ಎನ್ಕೌಂಟರ್ ನಡೆದ ಸ್ಥಳದಲ್ಲಿ ನೆರೆದಿರುವ ಸಾರ್ವಜನಿಕರು 
ದೇಶ

ಅಪಘಾತವನ್ನೇ ಲಾಭವಾಗಿ ಬಳಸಿಕೊಂಡ ವಿಕಾಸ್ ದುಬೆ ಮತ್ತೆ ಗನ್ ಹಿಡಿದ, ಹಾಗಾಗಿ ಎನ್ಕೌಂಟರ್ ಮಾಡಲಾಯಿತು: ಪೊಲೀಸರ ಸ್ಪಷ್ಟನೆ

ಕಾರು ಅಪಘಾತವನ್ನೇ ತನ್ನ ಲಾಭವಾಗಿ ಬಳಸಿಕೊಳ್ಳಲು ಮುಂದಾಗಿದ್ದ ಕುಖ್ಯಾತ ರೌಡಿ ವಿಕಾಸ್ ದುಬೆ ಮತ್ತೆ ಪೊಲೀಸರ ವಿರುದ್ಧ ಗನ್ ಹಿಡಿದಿದ್ದ. ಹೀಗಾಗಿ ಆತ್ಮರಕ್ಷಣೆಗಾಗಿ ನಾವು ಎನ್'ಕೌಂಟರ್ ಮಾಡಿದೆವು ಎಂದು ಪೊಲೀಸರು ಶುಕ್ರವಾರ ಸ್ಪಷ್ಟನೆ ನೀಡಿದ್ದಾರೆ.

ಕಾನ್ಪುರ: ಕಾರು ಅಪಘಾತವನ್ನೇ ತನ್ನ ಲಾಭವಾಗಿ ಬಳಸಿಕೊಳ್ಳಲು ಮುಂದಾಗಿದ್ದ ಕುಖ್ಯಾತ ರೌಡಿ ವಿಕಾಸ್ ದುಬೆ ಮತ್ತೆ ಪೊಲೀಸರ ವಿರುದ್ಧ ಗನ್ ಹಿಡಿದಿದ್ದ. ಹೀಗಾಗಿ ಆತ್ಮರಕ್ಷಣೆಗಾಗಿ ನಾವು ಎನ್'ಕೌಂಟರ್ ಮಾಡಿದೆವು ಎಂದು ಪೊಲೀಸರು ಶುಕ್ರವಾರ ಸ್ಪಷ್ಟನೆ ನೀಡಿದ್ದಾರೆ. 

ಈ ಕುರಿತು ಮಾಹಿತಿ ನೀಡಿರುವ ಕಾನ್ಪುರ ಐಜಿ ಮೋಹಿತ್ ಅಗರ್ವಾಲ್ ಅವರು, ಭಾರೀ ಮಳೆ ಹಿನ್ನೆಲೆಯಲ್ಲಿ ಕಾರು ಮಗುಚಿ ಬಿದ್ದಿತ್ತು. ಪರಿಸ್ಥಿತಿಯ ಲಾಭ ಪಡೆಯಲು ಮುಂದಾಗಿದ್ದ ಆರೋಪಿ ವಿಕಾಸ್ ದುಬೆ, ಗಾಯಗೊಂಡಿದ್ದ ಪೊಲೀಸರ ಬಳಿಯಿದ್ದ ಪಿಸ್ತೂಲನ್ನು ಕಸಿದುಕೊಂಡು ಪರಾರಿಯಾಗಲು ಯತ್ನಿಸಿದ್ದ. ಈ ವೇಳೆ ಹಿಂದಿನ ಕಾರಿನಲ್ಲಿದ್ದ ಪೊಲೀಸರು ಸುತ್ತುವರೆದು ಶರಣಾಗುವಂತೆ ತಿಳಿಸಿದರು. ಇದಕ್ಕೆ ಒಪ್ಪದ ವಿಕಾಸ್ ದುಬೆ ಪೊಲೀಸರ ಮೇಲೆ ಗುಂಡು ಹಾರಿಸಲು ಆರಂಭಿಸಿದ್ದ. ಬೇರೆ ದಾರಿಯಿಲ್ಲದೆ ಆತ್ಮ ರಕ್ಷಣೆಗಾಗಿ ನಾವು ಗುಂಡು ಹಾರಿಸಲೇಬೇಕಾಯಿತು ಎಂದು ಹೇಳಿದ್ದಾರೆ. 

ಗಾಯಗೊಂಡಿದ್ದ ವಿಕಾಸ್ ದುಬೆಯನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ, ಚಿಕಿತ್ಸೆ ನೀಡುವ ಸಂದರ್ಭದಲ್ಲಿಯೇ ಆತ ಸಾವನ್ನಪ್ಪಿದ್ದ ಎಂದು ತಿಳಿಸಿದ್ದಾರೆ. 

ಕಳೆದ ವಾರ ವಿಕಾಸ್ ದುಬೆ 8 ಮಂದಿ ಪೊಲೀಸರ ಹತ್ಯೆ ಮಾಡಿದ್ದ. ಬಳಿಕ ಪೊಲೀಸರ ಕೈಗೆ ಸಿಗದೆ ತಲೆಮರೆಸಿಕೊಂಡಿದ್ದ. ಸುದೀರ್ಘ ಕಾರ್ಯಾಚರಣೆ ಬಳಿಕ ನಿನ್ನೆಯಷ್ಟೇ ಮಧ್ಯಪ್ರದೇಶದ ದೇವಾಲಯವೊಂದರಲ್ಲಿ ಸಿಕ್ಕಿಬಿದ್ದಿದ್ದ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT