ಪಿಣರಾಯಿ ವಿಜಯನ್ 
ದೇಶ

ಕೇರಳದಲ್ಲಿ ಮತ್ತೆ ಕೊರೋನಾರ್ಭಟ; ಇಂದು 623 ಹೊಸ ಸೋಂಕು ಪ್ರಕರಣಗಳು ಪತ್ತೆ

ದೇಶದಲ್ಲಿ ಮೊದಲ ಬಾರಿಗೆ ಕೊರೋನಾ ವೈರಸ್ ಕಾಣಿಸಿಕೊಂಡ ಕೇರಳದಲ್ಲಿ ಇಂದು ಮತ್ತೆ ಹೊಸದಾಗಿ 623 ಮಂದಿಯಲ್ಲಿ ಕೊರೋನಾ ವೈರಸ್ ಒಕ್ಕರಿಸಿದೆ.

ಕೊಚ್ಚಿ: ದೇಶದಲ್ಲಿ ಮೊದಲ ಬಾರಿಗೆ ಕೊರೋನಾ ವೈರಸ್ ಕಾಣಿಸಿಕೊಂಡ ಕೇರಳದಲ್ಲಿ ಇಂದು ಮತ್ತೆ ಹೊಸದಾಗಿ 623 ಮಂದಿಯಲ್ಲಿ ಕೊರೋನಾ ವೈರಸ್ ಒಕ್ಕರಿಸಿದೆ.

ಹೌದು.. ಕೇರಳದಲ್ಲಿ ಕೊರೋನಾ ವೈರಸ್ 2ನೇ ಹಂತದ ಆರ್ಭಟ ಆರಂಭಿಸಿದೆಯೇ ಎಂಬ ಅನುಮಾನ ಹುಟ್ಟಿಕೊಂಡಿದ್ದು, ಇದಕ್ಕೆ ಕಾರಣ ಇತ್ತೀಚೆಗೆ ಕೇರಳದಲ್ಲಿ ಪತ್ತೆಯಾಗುತ್ತಿರುವ ಕೊರೋನಾ ಸೋಂಕಿತರ ಸಂಖ್ಯೆ. ಈ ಹಿಂದೆ ಕೊರೋನಾ ವೈರಸ್ ಅನ್ನು ಸಂಪೂರ್ಣವಾಗಿ ನಿಯಂತ್ರಣಕ್ಕೆ ತಂದಿದ್ದ ಕೇರಳದಲ್ಲಿ ಮತ್ತೆ ನಿಧಾನವಾಗಿ ಕೊರೋನಾ ವೈರಸ್ ಆರ್ಭಟ ಆರಂಭಿಸಿದೆ.

ಇಂದು ಒಂದೇ ದಿನ ಕೇರಳದಲ್ಲಿ ಹೊಸದಾಗಿ 623 ಮಂದಿಯಲ್ಲಿ ಕೊರೋನಾ ವೈರಸ್ ಒಕ್ಕರಿಸಿದೆ. ಆ ಮೂಲಕ ಕೇರಳದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 9553ಕ್ಕೆ ಏರಿಕೆಯಾಗಿದೆ. ಈ ಪೈಕಿ 157 ಪ್ರಕರಣಗಳು ತಿರುವನಂತಪುರಂ ನಿಂದಲೇ ವರದಿಯಾಗಿದೆ. ಇನ್ನು ಕೇರಳದಲ್ಲಿ ಒಟ್ಟಾರೆ 4880 ಸಕ್ರಿಯ ಪ್ರಕರಣಗಳಿದ್ದು, 4,673 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT