಿಂದ ತಗುಲಿತು ಎಂದೇ ಪತ್ತೆಯಾಗಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT