ಮರ್ಕಜ್ ನಿಜಾಮುದ್ದೀನ್ ಗೆ ತೆರಳಿದ್ದ 122 ಮಲೇಷಿಯನ್ನರಿಗೆ ಜಾಮೀನು! 
ದೇಶ

ಮರ್ಕಜ್ ನಿಜಾಮುದ್ದೀನ್ ಗೆ ತೆರಳಿದ್ದ 122 ಮಲೇಷಿಯನ್ನರಿಗೆ ಜಾಮೀನು!

ಕೋವಿಡ್-19 ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ವಿಧಿಸಿದ್ದ ನಿರ್ಬಂಧಗಳನ್ನು ಉಲ್ಲಂಘನೆ ಮಾಡಿ ನಿಜಾಮುದ್ದೀನ್ ಮರ್ಕಜ್ ಧಾರ್ಮಿಕ ಸಭೆಯಲ್ಲಿ ಭಾಗಿಯಾಗಿದ್ದ 122 ಮಲೇಷಿಯನ್ನರಿಗೆ ಜಾಮೀನು ಮಂಜೂರು ಮಾಡಲಾಗಿದೆ.

ನವದೆಹಲಿ: ಕೋವಿಡ್-19 ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ವಿಧಿಸಿದ್ದ ನಿರ್ಬಂಧಗಳನ್ನು ಉಲ್ಲಂಘನೆ ಮಾಡಿ ನಿಜಾಮುದ್ದೀನ್ ಮರ್ಕಜ್ ಧಾರ್ಮಿಕ ಸಭೆಯಲ್ಲಿ ಭಾಗಿಯಾಗಿದ್ದ 122 ಮಲೇಷಿಯನ್ನರಿಗೆ ಜಾಮೀನು ಮಂಜೂರು ಮಾಡಲಾಗಿದೆ.

ದೆಹಲಿಯ ಚೀಫ್ ಮೆಟ್ರೋಪಾಲಿಟನ್ ನ್ಯಾಯಾಧೀಶರು ಮಲೇಷಿಯನ್ನರಿಗೆ ಜಾಮೀನು ಮಂಜೂರು ಮಾಡಿದ್ದಾರೆ. 

ಕೇಂದ್ರ ಸರ್ಕಾರದ ಲಾಕ್ ಡೌನ್ ನಿರ್ಬಂಧಗಳ ಹೊರತಾಗಿಯೂ ದೆಹಲಿಯ ನಿಜಾಮುದ್ದೀನ್ ಮರ್ಕಜ್ ನಲ್ಲಿ ಭಾಗವಹಿಸಿ, ಅಕ್ರಮ ಮಿಷನರಿ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ, ವೀಸಾ ನಿಯಮಗಳನ್ನು ಉಲ್ಲಂಘನೆ ಮಾಡಿದ್ದ ಆರೋಪವನ್ನು ಇವರುಗಳ ವಿರುದ್ಧ ಹೊರಿಸಲಾಗಿತ್ತು.

ಈಗ 10,000 ರೂಪಾಯಿ ವೈಯಕ್ತಿಕ ಬಾಂಡ್ ನೀಡಲು ಸೂಚನೆ ನೀಡಿರುವ ದೆಹಲಿ ಕೋರ್ಟ್ 122 ಜನ ವಿದೇಶಿಗರಿಗೆ ಜಾಮೀನು ಮಂಜೂರು ಮಾಡಿದೆ.

ಇದೇ ವೇಳೆ ಆರೋಪಿಗಳು ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದು ಶಿಕ್ಷೆಯ ಅವಧಿ ಕಡಿಮೆ ಮಾಡಿಸಬೇಕು ಹಾಗೂ ಈ ಪ್ರಕರಣವನ್ನು ಅತಿ ಶೀಘ್ರವೇ ಇತ್ಯರ್ಥಗೊಳಿಸಬೇಕೆಂದು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಸಿದ್ಧಾರ್ತ್ ಮಾಲಿಕ್ ಗೆ ಮನವಿ ಸಲ್ಲಿಸಿದ್ದರು. ಇದರ ವಿಚಾರಣೆ ಜು.08 ಕ್ಕೆ ನಿಗದಿಪಡಿಸಲಾಗಿದೆ. ಎಲ್ಲಾ ವಿದೇಶಿ ನಾಗರಿಕರು ಹೊಟೆಲ್ ನಲ್ಲಿದ್ದು, ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಕೋರ್ಟ್ ವಿಚಾರಣೆಗೆ ಹಾಜರುಪಡಿಸಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT