ಕೊರೋನಾ ವಿರುದ್ಧದ ಹೋರಾಟಕ್ಕೆ ಕೈ ಜೋಡಿಸಿ, ಸೇವೆ ಒದಗಿಸಿ: ವೈದ್ಯರಿಗೆ ವೈದ್ಯಕೀಯ ಪರಿಷತ್ ಮನವಿ 
ದೇಶ

ಕೊರೋನಾ ವಿರುದ್ಧದ ಹೋರಾಟಕ್ಕೆ ಕೈ ಜೋಡಿಸಿ, ಸೇವೆ ಒದಗಿಸಿ: ವೈದ್ಯರಿಗೆ ವೈದ್ಯಕೀಯ ಪರಿಷತ್ ಮನವಿ

"ನಮ್ಮ ರಾಜ್ಯದಲ್ಲಿ ಕೊರೋನಾ ಪ್ರಕರಣ ಏರಿಕೆಯಾಗುತ್ತಿದೆ. ಈ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ನಿಮ್ಮ ಸೇವೆ ಅತ್ಯಗತ್ಯವಾಗಿದೆ" ಎಂದು ವೈದ್ಯ ಸಮೂಹಕ್ಕೆ ಕೆಎಂಸಿ ಅಧ್ಯಕ್ಷ ಡಾ.ಹೆಚ್ ವೀರಭದ್ರಪ್ಪ ಕರೆ ನೀಡಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಪ್ರಕರಣಗಳು ಹೆಚ್ಚುತ್ತಲೇ ಇವೆ. ಈ ನಡುವೆ ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡುವುದಕ್ಕಾಗಿ ವೈದ್ಯರ ಕೊರತೆ ಎದುರಾಗಿದ್ದು, ಪರಿಸ್ಥಿತಿ ನಿಭಾಯಿಸಲು ಸಹಕಾರ ನೀಡಬೇಕೆಂದು ರಾಜ್ಯದ ವೈದ್ಯಕೀಯ ಪರಿಷತ್ ನಲ್ಲಿ ನೋಂದಣಿ ಮಾಡಿಕೊಂಡಿರುವವರಿಗೆ ಸರ್ಕಾರ ಮನವಿ ಮಾಡಿದೆ. 

ವೈದ್ಯಕೀಯ ಶಿಕ್ಷಣ ಇಲಾಖೆಯ ನಿರ್ದೇಶನದ ಪ್ರಕಾರವಾಗಿ ರಾಜ್ಯ ವೈದ್ಯಕೀಯ ಪರಿಷತ್ ತನ್ನಲ್ಲಿ ನೋಂದಣಿ ಮಾಡಿಕೊಂಡಿರುವ ವೈದ್ಯರಿಗೆ ಸರ್ಕಾರಿ ಅಥವಾ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್-19 ರೋಗಿಗಳ ಚಿಕಿತ್ಸೆಗೆ ಸಹಾಯ ಹಸ್ತ ಚಾಚಬೇಕೆಂದು ಮನವಿ ಮಾಡಿದೆ.

"ನಮ್ಮ ರಾಜ್ಯದಲ್ಲಿ ಕೊರೋನಾ ಪ್ರಕರಣ ಏರಿಕೆಯಾಗುತ್ತಿದೆ. ಈ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ನಿಮ್ಮ ಸೇವೆ ಅತ್ಯಗತ್ಯವಾಗಿದೆ ಎಂದು ವೈದ್ಯ ಸಮೂಹಕ್ಕೆ ಕೆಎಂಸಿ ಅಧ್ಯಕ್ಷ ಡಾ.ಹೆಚ್ ವೀರಭದ್ರಪ್ಪ ಕರೆ ನೀಡಿದ್ದಾರೆ.

ಕೋವಿಡ್-19 ರೋಗಿಗಳ ಚಿಕಿತ್ಸೆಗಾಗಿ ಸೇವೆ ನೀಡಲು ಮುಂದಾಗುವ ವೈದ್ಯರುಗಳು ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯದಲ್ಲಿ ನೋಂದಣಿ ಮಾಡಿಕೊಳ್ಳಬಹುದಾಗಿದೆ.

ಯಾವ ವೈದ್ಯರುಗಳ ಬಳಿ ಸಮಯವಿದೆಯೋ ಅಂತಹವರು, ಬೇರೆಡೆ ಸೇವೆ ಸಲ್ಲಿಸುತ್ತಿಲ್ಲದ ವೈದ್ಯರುಗಳು ಕೋವಿಡ್-19 ರೋಗಿಗಳ ಚಿಕಿತ್ಸೆಗೆ  ಸ್ವಯಂ ಸೇವಕರಾಗಿ ಕಾರ್ಯನಿರ್ವಹಿಸಬೇಕೆಂದು ಮನವಿ ಮಾಡಿಕೊಳ್ಳುತ್ತೇವೆ ಎಂದು ಡಾ.ವೀರಭದ್ರಪ್ಪ ಹೇಳಿದ್ದಾರೆ.    

ಸ್ವಯಂ ಸೇವಕ ವೈದ್ಯರಿಗೆ ಯಾವ ಸಮಯ ಸೂಕ್ತವಿದೆಯೋ ಆ ಸಮಯದಲ್ಲೇ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವೆ ನೀಡಲಿ, 6 ಗಂಟೆಗಳ ಕಾಲ ಕಾರ್ಯನಿರ್ವಹಿಸಬೇಕೆಂದೇನೂ ಇಲ್ಲ. ದಿನಕ್ಕೆ 2- ಗಂಟೆಗಳು ಕಾರ್ಯನಿರ್ವಹಿಸಿದರೂ ಸಾಕು, ಎಲ್ಲಾ ವೈದ್ಯರಿಗೆ ಐಸಿಯು ನಿರ್ವಹಣೆ ಮಾಡುವುದಕ್ಕೆ ಸಾಧ್ಯವಿಲ್ಲ. ಆದರೆ ಅಗತ್ಯ ಸಂದರ್ಭಗಳಲ್ಲಿ ತಜ್ಞ ವೈದ್ಯರೊಂದಿಗೆ ಸಮಾಲೋಚನೆ ನಡೆಸುವ ವೈದ್ಯರುಗಳ ಅಗತ್ಯವಿದೆ ಎಂದು ಡಾ.ವೀರಭದ್ರಪ್ಪ ಹೇಳಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

SCROLL FOR NEXT