ವಿವಾದಿತ ಪ್ರದೇಶದಿಂದ ಚೀನಾ ಸೇನೆ ಹಿಂದಕ್ಕೆ 
ದೇಶ

ಗಲ್ವಾನ್ ಸಂಘರ್ಷ: ವಿವಾದಿತ ಪ್ರದೇಶದಿಂದ ಭಾರತ-ಚೀನಾ ಸೇನೆ ಹಿಂತೆಗೆದ ಕಾರ್ಯ ಪೂರ್ಣ!

ಗಲ್ವಾನ್ ಸಂಘರ್ಷದ ಬಳಿಕ ಗಡಿಯಲ್ಲಿ ಪರಸ್ಪರ ಮುಖಾಮುಖಿಯಾಗಿದ್ದ ಭಾರತ ಮತ್ತು ಚೀನಾ ಸೇನೆ ಇದೀಗ ವಿವಾದಿತ ಪ್ರದೇಶದಿಂದ ಸಂಪೂರ್ಣವಾಗಿ ಸೈನಿಕರನ್ನು ಹಿಂದಕ್ಕೆ ಪಡೆದುಕೊಂಡಿವೆ.

ನವದೆಹಲಿ: ಗಲ್ವಾನ್ ಸಂಘರ್ಷದ ಬಳಿಕ ಗಡಿಯಲ್ಲಿ ಪರಸ್ಪರ ಮುಖಾಮುಖಿಯಾಗಿದ್ದ ಭಾರತ ಮತ್ತು ಚೀನಾ ಸೇನೆ ಇದೀಗ ವಿವಾದಿತ ಪ್ರದೇಶದಿಂದ ಸಂಪೂರ್ಣವಾಗಿ ಸೈನಿಕರನ್ನು ಹಿಂದಕ್ಕೆ ಪಡೆದುಕೊಂಡಿವೆ.

ಹೌದು.. ಕಳೆದ 2 ದಿನಗಳಿಂದ ನಡೆದಿದ್ದ ಸೇನೆ ಹಿಂದಕ್ಕೆ ಕರೆಸಿಕೊಳ್ಳುವ ಕಾರ್ಯ ಇಂದು ಪೂರ್ಣಗೊಂಡಿದ್ದು ವಿವಾದಿತ ಗಲ್ವಾನ್ ಕಣಿವೆಯಿಂದ ಚೀನಾ ಸೇನೆ ತನ್ನ ಯೊಧರನ್ನು 2 ಕಿ,ಮೀ ಹಿಂದಕ್ಕೆ ಕರೆಯಿಸಿಕೊಂಡಿದೆ. ಈ ಬಗ್ಗೆ ಭಾರತೀಯ ಸೇನಾ ಮೂಲಗಳು ಮಾಹಿತಿ ನೀಡಿದ್ದು, ಗಲ್ವಾನ್ ಕಣಿವೆಯಲ್ಲಿ ಮೊಕ್ಕಾಂ ಹೂಡಿದ್ದ ಚೀನಾ ಸೇನೆ ಇದೀಗ ವಿವಾದಿತ ಪ್ರದೇಶದಿಂದ ಸುಮಾರು  2 ಕಿ.ಮೀ ನಷ್ಚು ಹಿಂದಕ್ಕೆ ಹೋಗಿದೆ. 

ಸೇನೆ ಹಿಂದಕ್ಕೆ ಕರೆಯಿಸಿಕೊಳ್ಳುವ ಕಾರ್ಯಕ್ಕೆ ಕಳೆದ 2 ದಿನಗಳ ಹಿಂದೆಯೇ ಚೀನಾ ಸೇನೆ ಚಾಲನೆ ನೀಡಿತ್ತು. ಇಂದು ಆ ಕಾರ್ಯ ಪೂರ್ಣಗೊಂಡಿದೆ. ವಿವಾದಿತ ಸ್ಥಳದಲ್ಲಿ ಚೀನಾ ಸೈನಿಕರು ನಿರ್ಮಿಸಿದ್ದ ಸಂಪೂರ್ಣ ಟೆಂಟ್ ಗಳನ್ನು ತೆರವು ಗೊಳಿಸಿದ್ದು ಮಾತ್ರವಲ್ಲದೇ ಎಲ್ಲ ಸೈನಿಕರೂ ಪ್ಯಾಟ್ರಲಿಂಗ್ ಪಾಯಿಂಟ್ 2 ಕಿ.ಮೀ ಹಿಂದಕ್ಕೆ ಹೋಗಿದ್ದಾರೆ. ಹಾಟ್ ಸ್ಪ್ರಿಂಗ್ಸ್ ಮತ್ತು ಗೋಗ್ರಾ ಪ್ರದೇಶಗಳಿಂದ ಉಭಯ ಸೈನಿಕರೂ ಸಂಪೂರ್ಣವಾಗಿ ತಮ್ಮ ತಮ್ಮ ಟೆಂಟ್ ಗಳನ್ನು ಖಾಲಿ ಮಾಡಿ ಹಿಂದಕ್ಕೆ ಸರಿದಿದ್ದಾರೆ.

ಈ ಹಿಂದೆ ಗಲ್ವಾನ್ ಸಂಘರ್ಷದ ಬಳಿಕ ಉಭಯ ದೇಶಗಳ ಸೇನಾಧಿಕಾರಿಗಳ ನಡುವಿನ ಮಾತುಕತೆ ಫಲಪ್ರದವಾಗಿತ್ತು. ಆದರೂ ಚೀನಾ ಸೇನೆ ವಿವಾದಿತ ಪ್ರದೇಶದಿಂದ ಹಿಂದಕ್ಕೆ ಸರಿದಿರಲಿಲ್ಲ. ಈ ಬಗ್ಗೆ ಚೀನಾ ಗೃಹ ಸಚಿವಾಲಯವೇ ಈ ಬಗ್ಗೆ ಅಸಮಾಧಾನ ಹೊರ ಹಾಕಿತ್ತು. ಬಳಿಕ ಕಳೆದ ಭಾನುವಾರ ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರು ಚೀನಾ ವಿದೇಶಾಂಗ ಸಚಿವ ವಾಂಗ್ ಯಿ ಅವರೊಂದಿಗೆ ವಿಡಿಯೊ ಕಾಲಿಂಗ್ ಮೂಲಕ ಮಾತುಕತೆ ನಡೆಸಿದ್ದರು. 

ನೈಜ ನಿಯಂತ್ರಣ ರೇಖೆಯಲ್ಲಿ (ಎಲ್‌ಎಸಿ) ಪೂರ್ಣವಾಗಿ ಶಾಂತಿ ಸ್ಥಾಪಿಸುವ ವಿಚಾರ ಮತ್ತು ಗಲ್ವಾನ್ ಕಣಿವೆ ಸಂಘರ್ಷದಂತಹ ಘಟನೆಗಳು ಮರುಕಳಿಸದಂತೆ ಭಾರತ–ಚೀನಾ ಜೊತೆಯಾಗಿ ಕಾರ್ಯನಿರ್ವಹಿಸಬೇಕಿದೆ. ಗಡಿ ಉದ್ವಿಗ್ನತೆ ಶಮನಕ್ಕೆ ಚೀನಾ ತನ್ನ ಸೈನ್ಯವನ್ನು ಹಿಂಪಡೆಯುವುದೊಂದೇ ದಾರಿ. ಗಡಿ ತಕರಾರು ಸಂಬಂಧ ಪರಸ್ಪರ ಆದ ಒಪ್ಪಂದಗಳಿಗೆ ಧಕ್ಕೆ ತರಬಾರದು ಎಂದು ಧೋವಲ್ ಹೇಳಿದ್ದರು.  ಅಂತೆಯೇ ಶಾಂತಿ ಮಾತುಕತೆಗಳಿಗೂ ಮುನ್ನ ಗಡಿಯಿಂದ ಸೈನ್ಯ ಹಿಂಪಡೆಯುವ ಪ್ರಕ್ರಿಯೆಗೆ ವೇಗ ನೀಡಬೇಕು ಎಂದು ಧೋವಲ್ ಹೇಳಿದ್ದರು.

ಧೋವಲ್ ಮಾತಿಗೆ ಧ್ವನಿಗೂಡಿಸಿದ ಚೀನಾ ವಿದೇಶಾಂಗ ಸಚಿವ ವಾಂಗ್ ಯೀ, ಗಲ್ವಾನ್ ಗಡಿಯಿಂದ ಸೈನ್ಯವನ್ನು ಹಿಂಪಡೆಯುವ ಕುರಿತು ಸಕಾರಾತ್ಮಕವಾಗಿ ಸ್ಪಂದಿಸಿದ್ದರು. ಈ ಮಾತುಕತೆ ಬೆನ್ನಲ್ಲೇ ಗಲ್ವಾನ್‌ ಕಣಿವೆಯ ಕೆಲವು ಪ್ರದೇಶಗಳಲ್ಲಿ ಬೀಡು ಬಿಟ್ಟಿದ್ದ ಚೀನಾದ ಸೈನಿಕರು ಟೆಂಟ್‌ಗಳನ್ನು ತೆರವು ಮಾಡಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

SCROLL FOR NEXT