ಎನ್'ಕೌಂಟರ್ ನಡೆದ ಸ್ಥಳ 
ದೇಶ

ಕಾನ್ಪುರ ಪೊಲೀಸರ ಹತ್ಯಾಕಾಂಡ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಎನ್'ಕೌಂಟರ್ ನಲ್ಲಿ ಹತ್ಯೆ

8 ಮಂದಿ ಪೊಲೀಸರ ಹತ್ಯಾಕಾಂಡ ನಡೆಸಿದ್ದ ಕುಖ್ಯಾತ ಗ್ಯಾಂಗ್'ಸ್ಟರ್ ವಿಕಾಸ್ ದುಬೆ ಸಹಚರನೊಬ್ಬ ತಪ್ಪಿಸಿಕೊಳ್ಳಲು ಯತ್ನಿಸಿದ ಹಿನ್ನೆಲೆಯಲ್ಲಿ ಎನ್'ಕೌಂಟರ್ ನಲ್ಲಿ ಹತ್ಯೆ ಮಾಡಲಾಗಿದೆ ಎಂದು ಗುರುವಾರ ತಿಳಿದುಬಂದಿದೆ. 

ಕಾನ್ಪುರ: 8 ಮಂದಿ ಪೊಲೀಸರ ಹತ್ಯಾಕಾಂಡ ನಡೆಸಿದ್ದ ಕುಖ್ಯಾತ ಗ್ಯಾಂಗ್'ಸ್ಟರ್ ವಿಕಾಸ್ ದುಬೆ ಸಹಚರನೊಬ್ಬ ತಪ್ಪಿಸಿಕೊಳ್ಳಲು ಯತ್ನಿಸಿದ ಹಿನ್ನೆಲೆಯಲ್ಲಿ ಎನ್'ಕೌಂಟರ್ ನಲ್ಲಿ ಹತ್ಯೆ ಮಾಡಲಾಗಿದೆ ಎಂದು ಗುರುವಾರ ತಿಳಿದುಬಂದಿದೆ. 

ಹತ್ಯೆಯಾದ ಆರೋಪಿಯನ್ನು ಬಹುವಾ ದುಬೆಯೆಂದು ಗುರ್ತಿಸಲಾಗಿದೆ. ಇಂದು ಬೆಳಗಿನ ಜಾವ 3 ಗಂಟೆ ಸುಮಾರಿಗೆ ಸ್ವಿಫ್ಟ್ ಕಾರೊಂದನ್ನು ಕಳ್ಳತನ ಮಾಡಿದ್ದ ನಾಲ್ವರು ಆರೋಪಿಗಳು, ಬಳಿಕ ಪೊಲೀಸ ಕೈಗೆ ಸಿಕ್ಕಿಬಿದ್ದರು. ಬಳಿಕ ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಪೊಲೀಸರು ಗುಂಡು ಹಾರಿಸಿದ್ದಾರೆ. ಗಾಯಗೊಂಡಿದ್ದ ಬೌವಾ ದುಬೆಯನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಆತ ಸಾವನ್ನಪ್ಪಿದ್ದಾನೆಂದು ಹಿರಿಯ ಪೊಲೀಸ್ ಅಧಿಕಾರಿ ಆಕಾಶ್ ತೋಮರ್ ಅವರು ಹೇಳಿದ್ದಾರೆ. 

ಹತ್ಯೆಯಾದ ಬಹುವಾ ದುಬೆ, ವಿಕಾಸ್ ದುಬೆ ಜೊತೆಗೆ ಇದ್ದ ಎಂದು ಹೇಳಲಾಗುತ್ತಿದೆ. ಇದೀಗ ಆತನ ಬಳಿಯಿದ್ದ ಪಿಸ್ತೂಲ್, ಡಬಲ್ ಬ್ಯಾರೆಲ್ ಗನ್ ಹಾಗೂ ಸಿಡಿಮದ್ದುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆಂದು ತಿಳಿದುಬಂದಿದೆ. ಹತ್ಯಾಯಾದ ಬೌವಾ ದುಬೆ ಜೊತೆಗೆ ಇದ್ದ ಮೂವರು ಆರೋಪಿಗಳು ತಪ್ಪಿಸಿಕೊಂಡಿದ್ದಾರೆ. 

ಕಾನ್ಪುರ ಎನ್'ಕೌಂಟರ್ ಪ್ರಕರಣ ಸಂಬಂಧ ನಿನ್ನೆಯಷ್ಟೇ ಫರೀದಾಬಾದ್ ನಲ್ಲಿ ಮೂವರು ಆರೋಪಿಗಳನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದರು. 

ಘಟನೆ ಬಳಿಕ ವಿಕಾಸ್ ದುಬೆಗಾಗಿ ಪೊಲೀಸರು ತೀವ್ರ ಹುಡುಕಾಟ ನಡೆಸಿದ್ದರು. ಈ ವೇಳೆ ಆತ ಫರೀದಾಬಾದ್'ನ ಹೋಟೆಲ್ ನಲ್ಲಿ ಕಾಣಿಸಿಕೊಂಡಿದ್ದ. ಬಳಿಕ ಪೊಲೀಸರ ಕೈಗೆ ಸಿಗದೆ ದೆಹಲಿಗೆ ಪರಾರಿಯಾಗಿದ್ದ. ಕಾರ್ಯಾಚಱರಣೆ ವೇಳೆ ದುಬೆಯ ಮೂವರು ಸಹಚರರನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದರು. 

ಬಂಧನದ ಬಳಿಕ ಪೊಲೀಸರು ಆರೋಪಿಗಳನ್ನು ಠಾಣೆಗೆ ಕರೆದೊಯ್ಯುವ ವೇಳೆ ವಾಹನದ ಟೈರ್'ನ್ನು ಬದಲಿಸಲು ಮುಂದಾಗಿದ್ದಾರೆ. ಈ ವೇಳೆ ವಾಹನದಲ್ಲಿದ್ದ ಆರೋಪಿ ಪ್ರಭಾತ್ ಮಿಶ್ರಾ ಪೊಲೀಸರ ಪಿಸ್ತೂಲು ಕಸಿದುಕೊಂಡು ಪರಾರಿಯಾಗಲು ಯತ್ನಿಸಿದ್ದ. ಈ ವೇಳೆ ಪೊಲೀಸರು ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದರು. ಬಳಿಕ ಆತನನ್ನು ಆಸ್ಪತ್ರೆಗೆ ಕರೆದೊಯ್ದಿದ್ದರು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಆತ ಮೃತಪಟ್ಟಿದ್ದಾನೆಂದು ಹಿರಿಯ ಪೊಲೀಸ್ ಅಧಿಕಾರಿ ಪ್ರಶಾಂತ್ ಕುಮಾರ್ ಹೇಳಿದ್ದಾರೆ. 

ಈ ನಡುವೆ ಗ್ಯಾಂಗ್'ಸ್ಟರ್ ವಿಕಾಸ್ ದುಬೆ ಸಹಚರನಾಗಿದ್ದ ರಣಬೀರ್ ಅಲಿಯಾಸ್ ಬೌವಾ ದುಬೆಯನ್ನು ಇಂದು ಬೆಳಿಗ್ಗೆ ಎನ್'ಕೌಂಟರ್ ನಲ್ಲಿ ಹತ್ಯೆ ಮಾಡಲಾಗಿದೆ ಎಂದು ತಿಳಿದುಬಂದಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್