ಸಂಜಯ್ ಝಾ 
ದೇಶ

ಪಕ್ಷ ವಿರೋಧಿ ಚಟುವಟಿಕೆ: ಕಾಂಗ್ರೆಸ್ ನಿಂದ ಸಂಜಯ್ ಝಾ ಉಚ್ಚಾಟನೆ

ರಾಜಸ್ಥಾನದಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಹಿನ್ನಲೆಯಲ್ಲಿ ಸಚಿನ್ ಪೈಲಟ್ ವಿರುದ್ಧ ಕಠಿಣ ಕ್ರಮ ಕೈಗೊಂಡಿರುವ ಮಹಾರಾಷ್ಟ್ರ ಕಾಂಗ್ರೆಸ್ ಮತ್ತೊಬ್ಬ ಕೈ ಮುಖಂಡ ಸಂಜಯ್ ಝಾ ಅವರನ್ನು ಪಕ್ಷದಿಂದ ಉಚ್ಛಾಟಿಸಿದೆ.

ಮುಂಬಯಿ: ರಾಜಸ್ಥಾನದಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಹಿನ್ನಲೆಯಲ್ಲಿ ಸಚಿನ್ ಪೈಲಟ್ ವಿರುದ್ಧ ಕಠಿಣ ಕ್ರಮ ಕೈಗೊಂಡಿರುವ ಮಹಾರಾಷ್ಟ್ರ ಕಾಂಗ್ರೆಸ್ ಮತ್ತೊಬ್ಬ ಕೈ ಮುಖಂಡ ಸಂಜಯ್ ಝಾ ಅವರನ್ನು ಪಕ್ಷದಿಂದ ಉಚ್ಛಾಟಿಸಿದೆ.

ತಕ್ಷಣವೇ ಜಾರಿಗೆ ಬರುವಂತೆ ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ಬಾಳಸಾಹೇಬ್ ಠ್ರೋಟ್ ಆದೇಶ ಹೊರಡಿಸಿದ್ದಾರೆ. ಪಕ್ಷ ವಿರೋಧಿ ಚಟುವಟಿಕೆ ಹಾಗೂ ಶಿಸ್ತು ನಿಯಮ ಉಲ್ಲಂಘನೆ ಕಾರಣಕ್ಕೆ ಮಹಾರಾಷ್ಟ್ರದ ಸಂಜಯ್ ಝಾ ಅವರನ್ನ ಉಚ್ಛಾಟಿಸಲಾಗಿದೆ. ಮಹಾರಾಷ್ಟ್ರ ಘಟಕದ  ಕಾಂಗ್ರೆಸ್ ಪಕ್ಷ ನಿನ್ನೆ ಮಂಗಳವಾರ ಈ ಶಿಸ್ತಿನ ಕ್ರಮ ಕೈಗೊಂಡಿರುವುದನ್ನ ಟ್ವೀಟ್ ಮಾಡಿದೆ.

ಸಚಿನ್ ಪೈಲಟ್ ಅವರನ ನಡೆಯನ್ನು ಝಾ ಸಮರ್ಥಿಸಿಕೊಂಡಿದ್ದರು, ಹಾಗೂ ಟಿವಿ ಚಾನಲ್ ನಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದರು. ಮಾರ್ಚ್ ತಿಂಗಳಲ್ಲಿ ಸಂಜಯ್ ಝಾ ಅವರು ಪಕ್ಷದ ಬಗ್ಗೆ ಕಟು ಟೀಕೆ ಮಾಡಿ ಪತ್ರಿಕೆಯೊಂದರಲ್ಲಿ ಲೇಖನ ಬರೆದಿದ್ದರು. ಹೀಗಾಗಿ ಅವರನ್ನು ಪಕ್ಷದ ಹುದ್ದೆಯಿಂದ ಅಮಾನತು ಮಾಡಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT