ದೇಶ

ಗುಜರಾತ್‌: ಭಾವನಗರದ ಸಿಹೋರ್‌ನಲ್ಲಿ ಅಂಬೇಡ್ಕರ್ ಪ್ರತಿಮೆ ಅಪವಿತ್ರ

Nagaraja AB

ಭಾವನಗರ: ಗುಜರಾತ್ ರಾಜ್ಯದ ಭಾವನಗರ ಜಿಲ್ಲೆಯ ಸಿಹೋರ್ ಪಟ್ಟಣದಲ್ಲಿ ಸೋಮವಾರ ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆಯನ್ನು ದುಷ್ಕರ್ಮಿಗಳು ಅಪವಿತ್ರಗೊಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಯಾರೊ ದುಷ್ಕರ್ಮಿಗಳು ಅಂಬೇಡ್ಕರ್ ಪ್ರತಿಮೆಗೆ ಬಕೆಟ್ ಹಾಕಿ, ಅದರ ಹತ್ತಿರ ಮದ್ಯದ ಖಾಲಿ ಬಾಟಲಿ ಇಟ್ಟಿದ್ದರು. ಸೋಮವಾರ ಮಧ್ಯರಾತ್ರಿಯಿಂದ ಬೆಳಗ್ಗೆ 8 ಗಂಟೆಯ ನಡುವಣ ಈ ಕೃತ್ಯವೆಸಗಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸುತ್ತಮುತ್ತಲಿನ ಜನರು ಬೆಳಿಗ್ಗೆ ಸಿಹೋರ್ ಪೊಲೀಸ್ ಠಾಣೆಯನ್ನು ಸಂಪರ್ಕಿಸಿ ದ ನಂತರ ಪ್ರತಿಮೆಯನ್ನು ಅಪವಿತ್ರಗೊಳಿಸಿದ್ದಕ್ಕಾಗಿ 
ಐಸಿಸಿ ಸೆಕ್ಷನ್ 295 ರ ಅಡಿಯಲ್ಲಿ ಅಪರಿಚಿತರ ವಿರುದ್ಧ ಪ್ರಕರಣ ಎಫ್ ಐಆರ್ ದಾಖಲಿಸಲಾಗಿದೆ ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ. ನಂತರ ಜನರು ಪ್ರತಿಮೆಯನ್ನು ಸ್ವಚ್ಛಗೊಳಿಸಿದ್ದಾರೆ.

SCROLL FOR NEXT