ದೇಶ

ಅಭಿವೃದ್ಧಿ ಹೊಂದಿದ ರಾಷ್ಟ್ರಗಳೊಂದಿಗೆ ನಿಲ್ಲಲು ಭಾರತ ಜನಸಂಖ್ಯೆ ನಿಯಂತ್ರಣ ಕಾನೂನನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು!

Manjula VN

ನವದೆಹಲಿ: ಅಭಿವೃದ್ಧಿ ಹೊಂದಿದ ರಾಷ್ಟ್ರಗಳೊಂದಿಗೆ ನಿಲ್ಲಬೇಕೆಂದರೆ ಭಾರತ ಜನಸಂಖ್ಯೆ ನಿಯಂತ್ರಣ ಕಾನೂನನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕೆಂದು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಅವರು ಶನಿವಾರ ಹೇಳಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಭಾರತದಲ್ಲಿ ಜನಸಂಖ್ಯೆ ಹೆಚ್ಚಾಗುತ್ತಿರುವದು ಕಠಿಣ ಸವಾಲಾಗಿ ಪರಿಣಮಿಸಿದೆ. ಅಭಿವೃದ್ಧಿ ರಾಷ್ಟ್ರಗಳ ಜೊತೆಗೆ ನಿಲ್ಲಬೇಕೆಂದರೆ, ಭಾರತ ಕಟ್ಟುನಿಟ್ಟಿನ ಕಾನೂನನ್ನು ಜಾರಿಗೆ ತರಬೇಕು ಎಂದು ಹೇಳಿದ್ದಾರೆ. 

ಕಟ್ಟುನಿಟ್ಟಿನ ಕಾನೂನನ್ನು ಎಲ್ಲಾ ಜಾತಿ ಧರ್ಮದವರಿಗೂ ಯಾವುದೇ ತಾರತಮ್ಯವಿಲ್ಲದೆ ಅನ್ವಯಿಸುತ್ತದೆ. ಇದನ್ನು ಎಲ್ಲರೂ ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ತಿಳಿಸಿದ್ದಾರೆ. 

SCROLL FOR NEXT