ಪಾಕ್ ಆಕ್ರಮಿತ ಕಾಶ್ಮೀರ ಭಾಗದ ಜನರಿಂದ ಪ್ರತಿಭಟನೆ 
ದೇಶ

ನೀಲಂ ಜೆಲುಮ್ ನದಿಗೆ ಅಣೆಕಟ್ಟು ನಿರ್ಮಾಣ: ಪಾಕಿಸ್ತಾನ, ಚೀನಾ ಸರ್ಕಾರಗಳ ವಿರುದ್ಧ ಪಿಒಕೆ ನಿವಾಸಿಗಳಿಂದ ಪ್ರತಿಭಟನೆ

ಭಾರತದ ಗಡಿ ಮುಜಾಫರ್ ಬಾದ್ ನ ನೀಲಮ್ ಮತ್ತು ಜೆಲುಮ್ ನದಿಗಳ ಮೇಲೆ ಅಣೆಕಟ್ಟು ನಿರ್ಮಾಣವನ್ನು ವಿರೋಧಿಸಿ ಪಾಕ್ ಆಕ್ರಮಿತ ಕಾಶ್ಮೀರ ಭಾಗದ ನಿವಾಸಿಗಳು ಪಾಕಿಸ್ತಾನ ಮತ್ತು ಚೀನಾ ಸರ್ಕಾರಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ.

ಮುಜಾಫರ್ ಬಾದ್ (ಪಾಕ್ ಆಕ್ರಮಿತ ಕಾಶ್ಮೀರ) ಭಾರತದ ಗಡಿ ಮುಜಾಫರ್ ಬಾದ್ ನ ನೀಲಮ್ ಮತ್ತು ಜೆಲುಮ್ ನದಿಗಳ ಮೇಲೆ ಅಣೆಕಟ್ಟು ನಿರ್ಮಾಣವನ್ನು ವಿರೋಧಿಸಿ ಪಾಕ್ ಆಕ್ರಮಿತ ಕಾಶ್ಮೀರ ಭಾಗದ ನಿವಾಸಿಗಳು ಪಾಕಿಸ್ತಾನ ಮತ್ತು ಚೀನಾ ಸರ್ಕಾರಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ.

ಚೀನಾ ಮತ್ತು ಪಾಕಿಸ್ತಾನ ಸರ್ಕಾರ ಅಣೆಕಟ್ಟು ನಿರ್ಮಾಣಕ್ಕೆ ಒಪ್ಪಂದ ಮಾಡಿಕೊಂಡಿದ್ದು, ಈ ಬಗ್ಗೆ ನಮ್ಮ ಬಳಿ ಅಭಿಪ್ರಾಯವನ್ನು ತೆಗೆದುಕೊಂಡಿಲ್ಲ. ಅಣೆಕಟ್ಟನ್ನು ಅಕ್ರಮವಾಗಿ ನಿರ್ಮಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ನೀಲಂ ಜೆಲುಮ್ ಮತ್ತು ಕೊಹಲಾ ಜಲ ವಿದ್ಯುತ್ ಯೋಜನೆಗಳನ್ನು ವಿರೋಧಿಸಿ ಪಾಕ್ ಆಕ್ರಮಿತ ಕಾಶ್ಮೀರ ಭಾಗದ ಜನರು ನಿನ್ನೆಯಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಅಣೆಕಟ್ಟು ನಿರ್ಮಾಣದಿಂದ ಪರಿಸರದ ಮೇಲೆ ಹಾನಿಯುಂಟಾಗುತ್ತದೆ ಎಂಬ ವಿರೋಧ ಇಲ್ಲಿನ ನಿವಾಸಿಗಳದ್ದು.

#SaveRiversSaveAJK ಎಂಬ ಹ್ಯಾಶ್ ಟಾಗ್ ನೊಂದಿಗೆ ಸೋಷಿಯಲ್ ಮೀಡಿಯಾದಲ್ಲಿ ಅಭಿಯಾನ ನಡೆಯುತ್ತಿದೆ.
ಪಾಕಿಸ್ತಾನ ಮತ್ತು ಚೀನಾ ಮಧ್ಯೆ ಯಾವ ಕಾನೂನಿನ ಆಧಾರದ ಮೇಲೆ ಅಣೆಕಟ್ಟು ನಿರ್ಮಾಣಕ್ಕೆ ಒಪ್ಪಂದ ಮಾಡಿಕೊಳ್ಳಲಾಗಿದೆ. ನದಿಗಳನ್ನು ಬಳಸಿಕೊಂಡು ಪಾಕ್ ಮತ್ತು ಚೀನಾ ವಿಶ್ವಸಂಸ್ಥೆಯ ಭದ್ರತಾ ಮಂಡಳಿ ನಿರ್ಣಯಗಳನ್ನು ಉಲ್ಲಂಘಿಸುತ್ತಿದ್ದಾರೆ ಎಂದು ಪ್ರತಿಭಟಾನಾಕಾರರು ಆರೋಪಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT