ಸಾಂದರ್ಭಿಕ ಚಿತ್ರ 
ದೇಶ

ಟೊಮೆಟೊ ಬೆಲೆ ದಿಢೀರ್ ಏರಿಕೆ: ಮಹಾನಗರಗಳಲ್ಲಿ ಕಿಲೋಗೆ 70 ರಿಂದ 80 ರೂ.

ಟೊಮೆಟೊ ಬೆಲೆ ನಗರ ಪ್ರದೇಶಗಳಲ್ಲಿ ಕಿಲೋಗೆ 70ರಿಂದ 80 ರೂಪಾಯಿಗಳವರೆಗೆ ಏರಿಕೆಯಾಗಿದೆ. ಈ ಬಾರಿ ಟೊಮೆಟೊ ಬೆಳೆ ಕಡಿಮೆಯಾಗಿರುವುದರಿಂದ ಮತ್ತು ಮಳೆ ಹೆಚ್ಚಾಗಿ ಕೊಳೆತು ಹೋಗಿ ಬೇಗನೆ ಹಾಳಾಗುವುದರಿಂದ ಬೆಲೆ ಹೆಚ್ಚಳವಾಗಿದೆ ಎಂದು ಗ್ರಾಹಕ ವ್ಯವಹಾರಗಳ ಸಚಿವ ರಾಮ್ ವಿಲಾಸ್ ಪಾಸ್ವಾನ್ ತಿಳಿಸಿದ್ದಾರೆ.

ನವದೆಹಲಿ: ಟೊಮೆಟೊ ಬೆಲೆ ನಗರ ಪ್ರದೇಶಗಳಲ್ಲಿ ಕಿಲೋಗೆ 70ರಿಂದ 80 ರೂಪಾಯಿಗಳವರೆಗೆ ಏರಿಕೆಯಾಗಿದೆ. ಈ ಬಾರಿ ಟೊಮೆಟೊ ಬೆಳೆ ಕಡಿಮೆಯಾಗಿರುವುದರಿಂದ ಮತ್ತು ಮಳೆ ಹೆಚ್ಚಾಗಿ ಕೊಳೆತು ಹೋಗಿ ಬೇಗನೆ ಹಾಳಾಗುವುದರಿಂದ ಬೆಲೆ ಹೆಚ್ಚಳವಾಗಿದೆ ಎಂದು ಗ್ರಾಹಕ ವ್ಯವಹಾರಗಳ ಸಚಿವ ರಾಮ್ ವಿಲಾಸ್ ಪಾಸ್ವಾನ್ ತಿಳಿಸಿದ್ದಾರೆ.

ಸಚಿವಾಲಯದ ಇತ್ತೀಚಿನ ಅಂಕಿಅಂಶ ಪ್ರಕಾರ, ಬಹುತೇಕ ಮಹಾನಗರಗಳಲ್ಲಿ ತಿಂಗಳ ಹಿಂದೆ ಕೆಜಿಗೆ 20 ರೂಪಾಯಿಯಿದ್ದ ಟೊಮೆಟೊ ಬೆಲೆ ಈಗ 60 ರೂಪಾಯಿಗೆ ಏರಿಕೆಯಾಗಿದೆ. ಇನ್ನು ಕೆಲವು ಕಡೆಗಳಲ್ಲಿ ಕೆಜಿಗೆ 70ರಿಂದ 80 ರೂಪಾಯಿಗೆ ಏರಿಕೆಯಾಗಿದೆ. ಗುರ್ಗಾಂವ್, ಗ್ಯಾಂಗ್ ಟಾಕ್, ಸಿಲಿಗುರಿ, ರಾಯ್ ಪುರ್ ಗಳಲ್ಲಿ 70 ರೂಪಾಯಿಗಳಿಗೆ ಏರಿಕೆಯಾದರೆ, ಗೋರಖ್ ಪುರ್, ಕೋಟಾ ಮತ್ತು ದಿಮಪುರ್ ಗಳಲ್ಲಿ ಚಿಲ್ಲರೆ ಮಾರುಕಟ್ಟೆಯಲ್ಲಿ ಚೊಮೆಟೊ ಬೆಲೆ ಕೆಜಿಗೆ 80ರೂಪಾಯಿಗಳವರೆಗೆ ಹೋಗಿದೆ.

ಇನ್ನು ಟೊಮೆಟೊ ಹೆಚ್ಚಾಗಿ ಬೆಳೆಯುವ ರಾಜ್ಯಗಳಾದ ಹೈದರಾಬಾದ್ ನಲ್ಲಿ ಕೆಜಿ ಟೊಮೆಟೊ ಬೆಲೆ 37 ರೂಪಾಯಿಯಿದ್ದರೆ ಚೆನ್ನೈಯಲ್ಲಿ 40 ರೂಪಾಯಿ, ಬೆಂಗಳೂರಿನಲ್ಲಿ 46 ರೂಪಾಯಿಯಿದೆ.

ಸಾಮಾನ್ಯವಾಗಿ ಜುಲೈಯಿಂದ ಸೆಪ್ಟೆಂಬರ್ ವರೆಗೆ ಟೊಮೆಟೊ ಬೆಲೆ ತೀವ್ರ ಮಳೆಯಿರುವಾಗ ಹೆಚ್ಚಾಗುತ್ತದೆ. ಟೊಮೆಟೊ ಬೇಗನೆ ಹಾಳಾಗುವ ತರಕಾರಿಯಾಗಿರುವುದರಿಂದ ಮಳೆಗೆ ಕೊಳೆತು ಹೋಗುವುದರಿಂದ ಮತ್ತು ಕಡಿಮೆ ಇಳುವರಿಯಾಗುವುದರಿಂದ ಈ ಸಮಯದಲ್ಲಿ ಬೆಲೆ ಹೆಚ್ಚಾಗುತ್ತದೆ ಎಂದರು.

ಮಾರುಕಟ್ಟೆಗೆ ಪೂರೈಕೆ ಹೆಚ್ಚಾದಾಗ ಟೊಮೆಟೊ ಬೆಲೆ ನಿಯಂತ್ರಣಕ್ಕೆ ಬರಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT