ವಿಕಾಸ್ ದುಬೆ ಮನೆ ಮುಂಭಾಗದಲ್ಲಿರುವ ಪೊಲೀಸರು 
ದೇಶ

ಕಾನ್ಪುರ ಎನ್ ಕೌಂಟರ್: ದಾಳಿ ಬಗ್ಗೆ ವಿಕಾಸ್ ದುಬೆಗೆ ಮೊದಲೇ ಮಾಹಿತಿ ನೀಡಿದ ಇಬ್ಬರು ಪೊಲೀಸರ ಬಂಧನ

ಕಳೆದ ವಾರ ನಡೆದಿದ್ದ ಕಾನ್ಪುರ ಎನ್ ಕೌಂಟರ್ ನಲ್ಲಿ 8 ಪೊಲೀಸರ ಹತ್ಯೆಗೆ ಸಂಬಂಧಿಸಿದಂತೆ ಅಮಾನತುಗೊಂಡಿರುವ ಚೌಬೆಪುರ ಸ್ಟೇಷನ್ ಆಫೀಸರ್ ವಿನಯ್ ತಿವಾರಿ ಮತ್ತು ಸಬ್ ಇನ್ಸ್ ಪೆಕ್ಟರ್ ಕೆ ಕೆ ಶರ್ಮಾ ಅವರನ್ನು ಉತ್ತರ ಪ್ರದೇಶದ ಎಸ್ ಟಿಎಫ್ ಬುಧವಾರ ಬಂಧಿಸಿದೆ.

ಲಖೌನೌ: ಕಳೆದ ವಾರ ನಡೆದಿದ್ದ ಕಾನ್ಪುರ ಎನ್ ಕೌಂಟರ್ ನಲ್ಲಿ 8 ಪೊಲೀಸರ ಹತ್ಯೆಗೆ ಸಂಬಂಧಿಸಿದಂತೆ ಅಮಾನತುಗೊಂಡಿರುವ ಚೌಬೆಪುರ ಸ್ಟೇಷನ್ ಆಫೀಸರ್ ವಿನಯ್ ತಿವಾರಿ ಮತ್ತು ಸಬ್ ಇನ್ಸ್ ಪೆಕ್ಟರ್ ಕೆ ಕೆ ಶರ್ಮಾ ಅವರನ್ನು ಉತ್ತರ ಪ್ರದೇಶದ ಎಸ್ ಟಿಎಫ್ ಬುಧವಾರ ಬಂಧಿಸಿದೆ.

ಚೌಬೇಪುರ್ ಪೊಲೀಸ್ ಠಾಣೆ ವ್ಯಾಪ್ತಿಯ ಬಿಕ್ರೂ ಗ್ರಾಮದ ಬಳಿ ರೌಡಿ ಶೀಟರ್ ವಿಕಾಸ್ ದುಬೆ ವಿರುದ್ಧ ನಡೆದ ಎನ್ ಕೌಂಟರ್ ವೇಳೆಯಲ್ಲಿ ತಿವಾರಿ ಮತ್ತು ಶರ್ಮಾ ಕೂಡಾ ಅಲ್ಲಿದ್ದರು.ಆದರೆ,ದರೋಡೆಕೋರರಿಂದ ಪೊಲೀಸರ ಮೇಲೆ ದಾಳಿ ನಡೆದಿದ್ದಾಗ ಇವರಿಬ್ಬರು ಓಡಿ ಹೋಗಿದ್ದರು ಎಂದು ಕಾನ್ಪುರ ಐಜಿ ಮೋಹಿತ್ ಅಗರ್ ವಾಲ್ ಹೇಳಿದ್ದಾರೆ.

ಕಾನ್ಪುರ ಎನ್ ಕೌಂಟರ್ ಪ್ರಕರಣ ಸಂಬಂಧ ತನಿಖೆ ನಡೆಸಿದ ಉತ್ತರ ಪ್ರದೇಶ ಎಸ್ ಟಿಎಫ್ ,ತಿವಾರಿ ಮತ್ತು ಶರ್ಮಾ ಅವರನ್ನು ಬಂಧಿಸಿದೆ.ವಿಕಾಸ್ ದುಬೆ ವಿರುದ್ಧದ ಪೊಲೀಸ್ ಕಾರ್ಯಾಚರಣೆ ಬಗ್ಗೆ ಮೊದಲೆ ಮಾಹಿತಿ ನೀಡಿರುವ ಬಗ್ಗೆ ಪುರಾವೆಗಳು ದೊರಕಿವೆ.

ಪೊಲೀಸ್ ಕಾರ್ಯಾಚರಣೆಗೂ ಮುಂಚಿತವಾಗಿ ವಿನಯ್ ತಿವಾರಿ ಮತ್ತು ಕೆ ಕೆ ಶರ್ಮಾ ವಿಕಾಸ್ ದುಬೆಗೆ ಮಾಹಿತಿ ನೀಡಿದ್ದರು. ಆದ್ದರಿಂದ ಅವರು ವ್ಯವಸ್ಥಿತವಾಗಿ ದಾಳಿ ನಡೆಸಿ 8 ಮಂದಿ ಪೊಲೀಸರನ್ನು ಹತ್ಯೆ ಮಾಡಿದ್ದಾರೆ ಎಂದು ಕಾನ್ಪುರ ಎಸ್ ಎಸ್ ಪಿ ದಿನೇಶ್ ಕುಮಾರ್ ಪಿ ಹೇಳಿದ್ದಾರೆ.

ಜುಲೈ 2 ರಂದು ಮಧ್ಯರಾತ್ರಿ ದರೋಡೆಕೋರರ ವಿರುದ್ಧ ನಡೆದ ಕಾರ್ಯಾಚರಣೆ ವೇಳೆಯಲ್ಲಿ ಎನ್ ಕೌಂಟರ್ ಸ್ಥಳದಿಂದ ಓಡಿಹೋಗಿದ್ದ ಹಾಗೂ ದುಬೆಯೊಂದಿಗೆ ನಂಟು ಹೊಂದಿರುವ ಆರೋಪದಲ್ಲಿ ತಿವಾರಿ ಮತ್ತು ಶರ್ಮಾ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ದಿನೇಶ್ ಕುಮಾರ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್