ತಿಂಗಳಾಂತ್ಯದವರೆಗೆ ಪತ್ತೆಯಾದ ಕೋವಿಡ್ ಪ್ರಕರಣಗಳಲ್ಲಿ ಶೇ.70 ರಷ್ಟು ಬಂದಿದ್ದು 5 ರಾಜ್ಯಗಳಿಂದ! 
ದೇಶ

ತಿಂಗಳಾಂತ್ಯದವರೆಗೆ ಪತ್ತೆಯಾದ ಕೋವಿಡ್ ಪ್ರಕರಣಗಳಲ್ಲಿ ಶೇ.70 ರಷ್ಟು ಬಂದಿದ್ದು 5 ರಾಜ್ಯಗಳಿಂದ!

ಲಾಕ್ ಡೌನ್ ನಿರ್ಬಂಧಗಳನ್ನು ತೆರವುಗೊಳಿಸಿ ಅನ್ ಲಾಕ್ 1.0 ಘೋಷಣೆ ಮಾಡಿದ ಬಳಿಕ ಜೂನ್ ತಿಂಗಳಾಂತ್ಯದವರೆಗೆ ಪತ್ತೆಯಾದ ಒಟ್ಟಾರೆ ಕೋವಿಡ್-19 ಪ್ರಕರಣಗಳ ಪೈಕಿ 5 ರಾಜ್ಯಗಳದ್ದು ಸಿಂಹಪಾಲು ಎಂಬುದು ಅಂಕಿ-ಅಂಶಗಳಿಂದ ತಿಳಿದುಬಂದಿದೆ.

ನವದೆಹಲಿ: ಲಾಕ್ ಡೌನ್ ನಿರ್ಬಂಧಗಳನ್ನು ತೆರವುಗೊಳಿಸಿ ಅನ್ ಲಾಕ್ 1.0 ಘೋಷಣೆ ಮಾಡಿದ ಬಳಿಕ ಜೂನ್ ತಿಂಗಳಾಂತ್ಯದವರೆಗೆ ಪತ್ತೆಯಾದ ಒಟ್ಟಾರೆ ಕೋವಿಡ್-19 ಪ್ರಕರಣಗಳ ಪೈಕಿ 5 ರಾಜ್ಯಗಳದ್ದು ಸಿಂಹಪಾಲು ಎಂಬುದು ಅಂಕಿ-ಅಂಶಗಳಿಂದ ತಿಳಿದುಬಂದಿದೆ.

ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ನ ಡಾಟಾ ವಿಶ್ಲೇಷಣೆಯ ಪ್ರಕಾರವಾಗಿ ಅನ್ ಲಾಕ್ 1.0 ಘೋಷಣೆಯಾದ ಬಳಿಕ ಜೂನ್ ತಿಂಗಳ 1 ರಂದು ಮಹಾರಾಷ್ಟ್ರ, ತಮಿಳುನಾಡು, ದೆಹಲಿ, ತೆಲಂಗಾಣ, ಆಂಧ್ರಪ್ರದೇಶಗಳಲ್ಲಿ ದೇಶದ ಒಟ್ಟಾರೆ ಪ್ರಕರಣಗಳ ಪೈಕಿ ಶೇ.63 ರಷ್ಟು ಸಕ್ರಿಯ ಕೋವಿಡ್-19 ಪ್ರಕರಣಗಳು ವರದಿಯಾಗಿದ್ದವು. ಅನ್ ಲಾಕ್-1 ರ ಅಂತ್ಯದ ವೇಳೆಗೆ ಈ ಪ್ರಮಾಣ ಶೇ.70ಕ್ಕೆ ಏರಿಕೆಯಾಗಿತ್ತು. ಜೂನ್ ತಿಂಗಳ ಅವಧಿಯಲ್ಲಿ ಈ 5 ರಾಜ್ಯಗಳಲ್ಲಿ ಕೋವಿಡ್-19 ಸಕ್ರಿಯ ಪ್ರಕರಣಗಳ ಸಂಖ್ಯೆ ದುಪ್ಪಟ್ಟು ಅಥವಾ ಅದಕ್ಕಿಂತ ಹೆಚ್ಚಾಗಿದೆ.

ಕಳೆದ ತಿಂಗಳು ತೆಲಂಗಾಣ- ಆಂಧ್ರಪ್ರದೇಶಗಳಲ್ಲಿ ಕೋವಿಡ್-19 ಸಕ್ರಿಯ ಪ್ರಕರಣಗಳು 7 ಪಟ್ಟು ಹೆಚ್ಚಾಗಿದ್ದರೆ, ತಮಿಳುನಾಡಿನಲ್ಲಿ 4 ಪಟ್ಟು ಹೆಚ್ಚಾಗಿದೆ. ಮತ್ತೊಂದು ಮಾದರಿಯ ಅಂಕಿ-ಅಂಶಗಳ ಪ್ರಕಾರ ತಿಂಗಳ ಎರಡನೇ ಭಾಗದಲ್ಲಿ ಪ್ರಕರಣಗಳ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಏರಿಕೆ ಕಂಡಿದೆ.

ದೆಹಲಿ ಹಾಗೂ ಆಂಧ್ರಪ್ರದೇಶಗಳಲ್ಲಿ ಸೋಂಕು ಪರೀಕ್ಷೆ ಹೆಚ್ಚು ಮಾಡಿಸಿದ್ದರಿಂದ ಹೆಚ್ಚಿನ ಪ್ರಕರಣಗಳು ವರದಿಯಾಗಿದೆಯೇ ಎಂಬ ಬಗ್ಗೆ ಸ್ಪಷ್ಟತೆ ಇಲ್ಲ. ಆದರೆ ಜೂ.08 ರ ಅನ್-ಲಾಕ್ 1.0 ರ ನಂತರ ಅಲ್ಲಿ ದೇವಾಲಯಗಳು, ಶಾಪಿಂಗ್ ಮಾಲ್ ಗಳು, ರೆಸ್ಟೋರೆಂಟ್ ಗಳು, ಹೊಟೆಲ್ ಗಳನ್ನು ಪುನಃ ಪ್ರಾರಂಭಿಸಿದರ ನಂತರ ಪ್ರಕರಣಗಳು ಹೆಚ್ಚಾಗಿ ವರದಿಯಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

SCROLL FOR NEXT