ರಾಷ್ಟ್ರೀಯತೆ, ಪೌರತ್ವ, ನೋಟು ನಿಷೇಧದ ಪಾಠಗಳನ್ನು ಪಠ್ಯಕ್ರಮದಿಂದ ಕೈಬಿಟ್ಟ ಸಿಬಿಎಸ್ಇ 
ದೇಶ

ರಾಷ್ಟ್ರೀಯತೆ, ಪೌರತ್ವ, ನೋಟು ನಿಷೇಧದ ಪಾಠಗಳನ್ನು ಪಠ್ಯಕ್ರಮದಿಂದ ಕೈಬಿಟ್ಟ ಸಿಬಿಎಸ್ಇ

ಮುಂದಿನ ವರ್ಷ ಸಿಬಿಎಸ್ಇ ಬೋರ್ಡ್ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಜಾತ್ಯತೀತತೆ, ಪೌರತ್ವ, ರಾಷ್ಟ್ರೀಯತೆ, ನೋಟು ನಿಷೇಧ, ಪ್ರಜಾಪ್ರಭುತ್ವದ ಹಕ್ಕುಗಳ ಬಗ್ಗೆ ಪರೀಕ್ಷೆಗಾಗಿ ಓದಬೇಕಿಲ್ಲ.

ನವದೆಹಲಿ: ಮುಂದಿನ ವರ್ಷ ಸಿಬಿಎಸ್ಇ ಬೋರ್ಡ್ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಜಾತ್ಯತೀತತೆ, ಪೌರತ್ವ, ರಾಷ್ಟ್ರೀಯತೆ, ನೋಟು ನಿಷೇಧ, ಪ್ರಜಾಪ್ರಭುತ್ವದ ಹಕ್ಕುಗಳ ಬಗ್ಗೆ ಪರೀಕ್ಷೆಗಾಗಿ ಓದಬೇಕಿಲ್ಲ.

ಹೌದು, ಕೊರೋನಾದ ಹಿನ್ನೆಲೆ ಪಠ್ಯ ಕ್ರಮಗಳನ್ನು ಕಡಿತಗೊಳಿಸುತ್ತಿರುವುದರಿಂದ ಈ ಎಲ್ಲಾ ಅಂಶಗಳ ಬಗ್ಗೆ ವಿವರಣೆ ನೀಡುವ ಪಾಠಗಳನ್ನು ಪಠ್ಯಕ್ರಮದಿಂದ ಹೊರಗಿಡಲು ಸಿಬಿಎಸ್ಇ ನಿರ್ಧರಿಸಿದ್ದು ವಿದ್ಯಾರ್ಥಿಗಳು ಇದರ ಕುರಿತು ಪರೀಕ್ಷೆಗಳಿಗಾಗಿ ತಯಾರಿ ನಡೆಸಬೇಕಿಲ್ಲ ಎಂದು ಅಧಿಸೂಚನೆ ಹೊರಡಿಸಲಾಗಿದೆ. 

2020-21 ರ ಶೈಕ್ಷಣಿಕ ವರ್ಷಕ್ಕೆ 9-12 ತರಗತಿಗಳಿಗೆ ಸಿಬಿಎಸ್ ಇ ಜು.8 ರಂದು ಹೊಸ ಪಠ್ಯಕ್ರಮವನ್ನು ಘೋಷಿಸಿದ್ದು,  ಶೇ.30 ರಷ್ಟು ಪಠ್ಯವನ್ನು ಕಡಿತಗೊಳಿಸಿದೆ.

10 ನೇ ತರಗತಿಯಲ್ಲಿ ಪ್ರಜಾಪ್ರಭುತ್ವ, ವೈವಿಧ್ಯತೆ, ಲಿಂಗ, ಧರ್ಮ, ಜಾತಿ ಹಾಗೂ ಖ್ಯಾತ ಹೋರಾಟ, ಚಳುವಳಿ, ಪ್ರಜಾಪ್ರಭುತ್ವದ ಸವಾಲುಗಳಿಗೆ ಸಂಬಂಧಪಟ್ಟ ಪಠ್ಯಗಳನ್ನು ಕೈಬಿಡಲಾಗಿದೆ. 11 ನೇ ತರಗತಿಯಿಂದ ಪೌರತ್ವ, ರಾಷ್ಟ್ರೀಯತೆ, ಜಾತ್ಯಾತೀತತೆ, ಫೆಡರಲಿಸಮ್, ಭಾರತದಲ್ಲಿ ಸ್ಥಳೀಯ ಸರ್ಕಾರಗಳ ಬೆಳವಣಿಗೆಯ ಅಂಶಗಳನ್ನು ಪಠ್ಯದಿಂದ ಕೈಬಿಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!