ಪಿಣರಾಯಿ ವಿಜಯನ್ 
ದೇಶ

ಕೇರಳದಲ್ಲಿ ಮತ್ತೆ ಕೊರೋನಾರ್ಭಟ; ಇಂದು 623 ಹೊಸ ಸೋಂಕು ಪ್ರಕರಣಗಳು ಪತ್ತೆ

ದೇಶದಲ್ಲಿ ಮೊದಲ ಬಾರಿಗೆ ಕೊರೋನಾ ವೈರಸ್ ಕಾಣಿಸಿಕೊಂಡ ಕೇರಳದಲ್ಲಿ ಇಂದು ಮತ್ತೆ ಹೊಸದಾಗಿ 623 ಮಂದಿಯಲ್ಲಿ ಕೊರೋನಾ ವೈರಸ್ ಒಕ್ಕರಿಸಿದೆ.

ಕೊಚ್ಚಿ: ದೇಶದಲ್ಲಿ ಮೊದಲ ಬಾರಿಗೆ ಕೊರೋನಾ ವೈರಸ್ ಕಾಣಿಸಿಕೊಂಡ ಕೇರಳದಲ್ಲಿ ಇಂದು ಮತ್ತೆ ಹೊಸದಾಗಿ 623 ಮಂದಿಯಲ್ಲಿ ಕೊರೋನಾ ವೈರಸ್ ಒಕ್ಕರಿಸಿದೆ.

ಹೌದು.. ಕೇರಳದಲ್ಲಿ ಕೊರೋನಾ ವೈರಸ್ 2ನೇ ಹಂತದ ಆರ್ಭಟ ಆರಂಭಿಸಿದೆಯೇ ಎಂಬ ಅನುಮಾನ ಹುಟ್ಟಿಕೊಂಡಿದ್ದು, ಇದಕ್ಕೆ ಕಾರಣ ಇತ್ತೀಚೆಗೆ ಕೇರಳದಲ್ಲಿ ಪತ್ತೆಯಾಗುತ್ತಿರುವ ಕೊರೋನಾ ಸೋಂಕಿತರ ಸಂಖ್ಯೆ. ಈ ಹಿಂದೆ ಕೊರೋನಾ ವೈರಸ್ ಅನ್ನು ಸಂಪೂರ್ಣವಾಗಿ ನಿಯಂತ್ರಣಕ್ಕೆ ತಂದಿದ್ದ ಕೇರಳದಲ್ಲಿ ಮತ್ತೆ ನಿಧಾನವಾಗಿ ಕೊರೋನಾ ವೈರಸ್ ಆರ್ಭಟ ಆರಂಭಿಸಿದೆ.

ಇಂದು ಒಂದೇ ದಿನ ಕೇರಳದಲ್ಲಿ ಹೊಸದಾಗಿ 623 ಮಂದಿಯಲ್ಲಿ ಕೊರೋನಾ ವೈರಸ್ ಒಕ್ಕರಿಸಿದೆ. ಆ ಮೂಲಕ ಕೇರಳದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 9553ಕ್ಕೆ ಏರಿಕೆಯಾಗಿದೆ. ಈ ಪೈಕಿ 157 ಪ್ರಕರಣಗಳು ತಿರುವನಂತಪುರಂ ನಿಂದಲೇ ವರದಿಯಾಗಿದೆ. ಇನ್ನು ಕೇರಳದಲ್ಲಿ ಒಟ್ಟಾರೆ 4880 ಸಕ್ರಿಯ ಪ್ರಕರಣಗಳಿದ್ದು, 4,673 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT