ವಿಕಾಸ್ ದುಬೆ ಎನ್ ಕೌಂಟರ್ ಕುರಿತು ಹಲವು ಪ್ರಶ್ನೆಗಳು ಮೂಡುವಂತೆ ಮಾಡುತ್ತಿದೆ ಈ ವಿಡಿಯೋ! 
ದೇಶ

ವಿಕಾಸ್ ದುಬೆ ಎನ್ ಕೌಂಟರ್ ಕುರಿತು ಹಲವು ಪ್ರಶ್ನೆಗಳು ಮೂಡುವಂತೆ ಮಾಡುತ್ತಿದೆ ಈ ವಿಡಿಯೋ!

ಉತ್ತರ ಪ್ರದೇಶದಲ್ಲಿ ನಡೆದ ವಿಕಾಸ್ ದುಬೆ ಎನ್ ಕೌಂಟರ್ ಪ್ರಕರಣವನ್ನು ಹಲವು ರಾಜಕಾರಣಿಗಳು ಪ್ರಶ್ನಿಸುತ್ತಿದ್ದಾರೆ. ಈ ನಡುವೆ ಬಹಿರಂಗಗೊಂಡ ವಿಡಿಯೋ ಒಂದು ಸಾರ್ವಜನಿಕರಲ್ಲೂ ಹಲವು ಪ್ರಶ್ನೆಗಳು ಮೂಡುವಂತೆ ಮಾಡುತ್ತಿದೆ.

ಲಖನೌ: ಉತ್ತರ ಪ್ರದೇಶದಲ್ಲಿ ನಡೆದ ವಿಕಾಸ್ ದುಬೆ ಎನ್ ಕೌಂಟರ್ ಪ್ರಕರಣವನ್ನು ಹಲವು ರಾಜಕಾರಣಿಗಳು ಪ್ರಶ್ನಿಸುತ್ತಿದ್ದಾರೆ. ಈ ನಡುವೆ ಬಹಿರಂಗಗೊಂಡ ವಿಡಿಯೋ ಒಂದು ಸಾರ್ವಜನಿಕರಲ್ಲೂ ಹಲವು ಪ್ರಶ್ನೆಗಳು ಮೂಡುವಂತೆ ಮಾಡುತ್ತಿದೆ.

ಕಾನ್ಪುರದಲ್ಲಿ ಪೊಲೀಸ್ ಸಿಬ್ಬಂದಿಗಳ ಮಾರಣಹೋಮಕ್ಕೆ ಕಾರಣವಾಗಿದ್ದ ವಿಕಾಸ್ ದುಬೆಯನ್ನು ಬಂಧಿಸಿ ಪೊಲೀಸ್ ಕಾವಲಿನಲ್ಲಿ  ಕರೆದೊಯ್ಯುತ್ತಿದ್ದಾಗ ಜು.10 ರಂದು ಬೆಳಿಗ್ಗೆ ಎನ್ ಕೌಂಟರ್ ಮಾಡಲಾಗಿದೆ. 

ವಿಕಾಸ್ ದುಬೆಯನ್ನು ಕರೆದೊಯ್ಯುತ್ತಿದ್ದ ಕಾರು ಪಲ್ಟಿಯಾಯಿತು. ಈ ವೇಳೆ ವಿಕಾಸ್ ದುಬೆ ಪೊಲೀಸರ ಬಳಿ ಇದ್ದ ಗನ್ ನ್ನು ಕಸಿದುಕೊಂಡು ಪರಾರಿಯಾಗಲು ಯತ್ನಿಸಿದ. ಪೊಲೀಸರು ಆತನನ್ನು ಸುತ್ತುವರೆದು ಶರಣಾಗುವಂತೆ ಎಚ್ಚರಿಸಿದರಾದರೂ ಆತ ಪೊಲೀಸರ ಮೇಲೆ ಗುಂಡು ಹಾರಿಸಲು ಯತ್ನಿಸಿದ. ಈ ವೇಳೆ ದುಬೆಯನ್ನು ಎನ್ ಕೌಂಟರ್ ಮಾಡಬೇಕಾಗಿ ಬಂತು ಎಂದು ಪೊಲೀಸರು ಹೇಳಿದ್ದಾರೆ. ಆದರೆ ಎನ್ ಕೌಂಟರ್ ಗೂ ಅರ್ಧ ಗಂಟೆ ಮುನ್ನ ಚಿತ್ರೀಕರಿಸಿರುವ ವಿಡಿಯೋದಲ್ಲಿ, ವಿಕಾಸ್ ದುಬೆಯನ್ನು ಕರೆದೊಯ್ಯುತ್ತಿದ್ದ ಕಾರ್ ನ್ನು ಹಿಂಬಾಲಿಸುವುದಕ್ಕೆ  ಮಾಧ್ಯಮ ಸಿಬ್ಬಂದಿಗಳಿಗೆ ನಿರ್ಬಂಧ ವಿಧಿಸಿರುವುದು ಬೆಳಕಿಗೆ ಬಂದಿದೆ.

ಇದನ್ನೇ ಪ್ರತಿಪಕ್ಷಗಳ ನಾಯಕರೂ ಸಹ ಪ್ರಶ್ನಿಸುತ್ತಿದ್ದು, ಎನ್ ಕೌಂಟರ್ ಗೆ ಸಂಬಂಧಿಸಿದಂತೆ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT