ಸಂಜಯ್ ಝಾ 
ದೇಶ

ನನ್ನ ನಿಷ್ಠೆ ಕಾಂಗ್ರೆಸ್ ಸಿದ್ಧಾಂತಕ್ಕೆ, ಯಾವುದೇ ವ್ಯಕ್ತಿ, ಕುಟುಂಬಕ್ಕೆ ಅಲ್ಲ: ಗಾಂಧಿ ಕುಟುಂಬದ ವಿರುದ್ಧ ಸಂಜಯ್ ಜಾ ವಾಗ್ದಾಳಿ

ನನ್ನ ನಿಷ್ಠೆ ಕಾಂಗ್ರೆಸ್ ಸಿದ್ಧಾಂತಕ್ಕೆ, ಯಾವುದೇ ವ್ಯಕ್ತಿ ಅಥವಾ ಕುಟುಂಬಕ್ಕೆ ಅಲ್ಲ ಎಂದು ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ಕಾಂಗ್ರೆಸ್ ನಿಂದ ಉಚ್ಟಾಟನೆಗೊಂಡಿರುವ ಸಂಜಯ್ ಜಾ ಅವರು ಗಾಂಧಿ ಕುಟುಂಬದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಮುಂಬೈ: ನನ್ನ ನಿಷ್ಠೆ ಕಾಂಗ್ರೆಸ್ ಸಿದ್ಧಾಂತಕ್ಕೆ, ಯಾವುದೇ ವ್ಯಕ್ತಿ ಅಥವಾ ಕುಟುಂಬಕ್ಕೆ ಅಲ್ಲ ಎಂದು ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ಕಾಂಗ್ರೆಸ್ ನಿಂದ ಉಚ್ಟಾಟನೆಗೊಂಡಿರುವ ಸಂಜಯ್ ಜಾ ಅವರು ಗಾಂಧಿ ಕುಟುಂಬದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ವಿರುದ್ಧ ಬಂಡಾಯವೆದ್ದು ಉಪ ಮುಖ್ಯಮಂತ್ರಿ ಸ್ಥಾನದಿಂದ ವಜಾಗೊಂಡಿರುವ ಸಚಿನ್ ಪೈಲಟ್ ಶ್ರಮವನ್ನು ಶ್ಲಾಘಿಸಿದ್ದ ಸಂಜಯ್ ಜಾ ಅವರನ್ನು ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಹಾಗೂ ಶಿಸ್ತು ಉಲ್ಲಂಘಿಸಿದ ಆರೋಪದ ಮೇಲೆ ಪಕ್ಷದಿಂದ ಉಚ್ಚಾಟಿಸಲಾಗಿದೆ.

ಕಾಂಗ್ರೆಸ್ ನಿಂದ ಉಚ್ಚಾಟನೆಗೊಂಡ ನಂತರ ಗಾಂಧಿ ಕುಟುಂಬದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಉದ್ಯಮಿ ಹಾಗೂ ರಾಜಕಾರಣಿ ಸಂಜಯ್ ಜಾ ಅವರು, ಯುದ್ಧ ಈಗ ಆರಂಭವಾಗಿದೆ ಎಂದು ಹೇಳಿದ್ದಾರೆ.

"ಕಾಂಗ್ರೆಸ್ ಸಿದ್ಧಾಂತಕ್ಕೆ ನಾನು ನಿಷ್ಠನಾಗಿದ್ದೇನೆ. ನನ್ನ ನಿಷ್ಠೆಯು ಯಾವುದೇ ವ್ಯಕ್ತಿ ಅಥವಾ ಕುಟುಂಬಕ್ಕೆ ಅಲ್ಲ. ನಾನು ಗಾಂಧಿ-ನೆಹರೂ ಆದರ್ಶವಾದಿಯಾಗಿ ಉಳಿದಿದ್ದೇನೆ.ನನ್ನ ಪಕ್ಷದ ಪುನರುತ್ಥಾನಕ್ಕೆ ಮೂಲಭೂತವಾದ ವಿಷಯಗಳನ್ನು ಪ್ರಸ್ತಾಪಿಸುವುದನ್ನು ನಾನು ಮುಂದುವರಿಸುತ್ತೇನೆ. ಯುದ್ಧ ಈಗ ಪ್ರಾರಂಭವಾಗಿದೆ" ಎಂದು ಸಂಜಯ್ ಜಾ ಇಂದು ಟ್ವೀಟ್ ಮಾಡಿದ್ದಾರೆ.

ಇದಕ್ಕು ಮುನ್ನ "ಐದು ವರ್ಷಗಳ ಕಾಲ ಅಂದರೆ 2013-18ರ ನಡುವೆ ಸಚಿನ್ ಪೈಲಟ್ ಕಾಂಗ್ರೆಸ್ ಪಕ್ಷಕ್ಕೆ ತಮ್ಮ ರಕ್ತ, ಕಣ್ಣೀರು, ಶ್ರಮ ಮತ್ತು ಬೆವರು ನೀಡಿದ್ದಾರೆ. ಕಾಂಗ್ರೆಸ್ 21 ಸ್ಥಾನಗಳಿಂದ 100 ಕ್ಕೆ ಮರಳಿತು. ನಾವು ಅವರ ಕಾರ್ಯಕ್ಷಮತೆಗೆ ಬೋನಸ್ ನೀಡಿದ್ದೇವೆ. ನಾವು ತುಂಬಾ ಅರ್ಹರು. ನಾವು ತುಂಬಾ ಪಾರದರ್ಶಕವಾಗಿದ್ದೇವೆ. " ಎಂದು ಅಸಮಾಧಾನದಿಂದ ಸಂಜಯ್ ಜಾ ಟ್ವೀಟ್ ಮಾಡಿದ್ದರು.

ಈ ವರ್ಷದ ಜೂನ್‌ನಲ್ಲಿ, ಜಾ ಅವರನ್ನು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್(ಐಎನ್‌ಸಿ)ಯ ಅಧಿಕೃತ ವಕ್ತಾರ ಸ್ಥಾನದಿಂದಲೂ ತೆಗೆದುಹಾಕಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

GBA ಆಯ್ತು.. ಈಗ ಗ್ರೇಟರ್ ಮೈಸೂರು ಸಿಟಿ ಕಾರ್ಪೋರೇಷನ್ ಗೆ ಸಂಪುಟ ಅನುಮೋದನೆ!

'ಮಾತು' ಜಗತ್ತಿಗೆ ಉತ್ತಮವಾಗದ ಹೊರತು ಅದು ಶಕ್ತಿಯಲ್ಲ; ಡಿಕೆಶಿ ಪೋಸ್ಟ್​​ಗೆ CM ಸಿದ್ದರಾಮಯ್ಯ ಕೌಂಟರ್

ಮಹಿಳೆಗೆ ಕಚ್ಚಿದ ನಾಯಿ, ಪ್ರಶ್ನೆ ಮಾಡಿದ ಸಂತ್ರಸ್ಥೆಗೆ ಮಾಲಕಿ ಕಪಾಳಮೋಕ್ಷ, Video Viral

ಸಂಸತ್ತಿನಲ್ಲಿ 'ವಂದೇ ಮಾತರಂ', 'ಜೈ ಹಿಂದ್' ಘೋಷಣೆಗಳಿಗೆ ಆಕ್ಷೇಪಣೆ ಯಾಕೆ?: ಬಿಜೆಪಿ ಪ್ರಶ್ನಿಸಿದ ಕಾಂಗ್ರೆಸ್

ಯುದ್ಧ ಸಾರಿದ ನ್ಯೂಜಿಲೆಂಡ್, 25 ಲಕ್ಷ Stone Cold Killers ನಿರ್ಮೂಲನೆ ಮಾಡುವ ಶಪಥ!

SCROLL FOR NEXT