ಎಸ್ ಜೈಶಂಕರ್ 
ದೇಶ

ಸೇನಾಪಡೆ ಹಿಂಪಡೆಯುವ ಪ್ರಕ್ರಿಯೆ ಪ್ರಗತಿಯಲ್ಲಿದೆ: ವಿದೇಶಾಂಗ ಸಚಿವ ಎಸ್ ಜೈಶಂಕರ್

ಪೂರ್ವ ಲಡಾಕ್ ನಲ್ಲಿ ಗಡಿ ವಾಸ್ತವ ರೇಖೆಯಲ್ಲಿ ಸೇನಾಪಡೆಯನ್ನು ಹಿಂತೆಗೆದುಕೊಂಡು ಗಡಿಯಲ್ಲಿನ ಉದ್ವಿಗ್ನ ಸ್ಥಿತಿಯನ್ನು ಕಡಿಮೆ ಮಾಡಲು ಭಾರತ ಮತ್ತು ಚೀನಾ ದೇಶಗಳು ಪ್ರಯತ್ನ ಮುಂದುವರಿಸಿದೆ.

ನವದೆಹಲಿ: ಪೂರ್ವ ಲಡಾಕ್ ನಲ್ಲಿ ಗಡಿ ವಾಸ್ತವ ರೇಖೆಯಲ್ಲಿ ಸೇನಾಪಡೆಯನ್ನು ಹಿಂತೆಗೆದುಕೊಂಡು ಗಡಿಯಲ್ಲಿನ ಉದ್ವಿಗ್ನ ಸ್ಥಿತಿಯನ್ನು ಕಡಿಮೆ ಮಾಡಲು ಭಾರತ ಮತ್ತು ಚೀನಾ ದೇಶಗಳು ಪ್ರಯತ್ನ ಮುಂದುವರಿಸಿದೆ.

ಈ ಮಧ್ಯೆ ಗಡಿಯಲ್ಲಿ ಸೇನಾಪಡೆಯನ್ನು ನಿಷ್ಕ್ರಿಯಗೊಳಿಸುವಿಕೆ ಮತ್ತು ಉದ್ವಿಗ್ನ ಪರಿಸ್ಥಿತಿಯನ್ನು ತಗ್ಗಿಸುವ ಪ್ರಕ್ರಿಯೆಯನ್ನು ಉಭಯ ದೇಶಗಳು ಮಾಡುತ್ತಿದ್ದು ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ತಿಳಿಸಿದ್ದಾರೆ.

ಗಡಿ ವಾಸ್ತವ ರೇಖೆಯಲ್ಲಿ ಎರಡೂ ಕಡೆಯ ಸೇನಾಪಡೆಗಳು ಬಹಳ ಹತ್ತಿರದಲ್ಲಿರುವುದರಿಂದ ಅವುಗಳನ್ನು ಹಿಂತೆಗೆದುಕೊಳ್ಳಲು ನಾವು ಮಾತುಕತೆ ನಡೆಸುತ್ತಿದ್ದು, ಅದಕ್ಕೆ ಚೀನಾ ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದೆ ಎಂದು ಇಂಡಿಯಾ ಗ್ಲೋಬಲ್ ವೀಕ್ ಸಂವಾದದಲ್ಲಿ ಹೇಳಿದರು.

ಮಾತುಕತೆ ಆರಂಭವಾಗಿ ಸೇನಾಪಡೆಯನ್ನು ಹಿಂತೆಗೆದುಕೊಳ್ಳುವ ಕಾರ್ಯ ಆರಂಭವಾಗಿದೆಯಷ್ಟೆ. ಕೆಲಸ ಪ್ರಗತಿಯಲ್ಲಿದೆ. ಈ ಸಂದರ್ಭದಲ್ಲಿ ನಾನು ಹೆಚ್ಚಿಗೆ ಏನೂ ಹೇಳಲು ಬಯಸುವುದಿಲ್ಲ ಎಂದಿದ್ದಾರೆ.

ಯುದ್ಧ, ಘರ್ಷಣೆ ಮಾಡದೆ ಶಾಂತಿ, ಭಾತೃತ್ವ ಕಾಪಾಡುವ ನಿಟ್ಟಿನಲ್ಲಿ ಗಡಿಯಲ್ಲಿ ಸಂಪೂರ್ಣ ಶಾಂತಿ ನೆಲೆಸಲು ಪೂರ್ವ ಲಡಾಕ್ ನಲ್ಲಿ ಸೇನಾಪಡೆಗಳನ್ನು ಸಂಪೂರ್ಣವಾಗಿ ಹಿಂತೆಗೆದುಕೊಳ್ಳುವ ಬಗ್ಗೆ ಭಾರತ ಮತ್ತು ಚೀನಾ ಮತ್ತೊಂದು ಸುತ್ತಿನ ರಾಜತಾಂತ್ರಿಕ ಮಾತುಕತೆಗಳನ್ನು ನಡೆಸಿವೆ. ಇದಾದ ಬಳಿಕ ಜೈಶಂಕರ್ ಈ ಹೇಳಿಕೆ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಅಂಧ ಕರ್ನಾಟಕದ ಆಟಗಾರ್ತಿಯರಿಗೆ ತಲಾ 10 ಲಕ್ಷ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ, ಹೇಗೆ ನೆರವೇರಿಸಿದ್ರು?ಈ ಅದ್ಭುತ Video ನೋಡಿ..

ಬರವಣಿಗೆಯಲ್ಲಿ ಖುಷಿ ಕಂಡ ಪೊಲೀಸ್ ಅಧಿಕಾರಿ: 'ಬಸವಣ್ಣನ ವಚನ' ಗಳನ್ನು ಇಂಗ್ಲೀಷ್ ಗೆ ಅನುವಾದ ಮಾಡ್ತಿರೋ DYSP ಬಸವರಾಜ್ ಯಲಿಗಾರ್!

SCROLL FOR NEXT