ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ 
ದೇಶ

ನನಗೆ ವೇತನ ಬೇಡ, ಮಂತ್ರಿ ಪದವಿ ಕೊಡಿ: ಶಿವರಾಜ್ ಸಿಂಗ್ ಚೌಹಾಣ್ ಗೆ ಮಾಜಿ ಇಂಜಿನಿಯರ್ ಪತ್ರ!

ವೇತನವನ್ನೇನು ಕೊಡಬೇಡಿ, ಆದರೆ ನನಗೆ ಮಂತ್ರಿಮಂಡಲದಲ್ಲಿ ಸ್ಥಾನ ಕೊಡಿ ಎಂಬ ವಿಚಿತ್ರ ಬೇಡಿಕೆಯೊಂದನ್ನು ಮಧ್ಯಪ್ರದೇಶದ ಮಾಜಿ ಇಂಜಿನಿಯರ್ ಒಬ್ಬರು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರ ಮುಂದಿಟ್ಟಿದ್ದಾರೆ. 

ಭೋಪಾಲ್: ವೇತನವನ್ನೇನು ಕೊಡಬೇಡಿ, ಆದರೆ ನನಗೆ ಮಂತ್ರಿಮಂಡಲದಲ್ಲಿ ಸ್ಥಾನ ಕೊಡಿ ಎಂಬ ವಿಚಿತ್ರ ಬೇಡಿಕೆಯೊಂದನ್ನು ಮಧ್ಯಪ್ರದೇಶದ ಮಾಜಿ ಇಂಜಿನಿಯರ್ ಒಬ್ಬರು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರ ಮುಂದಿಟ್ಟಿದ್ದಾರೆ. 

ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಗೆ ನಿವೃತ್ತ ಇಂಜಿನಿಯರ್ ಬಾಲ್ ಚಂದ್ ವರ್ಮಾ ಬರೆದಿರುವ ಪತ್ರದಲ್ಲಿ " ವಿಧಾನಸಭೆಯ ಸದಸ್ಯರೂ ಅಲ್ಲದ 14 ವ್ಯಕ್ತಿಗಳು ಮಂತ್ರಿ ಮಂಡಲದಲ್ಲಿದ್ದಾರೆ. ಸಾಮಾನ್ಯ ಪ್ರಜೆಗಳಾದ 14 ವ್ಯಕ್ತಿಗಳು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇದಕ್ಕೂ ಮುನ್ನ 2013-18 ರ ಅವಧಿಯಲ್ಲಿ ಇದೇ ಮಾದರಿಯಲ್ಲಿ 5 ಜನರು ಸವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ನನ್ನ ಪತ್ರ ಬಂದು ತಲುಪಿದ 3 ದಿನಗಳಲ್ಲಿ ನನ್ನನ್ನೂ ಸಹ ಸಚಿವನನ್ನಾಗಿ ಮಾಡಿ.

ನನ್ನನ್ನು ಸಚಿವರನ್ನಾಗಿ ಮಾಡಿದರೂ ನನಗೆ ವೇತನ ಪಡೆಯುವ ಆಸಕ್ತಿ ಇಲ್ಲ. ಒಂದು ವೇಳೆ ನನ್ನನ್ನು ಸಚಿವರನ್ನಾಗಿ ಮಾಡದೇ ಇದ್ದರೆ, ಶಾಸನಸಭೆಯ ಸದಸ್ಯರಲ್ಲದ 14 ಜನರನ್ನು ಮಂತ್ರಿಮಂಡಲದಿಂದ ಕೈಬಿಡಿ ಎಂದು ಬಾಲ್ ಚಂದ್ ವರ್ಮಾ ಆಗ್ರಹಿಸಿದ್ದಾರೆ.
 ಒಂದು ವೇಳೆ ತಮ್ಮ ಯಾವುದೇ ಬೇಡಿಕೆಗಳನ್ನು ಈಡೇರಿಸದೇ ಇದ್ದರೆ ಮುಂದಾಗುವುದಕ್ಕೆ ಮುಖ್ಯಮಂತ್ರಿಗಳೇ ಹೊಣೆ ಎಂದು ಎಚ್ಚರಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT