ಅಮಿತಾಭ್ ಬಚ್ಚನ್ 
ದೇಶ

ಅಮಿತಾಭ್ ಬಚ್ಚನ್ ಆರೋಗ್ಯವಾಗಿದ್ದಾರೆ, ಸೌಮ್ಯ ಲಕ್ಷಣಗಳು ಕಂಡು ಬಂದಿದೆ: ಆಸ್ಪತ್ರೆಯ ವೈದ್ಯರು

ಕೊರೋನಾ ಸೋಂಕಿಗೊಳಗಾಗಿರುವ ಬಾಲಿವುಡ್ ಸೂಪರ್ ಸ್ಟಾರ್ ಆರೋಗ್ಯ ಸ್ಥಿರವಾಗಿದ್ದು, ಸೌಮ್ಯ ಲಕ್ಷಣಗಳು ಕಂಡು ಬಂದಿವೆ ಎಂದು ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದಾರೆ. 

ಮುಂಬೈ: ಕೊರೋನಾ ಸೋಂಕಿಗೊಳಗಾಗಿರುವ ಬಾಲಿವುಡ್ ಸೂಪರ್ ಸ್ಟಾರ್ ಆರೋಗ್ಯ ಸ್ಥಿರವಾಗಿದ್ದು, ಸೌಮ್ಯ ಲಕ್ಷಣಗಳು ಕಂಡು ಬಂದಿವೆ ಎಂದು ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದಾರೆ. 

ಕೊರೋನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಅಮಿತಾಭ್ ಹಾಗೂ ಅಭಿಷೇಕ್ ಬಚ್ಚನ್ ಇಬ್ಬರನ್ನೂ ಮುಂಬೈನ ನಾನಾವತಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. 

ಇದೀಗ ಆಸ್ಪತ್ರೆಯ ಸಾರ್ವಜನಿಕ ಸಂಪರ್ಕ ಅಧಿಕಾರಿಗಳು ಮಾಹಿತಿ ನೀಡಿದ್ದು, ಅಮಿತಾಭ್ ಬಚ್ಚನ್ ಅವರ ಆರೋಗ್ಯ ಸ್ಥಿರವಾಗಿದೆ. ಸೌಮ್ಯ ಲಕ್ಷಣಗಳಷ್ಟೇ ಕಂಡು ಬಂದಿದೆ. ಪ್ರಸ್ತುತ ಆಸ್ಪತ್ರೆಯ ಐಸೋಲೇಷನ್ ಘಟದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ತಿಳಿದುಬಂದಿದೆ ಎಂದು ಹೇಳಿದ್ದಾರೆ. 

ಶನಿವಾರ ರಾತ್ರಿ 10.30ರ ವೇಳೆಗೆ ಅಮಿತಾಭ್ ಅವರಿಗೆ ಕೊರೋನಾ ವೈರಸ್ ಇದೆ ಎಂಬ ಸುದ್ದಿ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದಂತೆಯೇ ಅಭಿಮಾನಿಗಳಲ್ಲಿ ಆತಂಕ ಮೂಡಿಸಿತ್ತು. ಬಳಿಕ ಕೆಲವೇ ಕ್ಷಣಗಳಲ್ಲಿ ಸ್ವತಃ ಟ್ವೀಟ್ ಮಾಡಿದ್ದ ಅಮಿತಾಭ್ ಬಚ್ಚನ್ ಅವರು ಕೊರೋನಾ ಇರುವುದನ್ನು ದೃಢಪಟಿಸಿದ್ದರು. 

ನನಗೆ ಕೊರೋನಾ ಪಾಸಿಟಿವ್ ಬಂದಿದೆ. ಆಸ್ಪತ್ರೆಗೆ ದಾಖಲಾಗಿದ್ದೇನೆ. ಅಧಿಕಾರಿಗಳಿಗೆ ಆಸ್ಪತ್ರೆ ಸಿಬ್ಬಂದಿ ಮಾಹಿತಿ ನೀಡುತ್ತಿದ್ದಾರೆ. ಕುಟುಂಬ ಹಾಗೂ ಸಿಬ್ಬಂದಿ ಕೂಡ ಪರೀಕ್ಷೆಗೆ ಒಳಗಾಗಿದ್ದಾರೆ. ಅವರ ವರದಿಗಾಗಿ ಗಾಯುತ್ತಿದ್ದೇವೆ. ಕಳೆದ 10 ದಿನಗಳಿಂದ ನನ್ನ ಸಂಪರ್ಕದಲ್ಲಿದ್ದವರು ಪರೀಕ್ಷೆಗೆ ಒಳಗಾಗಬೇಕೆಂದು ಮನವಿ ಮಾಡಿಕೊಳ್ಳುತ್ತೇನೆಂದು ಹೇಳಿದ್ದರು. 

ಇನ್ನು ಬಚ್ಚನ್ ಅವರಿಕೆ ಕೊರೋನಾ ಸೋಂಕು ದೃಢಪಡುತ್ತಿರುವ ಸುದ್ದಿ ತಿಳಿಯುತ್ತಿದ್ದಂತೆಯೇ ಅಭಿಮಾನಿಗಳು ಹಾಗೂ ಚಿತ್ರೋದ್ಯಮಕ್ಕೆ ಆಘಾತವಾಂತಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT