ರಮೇಶ್ ಪೋಖ್ರಿಯಾಲ್ 
ದೇಶ

ಸಿಬಿಎಸ್‌ಇ ಪಠ್ಯಕ್ರಮದ ಬಗ್ಗೆ ಅಜ್ಞಾತ ವ್ಯಾಖ್ಯಾನ: ಕೇಂದ್ರ ಸರ್ಕಾರ

ಸಿಬಿಎಸ್ಇ ಪಠ್ಯಕ್ರಮದಲ್ಲಿ ಕೆಲ ವಿಷಯಗಳನ್ನು ಕೈಬಿಟ್ಟಿರುವುದಕ್ಕೆ ವಿಪಕ್ಷಗಳು ಆರೋಪ ಮಾಡುತ್ತಿದ್ದು ಪಠ್ಯಕ್ರಮದ ಬಗ್ಗೆ ಅಜ್ಞಾತ ವ್ಯಾಖ್ಯಾನಗಳು ನಡೆಯುತ್ತಿವೆ ಎಂದು ಕೇಂದ್ರ ಮಾನವ ಸಂಪನ್ಮೂಲ ಸಚಿವ ರಮೇಶ್ ಪೋಖ್ರಿಯಾಲ್ ಹೇಳಿದ್ದಾರೆ.

ನವದೆಹಲಿ: ಸಿಬಿಎಸ್ಇ ಪಠ್ಯಕ್ರಮದಲ್ಲಿ ಕೆಲ ವಿಷಯಗಳನ್ನು ಕೈಬಿಟ್ಟಿರುವುದಕ್ಕೆ ವಿಪಕ್ಷಗಳು ಆರೋಪ ಮಾಡುತ್ತಿದ್ದು ಪಠ್ಯಕ್ರಮದ ಬಗ್ಗೆ ಅಜ್ಞಾತ ವ್ಯಾಖ್ಯಾನಗಳು ನಡೆಯುತ್ತಿವೆ ಎಂದು ಕೇಂದ್ರ ಮಾನವ ಸಂಪನ್ಮೂಲ ಸಚಿವ ರಮೇಶ್ ಪೋಖ್ರಿಯಾಲ್ ಹೇಳಿದ್ದಾರೆ. 

ಕೊರೋನಾ ಸೋಂಕಿನ ಕಾರಣಕ್ಕಾಗಿ ಪಸಕ್ತ ವರ್ಷ ಸಿಬಿಎಸ್ಇ ಪಠ್ಯಕ್ರಮ ಕಡಿಮೆ ಮಾಡಿದ ಸರ್ಕಾರದ ಕ್ರಮವನ್ನು ಮಾನವ ಸಂಪನ್ಮೂಲ ಸಚಿವ ರಮೇಶ್ ಪೋಖ್ರಿಯಾಲ್  ಸಮರ್ಥಿಸಿಕೊಂಡಿದ್ದಾರೆ. 

ಸರ್ಕಾರದ ಕ್ರಮದ ಬಗ್ಗೆ ಕೆಲವು ವಲಯದಿಂದ ಟೀಕೆ ವ್ಯಕ್ತವಾದ ನಂತರ ಈ  ಹೇಳಿಕೆ ನೀಡಿದ್ದಾರೆ. ಸಮಯದ ಅಭಾವದ ಕಾರಣ ಕಲ ಪಾಠಗಳನ್ನು ತೆಗೆದುಹಾಕಿರುವುದು ಈಗಿನ ಪರಿಸ್ಥಿತಿಯಲ್ಲಿ ತೆಗೆದುಕೊಂಡಿರುವ ಸದ್ಯದ ತಾತ್ಕಾಲಿಕ ಕ್ರಮ ಮಾತ್ರ ಎಂದರು. ಶಾಲಾ ಅವಧಿಯೂ ಕಡಿತವಾಗಿರುವುದರಿಂದ ವಿದ್ಯಾರ್ಥಿಗಳ ಮೇಲೆ ಹೊರೆಯಾಗಬಾರದು ಎಂಬ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಇದಕ್ಕೆ ರಾಜಕೀಯ ಬೆರೆಸಬಾರದು ಎಂದರು.

ನಿರ್ದಿಷ್ಟ ಸಿದ್ದಾಂತವನ್ನು ಪ್ರಚಾರ ಮಾಡುವ ಸಲುವಾಗಿ ಜಾತ್ಯತೀತತೆ, ಪೌರತ್ವ, ರಾಷ್ಟ್ರೀಯತೆ, ಒಕ್ಕೂಟ ವ್ಯವಸ್ಥೆ, ಸ್ಥಳೀಯ ಸರ್ಕಾರಗಳ ಬೆಳವಣೆಗೆ ಮುಂತಾದ ವಿಷಯಗಳನ್ನು ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿ(ಸಿಬಿಎಸ್ಇ) ಕೈಬಿಟ್ಟಿದೆ ಎಂದು ವಿಪಕ್ಷಗಳು ಕೇಂದ್ರ ಸರ್ಕಾರದ ವಿರುದ್ಧ ಹಾರಿಹಾಯ್ದಿದ್ದವು. 

ಈ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ರಮೇಶ್ ಪೋಖ್ರಿಯಾಲ್ ಅವರು ಸಿಬಿಎಸ್ಇ ಪಠ್ಯಕ್ರಮದ ಬಗ್ಗೆ ಅಜ್ಞಾತ ವ್ಯಾಖ್ಯಾನಗಳನ್ನು ಮಾಡಲಾಗುತ್ತಿದೆ. ಕೋವಿಡ್ 19 ಲಾಕ್ ಡೌನ್ ಸಮಯದಲ್ಲಿ ಶೈಕ್ಷಣಿಕ ನಷ್ಟವನ್ನು ಗಮನದಲ್ಲಿಟ್ಟುಕೊಂಡು ಸಿಬಿಎಸ್ಇ 9 ರಿಂದ 12ನೇ ತರಗತಿಗಳಿಗೆ ಪಠ್ಯಕ್ರಮವನ್ನು 9ರಿಂದ 12ರವರೆಗೆ ತರ್ಕಬದ್ಧಗೊಳಿಸಿದೆ ಎಂದು ಟ್ವೀಟ್ ಮಾಡಿದ್ದಾರೆ. 

ವಾಸ್ತವವಾಗಿ ಪಠ್ಯಕ್ರಮವನ್ನು ಕಡಿಮೆ ಮಾಡಲು ಮಾನವ ಸಂಪನ್ಮೂಲ ಅಭಿವೃದ್ಧಿಗೆ ಸಚಿವಾಲಯ ಸಿಬಿಎಸ್ಇ ಮಂಡಳಿಗೆ ಸಲಹೆ ನೀಡಿತ್ತು. ಪಠ್ಯಕ್ರಮದಲ್ಲಿ ಶೇಕಡಾ 30ರಷ್ಟು ಕಡಿತಗೊಳಿಸುವಂತೆ ಸಚಿವಾಲಯ ಸೂಚಿಸಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

SIR ವಿರುದ್ಧ 'ಚುನಾವಣಾ ಆಯೋಗ ಚಲೋ' ಘೋಷಿಸಿದ ಪ್ರಕಾಶ್ ರಾಜ್; ಆಯುಕ್ತರ ರಾಜೀನಾಮೆಗೆ ಆಗ್ರಹ

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video