ಸಂಗ್ರಹ ಚಿತ್ರ 
ದೇಶ

ಜಮ್ಮು-ಕಾಶ್ಮೀರ: ಗಡಿ ನಿಯಂತ್ರಣ ರೇಖೆ ಸಮೀಪ 6 ಸೇತುವೆಗಳ ಉದ್ಘಾಟನೆ

ಜಮ್ಮು ಕಾಶ್ಮೀರದ 6 ಪ್ರಮುಖ ಸೇತುವೆಗಳನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಗುರುವಾರ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಉದ್ಘಾಟಿಸಿದ್ದಾರೆ. 

ನವದೆಹಲಿ: ಜಮ್ಮು ಕಾಶ್ಮೀರದ 6 ಪ್ರಮುಖ ಸೇತುವೆಗಳನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಗುರುವಾರ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಉದ್ಘಾಟಿಸಿದ್ದಾರೆ. 

ಅಂತಾರಾಷ್ಟ್ರೀಯ ಗಡಿ(ಐಬಿ) ಮತ್ತು ನಿಯಂತ್ರಣ ರೇಖೆ (ಎಲ್‌ಒಸಿ) ಗೆ ಸಮೀಪವಿರುವ ಸೂಕ್ಷ್ಮ ಗಡಿ ಪ್ರದೇಶಗಳಲ್ಲಿನ ರಸ್ತೆಗಳು ಮತ್ತು ಸೇತುವೆಗಳ ಸಂಪರ್ಕದಲ್ಲಿ ಹೊಸ ಕ್ರಾಂತಿಯನ್ನು ತಂದಿದೆ ಎಂದು ರಕ್ಷಣಾ ಸಚಿವರು ಹೇಳಿದ್ದಾರೆ. 

ಆರು ಸೇತುವೆಗಳ ಕಾಮಗಾರಿಗಳನ್ನು ದಾಖಲೆ ಸಮಯದಲ್ಲಿ ಪೂರ್ಣಗೊಳಿಸಿದ್ದಕ್ಕಾಗಿ ಸಚಿವರು ಬಿಆರ್‌ಒನ ಎಲ್ಲಾ ಅಧಿಕಾರಿಗಳನ್ನು ಅಭಿನಂದಿಸಿದ್ದು, ಅತ್ಯಂತ ಕಷ್ಟಕರವಾದ ಭೂಪ್ರದೇಶ ಮತ್ತು ಹವಾಮಾನ ಪರಿಸ್ಥಿತಿಗಳಲ್ಲಿ ಕೆಲಸ ಮಾಡುವ ಮೂಲಕ ರಾಷ್ಟ್ರ ನಿರ್ಮಾಣಕ್ಕೆ ಸಹಕರಿಸಿದ್ದಕ್ಕಾಗಿ ಧನ್ಯವಾದ ಸಲ್ಲಿಸಿದ್ದಾರೆ.

ರಸ್ತೆಗಳು ಮತ್ತು ಸೇತುವೆಗಳು ಯಾವುದೇ ರಾಷ್ಟ್ರದ ಜೀವಸೆಲೆ ಮತ್ತು ದೂರದ ಪ್ರದೇಶಗಳ ಸಾಮಾಜಿಕ-ಆರ್ಥಿಕ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವಹಿಸುತ್ತವೆ. ನಮ್ಮ ಪ್ರಧಾನ ಮಂತ್ರಿ ಈ ಯೋಜನೆಗಳ ಪ್ರಗತಿಯನ್ನು ನಿಯಮಿತವಾಗಿ ಮೇಲ್ವಿಚಾರಣೆ ಮಾಡುತ್ತಿದ್ದು, ಅವುಗಳನ್ನು ಸಮಯೋಚಿತವಾಗಿ ನಿರ್ವಹಿಸಲು ಸಾಕಷ್ಟು ಹಣವನ್ನು ಒದಗಿಸಲಾಗಿದೆ ಎಂದಿದ್ದಾರೆ.

“ಜನರನ್ನು ಸಂಪರ್ಕಿಸುವ ಈ ಸೇತುವೆಗಳನ್ನು ಉದ್ಘಾಟಿಸುವುದು ಆಹ್ಲಾದಕರ ಅನುಭವವಾಗಿದೆ. ಆದರೆ ಕೊರೋನಾ ಕಾರಣದಿಂದ ಈ ಸಮಯದಲ್ಲಿ ಪರಸ್ಪರ ಪ್ರತ್ಯೇಕವಾಗಿರಬೇಕು. ಈ ಮಹತ್ವದ ಕಾರ್ಯವನ್ನು ಬಹಳ ಕೌಶಲ್ಯದಿಂದ ಪೂರ್ಣಗೊಳಿಸಿದ ಗಡಿ ರಸ್ತೆ ಸಂಘಟನೆಯನ್ನು ನಾನು ಅಭಿನಂದಿಸುತ್ತೇನೆ ಎಂದು ತಿಳಿಸಿದ್ದಾರೆ.

ಬಿಆರ್‌ಒಗೆ ಪೂರಕವಾಗಿ ಸಚಿವರು, “ಬಿಆರ್‌ಒ ಅವರ ಸಂಪೂರ್ಣ ಬದ್ಧತೆಯೊಂದಿಗೆ ದೇಶದ ಗಡಿ ಪ್ರದೇಶಗಳಲ್ಲಿ ರಸ್ತೆಗಳು ಮತ್ತು ಸೇತುವೆಗಳ ನಿರ್ಮಾಣವು ಮುಂದುವರಿದಿದ್ದು, ದೂರದ ಪ್ರದೇಶಗಳಿಗೆ ತಲುಪಲು ಸರ್ಕಾರದ ಪ್ರಯತ್ನಗಳನ್ನು ಸಾಕಾರಗೊಳಿಸಲು ಸಹಾಯ ಮಾಡುತ್ತದೆ. ರಸ್ತೆಗಳು ಯಾವುದೇ ರಾಷ್ಟ್ರದ ಜೀವಸೆಲೆ.

“ನಮ್ಮ ಸರ್ಕಾರವು ಜಮ್ಮು ಮತ್ತು ಕಾಶ್ಮೀರದ ಅಭಿವೃದ್ಧಿಯಲ್ಲಿ ತೀವ್ರ ಆಸಕ್ತಿಯನ್ನು ಹೊಂದಿದೆ. ಜಮ್ಮು ಮತ್ತು ಕಾಶ್ಮೀರ ಮತ್ತು ಸಶಸ್ತ್ರ ಪಡೆಗಳ ಜನರ ಅಗತ್ಯವನ್ನು ಗಮನದಲ್ಲಿಟ್ಟುಕೊಂಡು, ಇನ್ನೂ ಅನೇಕ ಅಭಿವೃದ್ಧಿ ಕಾರ್ಯಗಳು ಸಹ ನಡೆಯುತ್ತಿವೆ, ಇದನ್ನು ಸರಿಯಾದ ಸಮಯದಲ್ಲಿ ಘೋಷಿಸಲಾಗುವುದು. ಜಮ್ಮು ಪ್ರದೇಶದಲ್ಲಿ ಪ್ರಸ್ತುತ ಸುಮಾರು 1,000 ಕಿಲೋಮೀಟರ್ ಉದ್ದದ ರಸ್ತೆಗಳು ನಿರ್ಮಾಣ ಹಂತದಲ್ಲಿವೆ ”ಎಂದು ಅವರು ಹೇಳಿದ್ದಾರೆ.

ಕಳೆದ ಎರಡು ವರ್ಷಗಳಲ್ಲಿ, ಇತ್ತೀಚಿನ ತಂತ್ರಜ್ಞಾನಗಳು ಮತ್ತು ಅತ್ಯಾಧುನಿಕ ಉಪಕರಣಗಳ ಬಳಕೆಯಿಂದ ಬಿಆರ್‌ಒ 2,200 ಕಿಲೋಮೀಟರ್‌ಗಳಷ್ಟು ಸುಮಾರು 4,200 ಕಿಲೋಮೀಟರ್ ರಸ್ತೆಗಳನ್ನು ಅಭಿವೃದ್ಧಿಪಡಿಸಿದೆ ಮತ್ತು ಸುಮಾರು 5,800 ಮೀಟರ್ ಶಾಶ್ವತ ಸೇತುವೆಗಳನ್ನು ನಿರ್ಮಿಸಲಾಗಿದೆ ಎಂದು ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT