ಭಾರತ-ಚೀನಾ ಸೇನೆ 
ದೇಶ

ಹಾಟ್ ಸ್ಪ್ರಿಂಗ್ಸ್ ಮತ್ತು ಗೋಗ್ರಾದಲ್ಲಿ ಕೆಲ ದಿನಗಳಲ್ಲೇ ಭಾರತ-ಚೀನಾ ಸೇನೆ ಸಂಪೂರ್ಣ ಹಿಂದಕ್ಕೆ: ಸೇನಾ ಮೂಲಗಳು

ಪೂರ್ವ ಲಡಾಖ್ ನ ಹಾಟ್ ಸ್ಪ್ರಿಂಗ್ಸ್ ಮತ್ತು ಗೋಗ್ರಾದಲ್ಲಿ ಭಾರತ ಮತ್ತು ಚೀನಾ ಸೈನಿಕರನ್ನು ಹಿಂದಕ್ಕೆ ಕರೆಸಿಕೊಳ್ಳುವ ಪ್ರಕ್ರಿಯೆಯು ನಡೆಯುತ್ತಿದೆ. ಇನ್ನು ಕೆಲವೇ ದಿನಗಳಲ್ಲಿ ಎರಡೂ ಸ್ಥಳಗಳಲ್ಲಿ ಸೇನೆ ನಿಯೋಜನೆ ಸಂಪೂರ್ಣ ನಿಷ್ಕ್ರಿಯಗೊಳ್ಳಲಿದೆ ಎಂದು ಭಾರತೀಯ ಸೇನೆ ಮೂಲಗಳಿಂದ ತಿಳಿದುಬಂದಿದೆ.

ನವದೆಹಲಿ: ಪೂರ್ವ ಲಡಾಖ್ ನ ಹಾಟ್ ಸ್ಪ್ರಿಂಗ್ಸ್ ಮತ್ತು ಗೋಗ್ರಾದಲ್ಲಿ ಭಾರತ ಮತ್ತು ಚೀನಾ ಸೈನಿಕರನ್ನು ಹಿಂದಕ್ಕೆ ಕರೆಸಿಕೊಳ್ಳುವ ಪ್ರಕ್ರಿಯೆಯು ನಡೆಯುತ್ತಿದೆ. ಇನ್ನು ಕೆಲವೇ ದಿನಗಳಲ್ಲಿ ಎರಡೂ ಸ್ಥಳಗಳಲ್ಲಿ ಸೇನೆ ನಿಯೋಜನೆ ಸಂಪೂರ್ಣ ನಿಷ್ಕ್ರಿಯಗೊಳ್ಳಲಿದೆ ಎಂದು ಭಾರತೀಯ ಸೇನೆ ಮೂಲಗಳಿಂದ ತಿಳಿದುಬಂದಿದೆ.

ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಜುಲೈ 5ರಂದು ದೂರವಾಣಿ ಸಂಭಾಷಣೆ ನಡೆಸಿ ವಾಸ್ತವ ಗಡಿ ರೇಖೆ(ಎಲ್‌ಎಸಿ)ಯಲ್ಲಿ 'ತ್ವರಿತ' ವಿಸರ್ಜನೆಗೆ ಒಪ್ಪಿದ ಒಂದು ದಿನದ ನಂತರ, ಚೀನಾದ ಹಲವಾರು ಸೈನಿಕರು ಹಿಂದಕ್ಕೆ ಹೋಗಲು ಪ್ರಾರಂಭಿಸಿದ್ದಾರೆ.

ಕಳೆದ ಎಂಟು ವಾರಗಳಿಂದ ಪೂರ್ವ ಮತ್ತು ಲಡಾಖ್‌ನ ಅನೇಕ ಸ್ಥಳಗಳಲ್ಲಿ ಭಾರತೀಯ ಮತ್ತು ಚೀನೀ ಸೈನ್ಯಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ನಿಯೋಜಿಸಲಾಗಿತ್ತು. ಜೂನ್ 15 ರಂದು ಗಾಲ್ವಾನ್ ಕಣಿವೆಯಲ್ಲಿ ಚೀನಾದ ಪೀಪಲ್ಸ್ ಲಿಬರೇಶನ್ ಆರ್ಮಿ ಭಾರತೀಯ ಸೈನಿಕರ ಮೇಲೆ 'ಪೂರ್ವನಿಯೋಜಿತ' ದಾಳಿಯನ್ನು ನಡೆಸಿದ ನಂತರ ಏಷ್ಯಾದ ಇಬ್ಬರು ದೈತ್ಯರ ನಡುವಿನ ಸಂಬಂಧ ಹದಗೆಟ್ಟಿತು. 

ಈ ಸಂಘರ್ಷದಲ್ಲಿ 20 ಭಾರತೀಯ ಯೋಧರು ಹುತಾತ್ಮರಾಗಿದ್ದರು. ಅಲ್ಲದೆ ಚೀನಾ ಕಡೆಯೂ ಸುಮಾರು 30-40 ಸೈನಿಕರು ಸಹ ಸಾವನ್ನಪ್ಪಿದ್ದಾರೆ ಎಂದು ವರದಿಗಳು ಪ್ರಕಟವಾಗಿದ್ದರೂ ಬೀಜಿಂಗ್ ಮಾತ್ರ ಇನ್ನೂ ಅಧಿಕೃತ ಹೇಳಿಕೆಯನ್ನು ಬಿಡುಗಡೆ ಮಾಡಿಲ್ಲ.

ಗೋಗ್ರಾ(ಪ್ಯಾಟ್ರೋಲಿಂಗ್ ಪಾಯಿಂಟ್ 15) ಹಾಗೂ ಹಾಟ್ ಸ್ಪ್ರಿಂಗ್ಸ್(ಪ್ಯಾಟ್ರೋಲಿಂಗ್ ಪಾಯಿಂಟ್ 17)ನಿಂದ ಚೀನಾ ತನ್ನ ಸೇನೆಯನ್ನು ಹಿಂದಕ್ಕೆ ಪಡೆಯಲು ಆರಂಭಿಸಿದೆ. ಇದೇ ವೇಳೆ ಚೀನಾ ಸೈನಿಕರು ಕೂಡ ಪಿಂಗರ್ 4ರಲ್ಲಿ ನಿರ್ಮಿಸಿದ್ದ ತನ್ನ ರಚನೆಗಳನ್ನು ಕೂಡ ತೆಗೆದು ಹಾಕಲು ಕ್ರಮಕೈಗೊಂಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT