ದೇಶ

ಗರ್ಭಿಣಿ ಆನೆ ದುರಂತ ಸಾವು: ಕೇಂದ್ರ, ಕೇರಳ ಸೇರಿ 13 ರಾಜ್ಯಗಳ ಪ್ರತಿಕ್ರಿಯೆ ಕೋರಿದ ಸುಪ್ರೀಂ ಕೋರ್ಟ್

ಕಾಡು ಪ್ರಾಣಿಗಳನ್ನು ಕಾನೂನುಬಾಹಿರ ಮತ್ತು ಅಸಂವಿಧಾನಿಕ ಸಂವಿಧಾನದ 14 ಮತ್ತು 21 ನೇ ವಿಧಿಯನ್ನು ಉಲ್ಲಂಘಿಸಿ ಬೆದರಿಸುವುದು,  ಹತ್ಯೆ ಮಾಡುವುದು, ಅನಾಗರಿಕ ಪದ್ಧತಿಗಳನ್ನು ಪ್ರಶ್ನಿಸಿ ಸಲ್ಲಿಸಿದ ಮನವಿಗೆ ಸುಪ್ರೀಂ ಕೋರ್ಟ್ ಕೇಂದ್ರ, ಕೇರಳ ಮತ್ತು ಇತರ 13 ರಾಜ್ಯಗಳಿಂದ  ಪ್ರತಿಕ್ರಿಯೆ ಕೋರಿದೆ.

ನವದೆಹಲಿ: ಕಾಡು ಪ್ರಾಣಿಗಳನ್ನು ಕಾನೂನುಬಾಹಿರ ಮತ್ತು ಅಸಂವಿಧಾನಿಕ ಸಂವಿಧಾನದ 14 ಮತ್ತು 21 ನೇ ವಿಧಿಯನ್ನು ಉಲ್ಲಂಘಿಸಿ ಬೆದರಿಸುವುದು,  ಹತ್ಯೆ ಮಾಡುವುದು, ಅನಾಗರಿಕ ಪದ್ಧತಿಗಳನ್ನು ಪ್ರಶ್ನಿಸಿ ಸಲ್ಲಿಸಿದ ಮನವಿಗೆ ಸುಪ್ರೀಂ ಕೋರ್ಟ್ ಕೇಂದ್ರ, ಕೇರಳ ಮತ್ತು ಇತರ 13 ರಾಜ್ಯಗಳಿಂದ  ಪ್ರತಿಕ್ರಿಯೆ ಕೋರಿದೆ.

ವಕೀಲರು ಸಲ್ಲಿಸಿದ ಮನವಿಯು ಅಂತಹ ಘಟನೆಗಳನ್ನು ನಿಭಾಯಿಸಲು ನಿಗದಿತ  ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್ ಗಳನ್ನು  ರಚಿಸಲು ಮತ್ತು ದೇಶಾದ್ಯಂತ ಅರಣ್ಯ ಇಲಾಖೆಯಲ್ಲಿನ  ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಮಾರ್ಗಸೂಚಿಗಳನ್ನು ರಚಿಸಲು ಸೂಚಿಸುವಂತೆ ಅರ್ಜಿಯಲ್ಲಿ ಕೋರಿದೆ. ಈ ಸಂಬಂಧ ವಿಚಾರಣೆ ನಡೆಸಿದ್ದ ಸರ್ವೋಚ್ಚ ನ್ಯಾಯಾಲಯದ  ಮುಖ್ಯ ನ್ಯಾಯಮೂರ್ತಿ ಎಸ್ ಎ ಬೊಬ್ಡೆ ಮತ್ತು ನ್ಯಾಯಮೂರ್ತಿಗಳಾದ ಆರ್ ಸುಭಾಷ್ ರೆಡ್ಡಿ ಮತ್ತು ಎ ಎಸ್ ಬೋಪಣ್ಣ ಅವರ ನ್ಯಾಯಪೀಠ ಕೇಂದ್ರ ಮತ್ತು ಕೇರಳ ಸೇರಿದಂತೆ 13 ರಾಜ್ಯಗಳಿಗೆ ನೋಟಿಸ್ ನೀಡಿ ಅವರ ಪ್ರತಿಕ್ರಿಯೆ ಕೋರಿದೆ.

ಕಾಡು ಪ್ರಾಣಿಗಳನ್ನು ಕಾನೂನುಬಾಹಿರ, ಅಸಂವಿಧಾನಿಕ ಮತ್ತು ಸಂವಿಧಾನದ 14 ಮತ್ತು 21 ನೇ ವಿಧಿಗಳ ಉಲ್ಲಂಘನೆಯಾಗುವಂತೆ  ತಡೆಯಲು ಅನಾಗರಿಕ ವಿಧಾನಗಳು / ಬಲೆಗಳು / ದಪ್ಪದ ಕ್ಳು, ದೊಣ್ಣೆಗಳು / ಸ್ಫೋಟಕಗಳನ್ನು ಬಳಸಿ ಬೆದರಿಸುವ , ಕೊಲ್ಲುವ ಅಭ್ಯಾಸವನ್ನು ನಿಷೇಧಿಸಬೇಕೆಂದು ಅರ್ಜಿಯಲ್ಲಿ ಕೋರಲಾಗಿದೆ.

ಅರ್ಜಿದಾರ ಸುಭಾಮ್ ಅವಸ್ಥಿ  ತಮ್ಮ ಮನವಿಯಲ್ಲಿ ಕೇರಳದ ಘಟನೆಯನ್ನು ಉಲ್ಲೇಖಿಸಿದ್ದಾರೆ, ಇತ್ತೀಚೆಗೆ ಗರ್ಭಿಣಿ ಆನೆ ಪಟಾಕಿ ತುಂಬಿದ ಅನಾನಸ್ ತಿಂದ ನಂತರ ಸಾವನ್ನಪ್ಪಿದ್ದು ಇದಲ್ಲದೆ ಕೇರಳ,  ಆಂಧ್ರಪ್ರದೇಶ, ಅಸ್ಸಾಂ, ಛತ್ತೀಸ್ ಘರ್ಜಾರ್ಖಂಡ್, ಕರ್ನಾಟಕ, ಮೇಘಾಲಯ, ನಾಗಾಲ್ಯಾಂಡ್, ಒಡಿಶಾ, ತಮಿಳುನಾಡು, ತ್ರಿಪುರ, ಉತ್ತರಾಖಂಡ್ ಮತ್ತು ಪಶ್ಚಿಮ ಬಂಗಾಳ ಸೇರಿವೆ. ಕಾಡು ಪ್ರಾಣಿಗಳನ್ನು ಬೆದರಿಸಲು  ಬಲೆಗಳನ್ನು ಬಳಸುವ ಅಭ್ಯಾಸ ಇದೆ. ಕೇರಳದಲ್ಲಿ ನಡೆದ ಘಟನೆ ಮತ್ತು ಅದರಂತಹ ನೂರಾರು ಘಟನೆಗಳು ದೇಶದ ವಿವಿಧ ಭಾಗಗಳಲ್ಲಿ ಇಂತಹಾ ಘಟನೆಗಳು ಬೆಳಕಿಗೆ ಬಂದಿದೆ. ಎಂದು ಅವಸ್ಥಿ ಹೇಳಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT