ಔಷಧ ಕಾರ್ಖಾನೆ ಸ್ಫೋಟ 
ದೇಶ

ವಿಶಾಖಪಟ್ಟಣದಲ್ಲಿ ಮತ್ತೊಂದು ದುರಂತ: ಔಷಧಿ ತಯಾರಿಕಾ ಘಟಕದಲ್ಲಿ ಸ್ಫೋಟ; ಓರ್ವನಿಗೆ ಗಾಯ

ಆಂಧ್ರಪ್ರದೇಶದ ವಿಶಾಖಪಟ್ಟಣಂನ ಪರವಾಡ ಬಳಿ ಇರುವ ಜೆ.ಎನ್‌ ಫಾರ್ಮಾ ಸಿಟಿಯಲ್ಲಿರುವ ಔಷಧ ತಯಾರಕ ಘಟಕದಲ್ಲಿ ಸೋಮವಾರ ಬೃಹತ್‌ ಸ್ಫೋಟ ಸಂಭವಿಸಿದ್ದು, ಕಾರ್ಮಿಕರೊಬ್ಬರು ಗಾಯಗೊಂಡಿದ್ದಾರೆ.

ವಿಶಾಖಪಟ್ಟಣ: ಆಂಧ್ರಪ್ರದೇಶದ ವಿಶಾಖಪಟ್ಟಣಂನ ಪರವಾಡ ಬಳಿ ಇರುವ ಜೆ.ಎನ್‌ ಫಾರ್ಮಾ ಸಿಟಿಯಲ್ಲಿರುವ ಔಷಧ ತಯಾರಕ ಘಟಕದಲ್ಲಿ ಸೋಮವಾರ ಬೃಹತ್‌ ಸ್ಫೋಟ ಸಂಭವಿಸಿದ್ದು, ಕಾರ್ಮಿಕರೊಬ್ಬರು ಗಾಯಗೊಂಡಿದ್ದಾರೆ.

ಸ್ಫೋಟ ಸಂಭವಿಸಿದಾಗ ಘಟಕದಲ್ಲಿ  ಒಟ್ಟು ಆರು ಕಾರ್ಮಿಕರಿದ್ದು ಉಳಿದ ಐವರು ಆಶ್ಚರ್ಯಕರ ರೀತಿಯಲ್ಲಿ ಪಾರಾಗಿದ್ದಾರೆ. ಕೆಲ ತಿಂಗಳ ಹಿಂದೆ ಎಲ್‌ಜಿ ಪಾಲಿಮರ್ಸ್ ಕೈಗಾರಿಕೆಯಿಂದ  ವಿಷಾನಿಲ ಸೋರಿಕೆಯಾಗಿ ಹಲವರು ಮೃತಪಟ್ಟ ಘಟನೆ ಹಸಿರಾಗಿರುವಾಗಲೇ ನಡದಿರುವ ಘಟನೆಯು ಪರವಾಡಾ ಪ್ರದೇಶದ ನಿವಾಸಿಗಳಲ್ಲಿ ಆತಂಕ ಉಂಟುಮಾಡಿದೆ.

ಕೈಗಾರಿಕೆಯಲ್ಲಿ ಮೊದಲು ಸ್ಫೋಟ ಸಂಭವಿಸಿದೆ,  ಸುಮಾರು 15 ಬಾರಿ ಸ್ಫೋಟದ ಸದ್ದು ಕೇಳಿಸಿದೆ. ಸಾಗರ ತ್ಯಾಜ್ಯ ನಿರ್ವಹಣೆ ಮಾಡಲಾಗುವ ರಾಮ್‌ಕಿ ದ್ರಾವಕಗಳ ಘಟಕದಲ್ಲಿ ಸ್ಫೋಟ ಸಂಭವಿಸಿದೆ ಎಂದು ಮೂಲಗಳು ತಿಳಿಸಿವೆ. ಭಾರಿ ಪ್ರಮಾಣದ ಬೆಂಕಿಯನ್ನು ನಂದಿಸಲು ಮತ್ತು ಸುತ್ತಮುತ್ತಲಿನ ಇತರ ಔಷಧ ಕಾರ್ಖಾನೆಗಳಿಗೆ ಬೆಂಕಿ ಹರಡದಂತೆ ತಡೆಯಲು 10 ಅಗ್ನಿಶಾಮಕ ವಾಹನಗಳನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ ಎಂದು ವಿಶಾಖಪಟ್ಟಣಂ ಜಿಲ್ಲಾಧಿಕಾರಿ ವಿ ವಿನಯ್ ಚಂದ್ ತಿಳಿಸಿದ್ದಾರೆ.

ಪೊಲೀಸರು, ಅಗ್ನಿಶಾಮಕ ಸೇವೆಗಳು ಮತ್ತು ಆರೋಗ್ಯ ಅಧಿಕಾರಿಗಳು ಕಟ್ಟೆಚ್ಚರದಿಂದ ಇರುವಂತೆ ಮತ್ತು ಯಾವುದೇ ಪ್ರಾಣಹಾನಿ ಸಂಭವಿಸದಂತೆ ನೋಡಿಕೊಳ್ಳುವಂತೆ ವಿಶಾಖಪಟ್ಟಣ ನಗರ ಪೊಲೀಸ್ ಆಯುಕ್ತ ರಾಜೀವ್ ಕುಮಾರ್ ಮೀನಾ ಹೇಳಿದ್ದಾರೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

ಗಡಿಯಲ್ಲಿ ಕಟ್ಟುನಿಟ್ಟಿನ ಕ್ರಮ: 15 ಕಿ.ಮೀ. ಒಳಗಿನ ಅಕ್ರಮ ನಿರ್ಮಾಣ ಕೆಡವಲು ಅಮಿತ್ ಶಾ ಸೂಚನೆ

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

SCROLL FOR NEXT